ಜೋಡಿ ರೈಲು ಮಾರ್ಗ ಕಾಮಗಾರಿ: ರೈಲುಗಳ ಸಂಚಾರ ಬದಲಾವಣೆ

KannadaprabhaNewsNetwork |  
Published : Feb 12, 2025, 12:33 AM IST
5454 | Kannada Prabha

ಸಾರಾಂಶ

ಫೆ. 17ರಿಂದ 25ರ ವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ವಿಜಯಪುರ ಪ್ಯಾಸೆಂಜರ್ ವಿಶೇಷ ರೈಲು(06919), ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ವಿಶೇಷ ರೈಲು (06920) ವಿಜಯಪುರದ ಬದಲು ಬಾಗಲಕೋಟೆಯಿಂದ ಪ್ರಾರಂಭವಾಗಲಿದೆ.

ಹುಬ್ಬಳ್ಳಿ:

ಮುಗಳೊಳ್ಳಿ-ಜಡ್ರಾಮಕುಂಟಿ- ಆಲಮಟ್ಟಿ ನಿಲ್ದಾಣಗಳ ನಡುವೆ ಜೋಡಿ ರೈಲು ಮಾರ್ಗದ ಕಾಮಗಾರಿ ಕೈಗೊಂಡಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗುತ್ತಿದೆ.

ಫೆ. 17ರಿಂದ 25ರ ವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಸೊಲ್ಲಾಪುರ ಡೈಲಿ ಪ್ಯಾಸೆಂಜರ್ (56906), ಫೆ. 18ರಿಂದ 26ರ ವರೆಗೆ ಸೊಲ್ಲಾಪುರ- ಧಾರವಾಡ ಡೈಲಿ ಪ್ಯಾಸೆಂಜರ್ ಸ್ಪೆಷಲ್, ಫೆ. 25ರಂದು ಸೊಲ್ಲಾಪುರ-ಹೊಸಪೇಟೆ ಡೈಲಿ ಎಕ್ಸ್‌ಪ್ರೆಸ್ (11415) ಮತ್ತು ಫೆ. 26 ರಂದು ಹೊಸಪೇಟೆ-ಸೊಲ್ಲಾಪುರ ಡೈಲಿ ಎಕ್ಸ್‌ಪ್ರೆಸ್ (11416) ರೈಲುಗಳ ಪ್ರಯಾಣವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ರೈಲುಗಳ ಸಂಚಾರ ಭಾಗಶಃ ರದ್ದು:

ಫೆ. 17ರಿಂದ 25ರ ವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ವಿಜಯಪುರ ಪ್ಯಾಸೆಂಜರ್ ವಿಶೇಷ ರೈಲು(06919), ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ವಿಶೇಷ ರೈಲು (06920) ವಿಜಯಪುರದ ಬದಲು ಬಾಗಲಕೋಟೆಯಿಂದ ಪ್ರಾರಂಭವಾಗಲಿದೆ.

ನಿಲುಗಡೆ ರದ್ದು:

ಫೆ. 20ರಿಂದ 24ರ ವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಹೈದರಾಬಾದ್ ಡೈಲಿ ಎಕ್ಸ್‌ಪ್ರೆಸ್ ( ರೈಲು ಸಂಖ್ಯೆ- 17319) , ಹೈದರಾಬಾದ್-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ (17320), ಫೆ. 23ರಿಂದ ಬನಾರಸ್-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್‌ಪ್ರೆಸ್ (17324), ಫೆ. 21ರಿಂದ 25ರ ವರೆಗೆ ಹೊಸಪೇಟೆ-ಸೊಲ್ಲಾಪುರ ಡೈಲಿ ಎಕ್ಸ್‌ಪ್ರೆಸ್(11416), ಫೆ. 21ರಿಂದ 25ರ ವರೆಗೆ ವಿಜಯಪುರ-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಇಂಟರ್‌ಸಿಟಿ ವಿಶೇಷ ಎಕ್ಸ್‌ಪ್ರೆಸ್ (07330), ಸೊಲ್ಲಾಪುರ- ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ (56905), ಎಸ್‌ಎಸ್‌ಎಸ್ ಹುಬ್ಬಳ್ಳಿ-ವಿಜಯಪುರ ಡೈಲಿ ಇಂಟರ್‌ಸಿಟಿ ವಿಶೇಷ ಎಕ್ಸ್‌ಪ್ರೆಸ್(07329), ಧಾರವಾಡ- ಸೊಲ್ಲಾಪುರ ಡೈಲಿ ಪ್ಯಾಸೆಂಜರ್ (07322), ಫೆ. 21ರಿಂದ ಎಸ್‌ಎಸ್‌ಎಸ್ ಹುಬ್ಬಳ್ಳಿ-ಬನಾರಸ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (17323) ರೈಲುಗಳ ನಿಲುಗಡೆ ರದ್ದುಗೊಳಿಸಲಾಗಿದೆ.

ಫೆ. 19ರಿಂದ 25ರ ವರೆಗೆ ಹೊಸಪೇಟೆ-ಸೊಲ್ಲಾಪುರ ಡೈಲಿ ಎಕ್ಸ್ ಪ್ರೆಸ್ (11416), ಸೊಲ್ಲಾಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ (56905), ಧಾರವಾಡ-ಸೊಲ್ಲಾಪುರ ಡೈಲಿ ಪ್ಯಾಸೆಂಜರ್ ಸ್ಪೆಷಲ್ (07322) ರೈಲುಗಳು ಜಡ್ರಾಮಕುಂಟಿ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''