ಪಿ.ಎ. ಎಂಜಿನಿಯರಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

KannadaprabhaNewsNetwork |  
Published : Sep 03, 2026, 03:00 AM IST
ಸಮಾರಂಭ | Kannada Prabha

ಸಾರಾಂಶ

: ಪದವಿ ಪಡೆದ ಪ್ರತಿಯೊಬ್ಬರೂ ಉದ್ಯೋಗ ಹುಡುಕುವವರಾಗುವ ಬದಲು, ತಮ್ಮ‌ ಅರ್ಹತೆ, ಸಾಮರ್ಥ್ಯದಿಂದ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಿ ರೂಪುಗೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಗುರಿ ಹೊಂದಬೇಕು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ವಿದ್ಯಾಶಂಕರ್ ಎಸ್ ಅವರು ಹೇಳಿದರು.

ಉಳ್ಳಾಲ: ಪದವಿ ಪಡೆದ ಪ್ರತಿಯೊಬ್ಬರೂ ಉದ್ಯೋಗ ಹುಡುಕುವವರಾಗುವ ಬದಲು, ತಮ್ಮ‌ ಅರ್ಹತೆ, ಸಾಮರ್ಥ್ಯದಿಂದ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಿ ರೂಪುಗೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಗುರಿ ಹೊಂದಬೇಕು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ವಿದ್ಯಾಶಂಕರ್ ಎಸ್ ಅವರು ಹೇಳಿದರು.

ಅವರು ಶನಿವಾರ ನಡುಪದವಿನ ಪಿ.ಎ. ಕಾಲೇಜ್ ಆಫ್ ಎಂಜಿನಿಯರಿಂಗ್‌ ಕಾಲೇಜಿನ ಪದವಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದರು.ನೊವಿಗೋ ಸೊಲ್ಯೂಷನ್ಸ್ ಸಿಇಒ ಮೊಹಮ್ಮದ್ ಹನೀಫ್ ಮುಖ್ಯ ಅತಿಥಿಯಾಗಿ ಮಾತನಾಡಿ, ಆಯಾ ಕಾಲಘಟ್ಟಕ್ಕೆ ಪೂರಕವಾಗಿ ನಮ್ಮ ಭವಿಷ್ಯದ ಬಗ್ಗೆ ಧನಾತ್ಮಕ ಚಿಂತನೆಯನ್ನು ಬೆಳೆಸಿಕೊಂಡು ಮುನ್ನಡೆದರೆ ಅನೇಕ ಅವಕಾಶಗಳು ಒದಗಿ ಬರುತ್ತವೆ ಎಂದರು. ‌

ಪಿಎ ಎಜ್ಯುಕೇಶನಲ್ ಟ್ರಸ್ಟ್ ನ ಹಣಕಾಸು ಅಧಿಕಾರಿ ಅಹ್ಮದ್ ಕುಟ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡೀನ್ ಡಾ.ಸಯ್ಯದ್ ಅಮೀನ್ ಅಹ್ಮದ್ ಅವರು ಶೈಕ್ಷಣಿಕ ಸಾಧಕರ ಪಟ್ಟಿ ವಾಚಿಸಿದರು. ಪ್ರಾಂಶುಪಾಲ ಡಾ.ರಮೀಸ್ ಎಂ.ಕೆ. ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ವಿಧಿ ಬೋಧಿಸಿದರು.

ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಇಸ್ಮಾಯಿಲ್ ಶಾಫಿ ಸ್ವಾಗತಿಸಿದರು. ಉಪಪ್ರಾಂಶುಪಾಲೆ ಡಾ.ಶರ್ಮಿಳಾ ಕುಮಾರಿ ಎಂ.ಅವರು ವಂದಿಸಿದರು. ಪ್ರೊ.ಫಾತಿಮತ್ ರೈಹಾನ್ ಹಾಗೂ ವಿಯೋಲ ಇಶ್ಮಿತ ಲೋಬೋ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಕ್ರಮವಿಲ್ಲ
ಅಭಿವೃದ್ಧಿ ಪ್ರವರ್ತಕ ಮುರುಗೇಶ ನಿರಾಣಿಗೆ 61ರ ಸಂಭ್ರಮ