ಕುಶಾಲನಗರದಲ್ಲಿ ಉದ್ಯೋಗ ಮೇಳ ಚಿಂತನೆ: ಡಾ. ಮಂತರ್‌ ಗೌಡ

KannadaprabhaNewsNetwork |  
Published : Aug 12, 2026, 03:00 AM IST
ಯುವ ನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ಕಾರ್ಯಾಗಾರ | Kannada Prabha

ಸಾರಾಂಶ

ಯುವ ಜನತೆಗೆ ಸ್ಥಳದಲ್ಲೇ ಉದ್ಯೋಗ ಸೃಷ್ಟಿಸುವ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡುವ ಚಿಂತನೆ ಹಮ್ಮಿಕೊಳ್ಳಲಾಗಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.

ಕುಶಾಲನಗರ: ಯುವ ಜನತೆಗೆ ಸ್ಥಳದಲ್ಲೇ ಉದ್ಯೋಗ ಸೃಷ್ಟಿಸುವ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡುವ ಚಿಂತನೆ ಹಮ್ಮಿಕೊಳ್ಳಲಾಗಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.

ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಆಶ್ರಯದಲ್ಲಿ ಕುಶಾಲನಗರ ತಾಲೂಕು ಕಾರ್ಯನಿರ್ವಾಹಕ ಕಚೇರಿ ಹಾಗೂ ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಚಿಕ್ಕ ಅಳುವಾರದಲ್ಲಿರುವ ಕೊಡಗು ವಿವಿ ಸಭಾಂಗಣದಲ್ಲಿ ಮಂಗಳವಾರ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಯುವ ನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ಕಾರ್ಯಾಗಾರ ಉದ್ಘಾಟಿಸಿದ ಶಾಸಕ ‌ಡಾ. ಮಂತರ್ ಗೌಡ ಮಾತನಾಡಿ, ಯುವ ಜನಾಂಗದ ಮೇಲೆ ದೇಶದ ಅಭಿವೃದ್ಧಿ ನಿಂತಿದೆ. ಹೊಸ ತಂತ್ರಜ್ಞಾನ, ಆಧುನಿಕತೆ ಬದಲಾದಂತೆ ಪ್ರತಿಯೊಬ್ಬರೂ ತಮ್ಮ ಕಾರ್ಯಯೋಜನೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಕೃಷಿಯಲ್ಲೂ ಕೂಡ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.ಕೊಡಗು ಜಿಲ್ಲೆಗೆ ಹೊಟೇಲ್ ಮ್ಯಾನೇಜ್‌ಮೆಂಟ್ ಕೋರ್ಸ್‌ ತರಬೇಕು ಎಂಬ ಚಿಂತನೆ ಇದೆ. ಈಗ ಜಿಲ್ಲೆಯಲ್ಲಿರುವ ಬಹುತೇಕ ಹೊಟೇಲ್‌ಗಳಲ್ಲಿ ಹೊರ ರಾಜ್ಯದವರು ಕೆಲಸ‌ ಮಾಡುತ್ತಿದ್ದಾರೆ. ಆದ್ದರಿಂದ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಿಕೊಡುವ ಉದ್ದೇಶದಿಂದ ಹೊಟೇಲ್ ಮೆನೇಜ್‌ಮೆಂಟ್ ಕೋರ್ಸ್‌ ಅಗತ್ಯವಾಗಿದೆ ಎಂದರು.

