ಚಿನ್ನಾಭರಣ ಕಳ್ಳತನ: ಆರೋಪಿಗಳ ಬಂಧನ

KannadaprabhaNewsNetwork |  
Published : Jun 22, 2025, 11:48 PM IST
ಪೋಟೋ. 22ಎಚ್ ಎಚ್ ಆರ್ ಪಿ 1.ಅರದೋಟ್ಲು ಗ್ರಾಮದಲ್ಲಿ ದೋಚಿದ್ದ ಚಿನ್ನಾಭರಣಗಳನ್ನು ಪೋಲೀಸರು ವಶಪಡಿಸಿಕೊಂಡರು. | Kannada Prabha

ಸಾರಾಂಶ

ಸಮೀಪದ ಅರದೋಟ್ಲು ಗ್ರಾಮದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಬಂದಿಸುವಲ್ಲಿ ಪಟ್ಟಣದ ಪೋಲೀಸರು ಯಶಸ್ವಿಯಾಗಿದ್ದಾರೆ.

ಹೊಳೆಹೊನ್ನೂರು: ಸಮೀಪದ ಅರದೋಟ್ಲು ಗ್ರಾಮದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಬಂದಿಸುವಲ್ಲಿ ಪಟ್ಟಣದ ಪೋಲೀಸರು ಯಶಸ್ವಿಯಾಗಿದ್ದಾರೆ. ಅರದೋಟ್ಲು ಗ್ರಾಮದ ಚಂದ್ರಕಲಾ ಎಂಬುವರ ಮನೆಯಲ್ಲಿ ಜೂನ್ 16ರ ಸೋಮವಾರದಂದು ಕಳ್ಳತನವಾಗಿದೆ ಎಂದು ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೋಲೀಸರು ಚನ್ನಗಿರಿಯ ಅಪ್ರೋಜ್ ಅಹಮದ್ ಎಂಬ ಆರೋಪಿಯನ್ನು ಬಂದಿಸಿ 66 ಗ್ರಾಂ ಚಿನ್ನ, 113 ಗ್ರಾಂ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಐ ಲಕ್ಷ್ಮೀಪತಿ, ಸಿಬ್ಬಂದಿಗಳಾದ ಅಣ್ಣಪ್ಪ, ಪ್ರಸನ್ನ, ಮಂಜುನಾಥ್, ಪ್ರಕಾಶ್ ನಾಯ್ಕ್, ಕುಮಾರ್ ಮತ್ತು ವಿಶ್ವನಾಥ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ
ನಾಳೆ ಸಿದ್ದರಾಮಯ್ಯ ಬಜೆಟ್‌ : ವಲಯವಾರು ನಿರೀಕ್ಷೆಗಳೇನು?