ವಿದ್ಯಾರ್ಥಿಗಳಿಗೆ ಮಾಧ್ಯಮ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ: ಶ್ರೀರಾಜ್ ಗುಡಿ

KannadaprabhaNewsNetwork |  
Published : Jul 11, 2024, 01:30 AM IST
ಗುಡಿ10 | Kannada Prabha

ಸಾರಾಂಶ

ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮಾಧ್ಯಮ ಕ್ಷೇತ್ರದಲ್ಲಿ ಸಾವಿರಾರು ಉದ್ಯೋಗ ಅವಕಾಶಗಳಿವೆ ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಕೋಟ

ಮಾಧ್ಯಮ ಕ್ಷೇತ್ರ ಎನ್ನುವುದು ಕೇವಲ ದೂರದರ್ಶನ, ಪತ್ರಿಕೆಗಳಿಗೆ ಸೀಮಿತವಾಗಿಲ್ಲ. ಇದನ್ನು ಹೊರತುಪಡಿಸಿ ಸಿನಿಮಾ, ಜಾಹೀರಾತು, ಅನಿಮೇಷನ್ ಮೊದಲಾದ ವಿಭಾಗದಲ್ಲಿ ಹತ್ತಾರು ಕೋರ್ಸ್‌ಗಳಿದೆ. ಸಾವಿರಾರು ಉದ್ಯೋಗವಕಾಶಗಳಿವೆ ಎಂದು ಮಣಿಪಾಲ ಸ್ಕೂಲ್ ಆಫ್ ಕಮ್ಯುನಿಕೇಶನ್ ನ ಉಪನ್ಯಾಸಕ ಶ್ರೀರಾಜ್ ಗುಡಿ ಹೇಳಿಸಿದರು.

ಅವರು ಬುಧವಾರ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಮಾಧ್ಯಮ ಕ್ಷೇತ್ರದ ಅವಕಾಶಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ಮಾಧ್ಯಮವನ್ನು ಕೇವಲ ಕಾಮಾಲೆ ಕಣ್ಣಿನಿಂದ ನೋಡಿ ಬಯ್ಯುವ ಮನಃಸ್ಥಿತಿ ದೂರ ಮಾಡಿಕೊಂಡು, ಇಲ್ಲಿರುವ ಉತ್ತಮ ಅವಕಾಶಗಳನ್ನು ಸ್ವೀಕರಿಸಬೇಕು ಎಂದರು.

ಹೊಳ್ಳರಿಗೆ ಗೌರವ ಸನ್ಮಾನ: ಈ ಸಂದರ್ಭ ಹಿರಿಯ ಪತ್ರಕರ್ತ ಕೋಟ ರಂಗಪ್ಪಯ್ಯ ಹೊಳ್ಳ ಅವರಿಗೆ ಪತ್ರಿಕಾ ದಿನಾಚರಣೆ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು. ಕೋಟ ವಿವೇಕ ಪಪೂ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ ಸಮ್ಮಾನ ನೆರವೇರಿಸಿದರು.

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಮಾತನಾಡಿ, ಮಾಧ್ಯಮ ಕ್ಷೇತ್ರದಲ್ಲೂ ನೂರಾರು ಕಷ್ಟ-ನಷ್ಟಗಳಿದೆ. ಆದರೆ ಟೀಕೆ ಮಾಡುವವರಿಗೆ

ಮಾಧ್ಯಮದ ಕೆಟ್ಟ ಅಂಶಗಳು ಮಾತ್ರ ಸಿಗುತ್ತದೆ ಹೊರತು ಒಳ್ಳೆಯ ವಿಚಾರಗಳು ಸಿಗುವುದಿಲ್ಲ. ಯಾವುದೇ ಕ್ಷೇತ್ರವಿದ್ದರು ಒಳಿತು-ಕೆಡುಕು ಎರಡನ್ನು ವಿಮರ್ಶೆ ಮಾಡಬೇಕು ಎಂದರು. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಘದ ಆಡಳಿತ ಮಂಡಳಿ ಸದಸ್ಯ ಚಿತ್ತೂರು ಪ್ರಭಾಕರ ಆಚಾರ್ಯ, ಪತ್ರಕರ್ತರಾದ ರವೀಂದ್ರ ಕೋಟ, ಕೆ.ಜಿ.ವೈದ್ಯ, ಇಬ್ರಾಹಿಂ ಸಾಹೇಬ್, ಪ್ರವೀಣ್ ಮುದ್ದೂರು, ಆದಿತ್ಯ ಮೊದಲಾದವರಿದ್ದರು.

ಸಂಘದ ಸದಸ್ಯ ಮೋಹನ ಉಡುಪ ಸ್ವಾಗತಿಸಿದರು. ವಸಂತ್ ಗಿಳಿಯಾರು ಪ್ರಾಸ್ತಾವಿಕ

ಮಾತನಾಡಿದರು. ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಹರೀಶ್ ಕಿರಣ್ ತುಂಗ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೇಮಕಾತಿ ಪ್ರಕ್ರಿಯೆ ಇನ್ನು ಸುಗಮ-ಒಳಮೀಸಲು ಬಿಲ್‌ಗೆ ಕೊನೆಗೂ ಗೌರ್ನರ್‌ ಗೆಹಲೋತ್‌ ಅಂಕಿತ
ಡಿಕೆಶಿ ಬಣದ 18 ಶಾಸಕರು, ಸಚಿವರಿಂದ ಡಿನ್ನರ್‌ ಪಾರ್ಟಿ