ಕೊಡಗು ವಿವಿ ಕುಲಪತಿ ಡಾ. ಅಶೋಕ್‌ ಸಂಗಪ್ಪ ಅಲೂರ ಮಾತನಾಡಿ, ವಿದ್ಯಾವಂತ ನಿರುದ್ಯೋಗಿ ಯುವಜನರು ಉದ್ಯೋಗ ಹುಡುಕಿಕೊಂಡು ಅಲೆಯುವ ಬದಲು ಉದ್ಯೋಗಗಳನ್ನು ಸೃಷ್ಟಿಸುವಂತ ಸೃಷ್ಟಿಕರ್ತ ಆಗಬೇಕು ಎಂದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ನಿರುದ್ಯೋಗ ವಿದ್ಯಾವಂತ ಯುವಜನರಿಗೆ ಉದ್ಯೋಗ ಕಲ್ಪಿಸಿಕೊಡಬೇಕು. ಜೊತೆಗೆ ಅರ್ಥಪೂರ್ಣ ಬದುಕು ಕಟ್ಟಿಕೊಡಬೇಕು ಎಂಬ ಉದ್ದೇಶದಿಂದ ಕೌಶಲ್ಯ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಹುತೇಕ ಫಲಾನುಭವಿಗಳಿಗೆ ಮಾರ್ಗದರ್ಶನದ ಕೊರತೆ ಎದುರಾಗಿದ್ದು, ಈ ನಿಟ್ಟಿನಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕೊಡಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಶಿಕ್ಷಣ ತಜ್ಞ ಬೆಂಗಳೂರಿನ ಎ.ಎಚ್. ಸಾಗರ್ ಅವರು ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ ಮತ್ತು ತಾರ್ಕಿಕ ಉದ್ಯಮ ಶೀಲತೆ ಅಭಿವೃದ್ಧಿ ಕುರಿತು ಯುವ ಜನರೊಂದಿಗೆ ಸಂವಾದ ನಡೆಸಿದರು.ಸಂಪನ್ಮೂಲ ವ್ಯಕ್ತಿ ಡಿ.ಕೆ. ಮಹೇಶ್ ಕುಮಾರ್ ಪದವಿಧರರಿಗೆ ವೃತ್ತಿ ಜೀವನ. ಉದ್ಯೋಗಾವಕಾಶಗಳು, ಉದ್ಯಮಶೀಲತೆ ಮತ್ತು ಉನ್ನತ ಶಿಕ್ಷಣ ಕುರಿತು ವಿಶೇಷ ಉಪನ್ಯಾಸ ನೀಡಿದರು.ಕೊಡಗು ವಿವಿ ಪರೀಕ್ಷಾಂಗ ಕುಲಸಚಿವ ಪೊ. ಎಂ. ಸುರೇಶ್, ತಾಪಂ ಕಾರ್ಯನಿರ್ವಾಣಾಧಿಕಾರಿ ಕೆ.ಸಿ. ಅಪ್ಪಣ್ಣ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ. ಭೀಮಯ್ಯ,ಕೆಪಿಸಿಸಿ ಸದಸ್ಯ ಎಚ್.ಕೆ. ನಟೇಶ್ ಗೌಡ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಅಧಿಕಾರಿ ಸಿ.ಬಿ. ಮಂಜುನಾಥ್, ಸಹಾಯಕ ಅಧಿಕಾರಿ ಮದನ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಸದಸ್ಯ ಮಲ್ಲಿಕಾರ್ಜುನ, ಎಂ. ಕಿಶೋರ್, ರಫಿಕ್, ಕೃಷ್ಣೇಗೌಡ, ರಾಜಶೇಖರ್, ಅಬ್ದುಲ್ ರಜಾಕ್, ಶ್ರೀನಿವಾಸ್, ವಿವೇಕಾನಂದ, ಎಂ.ಎ. ಆದಂ, ಪ್ರಮುಖರಾದ ನಟೇಶ್ ಗೌಡ ಮತ್ತಿತರರು ಇದ್ದರು.

ಶಾಸಕ ಡಾ. ಮಂತರ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಸೇರಿದಂತೆ ಗಣ್ಯರನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಶಾಲನಗರ: ಪ್ರಬಂಧ, ಚಿತ್ರಕಲೆ ಸ್ಪರ್ಧೆ ಕಾರ್ಯಕ್ರಮ
(ಬಾಟಂ) ಮಹಿಳೆಯರ ಸಾಧನೆ ವಿಶ್ವಕ್ಕೆ ಪಸರಿಸಲಿ: ಹರಪನಹಳ್ಳಿ ರವೀಂದ್ರ