ಹೊಸದುರ್ಗ: ಕಂದಾಯ, ಭೂ ಮಾಪನ ಇಲಾಖೆ, ನೀರು ನೈರ್ಮಲ್ಯ ಇಲಾಖೆ, ಪುರಸಭೆ ಕೆಇಬಿ ಅಧಿಕಾರಿಗಳು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಪಟ್ಟಣದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಲು ಸಹಕರಿಸಿ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಕರೆಯಲಾಗಿದ್ದ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ರಸ್ತೆ ಮಾಡುತ್ತಿರುವುದು ಸಾರ್ವಜನಿಕರ ಅನುಕೂಲಕ್ಕೆ. ಯಾರೊಬ್ಬರ ಅನುಕೂಲಕ್ಕಲ್ಲ. ಹಾಗಾಗಿ ಪೊಲೀಸ್ ಸಹಕಾರ ಪಡೆದು ಒತ್ತುವರಿ ಜಾಗವನ್ನು ತೆರೆವುಗೊಳಿಸಿ ಕಾಮಗಾರಿ ನಡೆಸಲು ಅನುಕೂಲ ಮಾಡಿಕೊಡಿ ಎಂದು ಸಭೆಯಲ್ಲಿದ್ದ ಮುಖ್ಯಾಧಿಕಾರಿಗೆ ಸೂಚಿಸಿದರು. ಟೋಲ್ ಬದಲಾವಣೆ : ಹೇರೂರ್ ಗೇಟ್ ಬಳಿ ನಿರ್ಮಿಸಲು ಉದ್ದೇಶಿದ್ದ ಟೋಲ್ ಪ್ಲಾಜಾವನ್ನು ಮಾವಿನಕಟ್ಟೆ ಗ್ರಾಮದ ಬಳಿ ನಿರ್ಮಿಸಲಾಗುವುದು ಎಂದು ಹೆದ್ದಾರಿ ಪ್ರಾಧಿಕಾರದ ಇಇ ನರೇಂದ್ರ ಸಭೆಗೆ ತಿಳಿಸಿದರು.ಹೊಸದುರ್ಗ ವಲಯ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ರಸ್ತೆ ಬದಿಯ ಮರ ತೆಗೆಯಲು ಅರಣ್ಯ ಇಲಾಖೆಗೆ ಹೆದ್ದಾರಿ ಪ್ರಾಧಿಕಾರ 1.37 ಕೋಟಿ ರು. ಹಣ ಕೊಟ್ಟಿದೆ. ಮರ ತೆಗೆದು ಈವರೆಗೂ ನೀವು ರಸ್ತೆ ಬದಿ ಸಸಿ ನೆಡುವ ಕೆಲಸ ಮಾಡಿಲ್ಲ ಯಾಕೆ ? ಎಂದು ವಲಯ ಅರಣ್ಯಾಧಿಕಾರಿ ಸುನಿಲ್ ಅವರನ್ನು ಪ್ರಶ್ನಿಸಿದ ಶಾಸಕರು, ಶೀಘ್ರವಾಗಿ ಎರೆಡು ಬದಿಯಲ್ಲಿ ಸಸಿ ನೆಡುವ ಮೂಲಕ ಅವುಗಳ ಸಂರಕ್ಷಣೆ ಮಾಡಿ ಎಂದು ಹೇಳಿದರು.
ಸಭೆಯಲ್ಲಿ ತಹಸೀಲ್ದಾರ್ ತಿರುಪತಿ ಪಾಟೀಲ್, ತಾಪಂ ಇಒ ಸುನಿಲ್ಕುಮಾರ್, ಪಿಐ ಮಧು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.