ಕನ್ನಡಪ್ರಭ ವಾರ್ತೆ ಮದ್ದೂರು
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬಾಲಕಾರ್ಮಿಕ ವಿರೋಧಿ ದಿನ ಉದ್ಘಾಟಿಸಿ ಮಾತನಾಡಿ, ಬಡತನ, ಆರ್ಥಿಕ ಸಂಕಷ್ಟ, ಕುಟುಂಬದ ಪರಿಸ್ಥಿತಿಯಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವ ಬದಲು ದುಡಿಮೆಗೆ ತಳ್ಳುತ್ತಿರುವ ಉದಾಹರಣೆಗಳು ಸಾಕಷ್ಟಿವೆ ಎಂದರು.
ಪ್ರತಿಯೊಂದು ಮಗು ಶಿಕ್ಷಣ ಪಡೆಯಲು, ಆಟವಾಡಲು ಮತ್ತು ಸುರಕ್ಷಿತ ವಾತಾವರಣದಲ್ಲಿ ಬೆಳೆಯುವ ಹಕ್ಕನ್ನು ಸಂವಿಧಾನ ಮತ್ತು ಕಾನೂನು ಮೂಲಕ ನೀಡಲಾಗಿದೆ. ಆದರೆ, ಎಲ್ಲಾ ಕಾಯ್ದೆಗಳು ಕೇವಲ ಪುಸ್ತಕಕ್ಕೆ ಮಾತ್ರ ಸೀಮಿತವಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.ಸಹಾಯಕ ಸರ್ಕಾರಿ ಅಭಿಯೋಜಕ ಪ್ರೀತಮ್ ಡೇವಿಡ್ ಮಾತನಾಡಿ, ವಿಶ್ವದಲ್ಲಿ ಸುಮಾರು 10 ಮಕ್ಕಳಲ್ಲಿ ಒಂದು ಮಗು ಬಾಲಕಾರ್ಮಿಕ ಪದ್ಧತಿಗೆ ಒಳಗಾಗುತ್ತಿದೆ. ಇವರಲ್ಲಿ ಕೆಲವು ಮಕ್ಕಳನ್ನು ಕಳ್ಳ ಸಾಗಣಿಕೆ ಮೂಲಕ ಅನ್ಯ ರಾಜ್ಯ ಮತ್ತು ದೇಶಗಳಿಗೆ ಸಾಗಣಿಕೆ ಮಾಡಿ ಜೀತದಾಳಾಗಿ ದುಡಿಸಿಕೊಳ್ಳಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಉಚಿತ ಕಾನೂನು ಸಲಹೆಗಾರ ಎಸ್.ಜಯರಾಮು ಸಂಪನ್ಮೂಲ ಭಾಷಣ ಮಾಡಿದರು. ಕಾಲೇಜಿನ ಪ್ರಾಂಶುಪಾಲೆ ಸುಕನ್ಯಾ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ, ಕಾರ್ಯದರ್ಶಿ ಎಂ.ಜೆ.ಸುಮಂತ್ ಇತರರು ಇದ್ದರು.
ಶ್ರೀರಂಗಪಟ್ಟಣ:ತಾಲೂಕಿನ ಬೆಳಗೊಳ ಗ್ರಾಮದ ಬಳಿಯ ನಾಲೆ ಏರಿ ಮೇಲೆ ಕಾಣಿಸಿಕೊಂಡ ಭಾರೀ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ.