ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜೀತ ಪದ್ಧತಿಯನ್ನು ತೊಲಗಿಸುವುದಕ್ಕೆ ಮುಖ್ಯ ಔಷಧವೇ ಶಿಕ್ಷಣವಾಗಿದೆ. ಶಿಕ್ಷಣ ಎಲ್ಲರಿಗೂ ಉಚಿತವಾಗಿ ದೊರೆಯುತ್ತಿದೆ. ಶಿಕ್ಷಣ ಪಡೆದು ನಾಡಿನ ಸುಶಿಕ್ಷಿತ ಪ್ರಜೆಗಳಾಗಿ ದೇಶವನ್ನು ಕಟ್ಟೋಣ. ಪ್ರತಿಯೊಬ್ಬ ಪ್ರಜ್ಞಾವಂತ ವ್ಯಕ್ತಿಯೂ ಕೂಡ ಜೀತ ಪದ್ಧತಿ ನಿರ್ಮೂಲನೆಗೆ ಶ್ರಮಿಸಬೇಕು. ಪ್ರತಿಯೊಬ್ಬ ನಾಗರಿಕನೂ ಘನತೆಯಿಂದ ಜೀವನ ನಡೆಸಬೇಕು ಎಂಬುದು ಇದರ ಉದ್ದೇಶವಾಗಿದೆ ಎಂದರು.
ಆರ್ಥಿಕ ಮತ್ತು ಅನಕ್ಷರತೆಯ ಕಾರಣದಿಂದ ಜೀತ ಪದ್ಧತಿಯು ಇನ್ನೂ ಅಸ್ತಿತ್ವದಲ್ಲಿದೆ. ಮೂಲಭೂತ ಹಕ್ಕುಗಳಲ್ಲಿ ಒಂದಾದ ಶಿಕ್ಷಣವನ್ನು ಪ್ರತಿಯೊಬ್ಬರೂ ಪಡೆದುಕೊಂಡು ಜೀತ ಪದ್ಧತಿಯನ್ನು ನಿರ್ಮೂಲನೆಗೊಳಿಸಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಜೀತ ಪದ್ಧತಿ ನಿರ್ಮೂಲನೆಗಾಗಿ ಜನಜಾಗೃತಿ ಮೂಡಿಸಬೇಕು. ಜೊತೆಗೆ ಜಿಲ್ಲೆಯನ್ನು ಜೀತ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂಬ ಆಶಯ ವ್ಯಕ್ತಪಡಿಸಿದರು.1976 ರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸುರವರ ನೇತೃತ್ವದಲ್ಲಿ 1976ರ ಜೀತ ಪದ್ಧತಿ ನಿರ್ಮೂಲನೆ ಕಾಯ್ದೆಯನ್ನು ಅನುಷ್ಠಾನಗೊಳಿಸಿ 75 ವರ್ಷಗಳಾಗಿದ್ದರೂ ಕೆಲವು ಕಡೆ ಜೀತ ಪದ್ಧತಿ ಜೀವಂತವಾಗಿದೆ ಎಂಬುದು ಆಘಾತಕಾರಿ ವಿಷಯವಾಗಿದೆ ಎಂದು ನುಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವಿರ್ , ಜೀತ ಪದ್ಧತಿ ನಿರ್ಮೂಲನೆಗೆ ಪ್ರಮಾಣ ವಚನ ಭೋದಿಸಿದರು.
ಜೀತ ಪದ್ದತಿ ನಿರ್ಮೂಲನೆ ಜಾಥಾಕ್ಕೆ ಚಾಲನೆ
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ಸಂಜೀವಪ್ಪ, ಉಪ ಕಾರ್ಯದರ್ಶಿ ಆನಂದ್, ಸಮಾಜ ಕಲ್ಯಾಣ ಅಧಿಕಾರಿ ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.