ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ ತಡೆಯಲು ಕೈ ಜೋಡಿಸಿ: ಲಕ್ಷ್ಮೀ ಕರೆ

KannadaprabhaNewsNetwork |  
Published : Apr 09, 2026, 02:00 AM IST
7ಕೆಎಂಎನ್ ಡಿ13 | Kannada Prabha

ಸಾರಾಂಶ

ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸಲು ಪೋಷಕರು ಮುಂದಾಗದೆ ಬಾಲ್ಯದಲ್ಲಿಯೇ ವಿವಾಹ ಮಾಡುತ್ತಿರುವುದು ವಿಷಾದನೀಯ. ಮೂಢನಂಬಿಕೆಯಿಂದಾಗಿ ಹೆಣ್ಣು ಭ್ರೂಣಹತ್ಯೆ ಮಾಡುವುದು ಅಪರಾಧ. ಇಂತಹ ಸಾಮಾಜಿಕ ಪಿಡುಗನ್ನು ಹೋಗಲಾಡಿಸುವುದು ಪ್ರತಿಯೊಬ್ಬರ ಕರ್ತವ್ಯ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಬಾಲ್ಯ ವಿವಾಹ ಹಾಗೂ ಹೆಣ್ಣು ಭ್ರೂಣಹತ್ಯೆ ತಡೆಯಲು ಸರ್ಕಾರದ ಜೊತೆಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಲಕ್ಷ್ಮೀ ಕರೆ ನೀಡಿದರು.

ತಾಲೂಕಿನ ನೆಲಮಾಕನಹಳ್ಳಿ ಗ್ರಾಪಂ ಆವರಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯ್ತಿ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸಹಯೋಗದೊಂದಿಗೆ ನಡೆದ ಹೆಣ್ಣು ಭ್ರೂಣ ಹತ್ಯೆ, ಬಾಲ್ಯ ವಿವಾಹ ಮತ್ತು ಬಾಲ ಗರ್ಭಿಣಿಯರ ತಡೆಗಟ್ಟುವ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸಲು ಪೋಷಕರು ಮುಂದಾಗದೆ ಬಾಲ್ಯದಲ್ಲಿಯೇ ವಿವಾಹ ಮಾಡುತ್ತಿರುವುದು ವಿಷಾದನೀಯ. ಮೂಢನಂಬಿಕೆಯಿಂದಾಗಿ ಹೆಣ್ಣು ಭ್ರೂಣಹತ್ಯೆ ಮಾಡುವುದು ಅಪರಾಧ. ಇಂತಹ ಸಾಮಾಜಿಕ ಪಿಡುಗನ್ನು ಹೋಗಲಾಡಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

ಮಹಿಳೆಯರು ತಮ್ಮ ಕುಟುಂಬಗಳಲ್ಲಿ ಪೌಷ್ಟಿಕ ಆಹಾರವನ್ನು ಪುರುಷರಷ್ಟೇ ಸಮಾನವಾಗಿ ಸೇವಿಸಬೇಕು. ಸಂಪ್ರದಾಯಗಳಿಗೆ ಒಳಗಾಗಿ ಕೊನೆಯಲ್ಲಿ ಊಟ ಮಾಡುವುದು, ಉಳಿದಿದ್ದನ್ನು ಮಾತ್ರ ತಿಂದು ಅಪೌಷ್ಟಿಕತೆಗೆ ನರಳಿ ಅನಾರೋಗ್ಯಕ್ಕೆ ಒಳಗಾಗಬಾರದು ಎಂದರು.

ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ ಮಾತನಾಡಿ, ಗಂಡು ಹೆಣ್ಣಿನ ಸಮಾನತೆ ಅನುಪಾತ ಇಲ್ಲದಿರುವುದರಿಂದ ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಸಮಸ್ಯೆ ಉದ್ಬವವಾಗಿದೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಮರ್ಥರಾಗಿದ್ದಾರೆ. ಅವರಲ್ಲಿರುವ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಬಾಲ ಗರ್ಭಿಣಿಯರು ಹೆಚ್ಚಾಗಿ ಹಲವು ಆರೋಗ್ಯ ಸಮಸ್ಯೆಗಳಿಗೆ ಸಿಲುಕುತ್ತಿದ್ದಾರೆ. ಬಾಲ್ಯದಲ್ಲೇ ವಿವಾಹ ಮಾಡಿ ಭಾರದಿಂದ ಮುಕ್ತರಾದೆವೆಂದು ಪೋಷಕರು ಭಾವಿಸದೇ ಮಕ್ಕಳ ಭವಿಷ್ಯದ ಕಡೆಗೆ ಮುಖ ಮಾಡಬೇಕೆಂದರು.

ಜನವಾದಿ ಮಹಿಳಾ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಮಾತನಾಡಿ, ಮಕ್ಕಳ ಕೈಗೆ ಸುಲಭವಾಗಿ ಸಿಗುತ್ತಿರುವ ಮೊಬೈಲ್ ಫೋನ್‌ಗಳು ಮತ್ತು ವಿವಿಧ ಪ್ರಭಾವಗಳಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಬಗ್ಗೆ ಪೋಷಕರು ಗಮನಹರಿಸಬೇಕು. ಅಪ್ರಾಪ್ತರ ಮದುವೆಯನ್ನು ತಡೆಗಟ್ಟಲು ಅಧಿಕಾರಿಗಳೊಂದಿಗೆ ಜನರು ಕೈ ಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಪಂ ಆಡಳಿತಾಧಿಕಾರಿ ಕೆ.ಬಿ.ಸಂದೀಪ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಡಾ.ಅಶ್ವಥ್, ತಾಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ಅಧಿಕಾರಿ ನಂಜಮಣಿ, ಟಿಎಪಿಸಿಎಂಎಸ್ ಸೊಸೈಟಿ ಅಧ್ಯಕ್ಷ ಲಿಂಗರಾಜು, ನೆಲಮಾಕನಹಳ್ಳಿ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗೇಂದ್ರ, ರಾಜಸ್ವ ನಿರೀಕ್ಷಕ ಚೇತನ್, ಗ್ರಾಮ ಲೆಕ್ಕಿಗ ಚೈತ್ರ, ಪಿಡಿಒ ಖಾನ್ ಮಹಮ್ಮದ್, ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಸುಶೀಲ, ತಾಲೂಕು ಅಧ್ಯಕ್ಷೆ ಜಯಶೀಲ, ಕಾರ್ಯದರ್ಶಿ ಪ್ರೇಮ, ಮಹಾದೇವಮ್ಮ, ಪದ್ಮ, ಅಟೆಂಡರ್ ಮಹಾದೇವು ಹಾಗೂ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂಬದಿ ರಾಜಕೀಯ ಬಿಟ್ಟು ಚುನಾವಣೆ ನಡೆಸಲಿ: ಹಾರೋಹಳ್ಳಿ ಕೃಷ್ಣ
150 ವಸಂತ ಪೂರೈಸಿರುವ ಸರ್ಕಾರಿ ಶಾಲೆ ಬಲವರ್ಧನೆ ಮಾಡಿ: ಕೆ.ಆರ್.ಶ್ರೀನಿವಾಸ್