ಅಪರಾಧ ತಡೆಗಟ್ಟಲು ಕೈಜೋಡಿಸಿ

KannadaprabhaNewsNetwork |  
Published : Dec 07, 2025, 02:45 AM IST
ಹಾಯಕ ಸಬ್ ಇನ್ಸ್ಪೆಕ್ಟರ್ ಗುರುಸ್ವಾಮಿ ಅಭಿಮತ ವ್ಯಕ್ತಪಡಿಸಿದರು.  | Kannada Prabha

ಸಾರಾಂಶ

ಅಪರಾಧಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಎಎಸ್‌ಐ ಗುರುಸ್ವಾಮಿ ಹೇಳಿದರು.

ಹನೂರು: ಅಪರಾಧಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಎಎಸ್‌ಐ ಗುರುಸ್ವಾಮಿ ಹೇಳಿದರು.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣಾ ವ್ಯಾಪ್ತಿಯ ಮಲೆ ಮಹದೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಪರಾಧಗಳನ್ನು ತಡೆಗಟ್ಟಲು ಸಾರ್ವಜನಿಕರು, ವಿದ್ಯಾರ್ಥಿಗಳು ನಮ್ಮೊಂದಿಗೆ ಕೈಜೋಡಿಸಬೇಕು ಎಂದರು.

ಮೋಸದ ಮೊಬೈಲ್ ಕರೆಗಳಿಗೆ ಮಾರುಹೋಗದೆ ಎಚ್ಚರಿಕೆಯಿಂದ ಇರಬೇಕು. ಅಪರಾಧ ಮಾಡುವವರ ಬಗ್ಗೆ ಪೊಲೀಸರಿಗೆ ಸಕಾಲದಲ್ಲಿ ತಿಳಿಸಬೇಕು ಎಂದು ತಿಳಿಸಿದರು.

ದ್ವಿಚಕ್ರ ವಾಹನದಲ್ಲಿ ಸಂಚರಿಸುವ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಬಳಸಬೇಕು. ಬಾರಿ ವಾಹನಗಳ ಚಾಲನೆ ಮಾಡುವ ವೇಳೆ ಸೀಟ್ ಬೆಲ್ಟ್ ಧರಿಸಬೇಕು. ಕುಡಿದು ಚಾಲನೆ ಮಾಡುವವರ ವಿರುದ್ಧ ಪೊಲೀಸ ಇಲಾಖೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಿದೆ ಎಂದರು.

ಮಲೆ ಮಹದೇಶ್ವರ ಬೆಟ್ಟದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭುಸ್ವಾಮಿ, ಉಪನ್ಯಾಸಕರಾದ ಜಗದೀಶ್ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು .

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