ಅರಣ್ಯ, ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭ: ಶಾಸಕ ಬೇಳೂರು

KannadaprabhaNewsNetwork |  
Published : Mar 19, 2025, 12:34 AM IST
17ಬ್ಯಾಕೋಡ್‌01ಬ್ಯಾಕೋಡ್‌ ಸಮೀಪದ ಬೊಬ್ಬಿಗೆ ಗ್ರಾಮದ ಸುಮಾರು 2.30 ಕೋಟಿ ವೆಚ್ಚದ ತಲ್ಲೆ ಅಗ್ಗೇರಿ ಲಿಂಕ್ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು | Kannada Prabha

ಸಾರಾಂಶ

ಈ ಭಾಗದ ಮುಳುಗಡೆ ಸಂತ್ರಸ್ತರ ಬಹುದಿನಗಳ ಸಮಸ್ಯೆ ಪರಿಹಾರಕ್ಕಾಗಿ ಈಗಾಗಲೇ ಕೋಗಾರು, ಭಾನುಕುಳಿ ಗ್ರಾಮದ ರೈತರ ಸಮಕ್ಷಮದಲ್ಲಿ ಅರಣ್ಯ ಹಾಗೂ ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭವಾಗಿದೆ. ಜಂಟಿ ಸರ್ವೆ ನಂತರ ರೈತರು, ಅರಣ್ಯ ಇಲಾಖೆ ನಡುವೆ ಇರುವ ಅನಗತ್ಯ ಗೊಂದಲಕ್ಕೆ ತೆರೆ ಬೀಳಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ರಸ್ತೆ ಕಾಮಗಾರಿಗೆ ಶಂಕು

ಕನ್ನಡಪ್ರಭ ವಾರ್ತೆ ಬ್ಯಾಕೋಡು

ಈ ಭಾಗದ ಮುಳುಗಡೆ ಸಂತ್ರಸ್ತರ ಬಹುದಿನಗಳ ಸಮಸ್ಯೆ ಪರಿಹಾರಕ್ಕಾಗಿ ಈಗಾಗಲೇ ಕೋಗಾರು, ಭಾನುಕುಳಿ ಗ್ರಾಮದ ರೈತರ ಸಮಕ್ಷಮದಲ್ಲಿ ಅರಣ್ಯ ಹಾಗೂ ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭವಾಗಿದೆ. ಜಂಟಿ ಸರ್ವೆ ನಂತರ ರೈತರು, ಅರಣ್ಯ ಇಲಾಖೆ ನಡುವೆ ಇರುವ ಅನಗತ್ಯ ಗೊಂದಲಕ್ಕೆ ತೆರೆ ಬೀಳಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಶರಾವತಿ ಹಿನ್ನೀರಿನ ಕರೂರು ಹೋಬಳಿಯ ಬೊಬ್ಬಿಗೆ ಗ್ರಾಮದ ಸುಮಾರು 2.30 ಕೋಟಿ ರು. ವೆಚ್ಚದ ತಲ್ಲೇ-ಅಗ್ಗೇರಿ ಲಿಂಕ್ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೇರವೇರಿಸಿ ಅವರು ಮಾತನಾಡಿದರು.

ತಾಲೂಕಿನ ಬಾರಂಗಿ ಹೋಬಳಿ ನಂತರ ಕರೂರು ಹೋಬಳಿಯ ತುಮರಿ, ಬ್ಯಾಕೋಡು ಭಾಗದಲ್ಲಿ ಜಂಟಿ ಸರ್ವೆ ಕಾರ್ಯದ ನೆಡೆಯಲಿದೆ. ಸರ್ವೇ ಕಾರ್ಯದ ನಂತರ ಬಹುದಿನಗಳ ಅರಣ್ಯ, ಕಂದಾಯ ಇಲಾಖೆ ಭೂಮಿ ಹಕ್ಕು ಸಂಬಂಧಿಸಿದ ಬಹುತೇಕ ಗೊಂದಲಕ್ಕೆ ತೆರೆ ಬೀಳಲಿದೆ. ಈ ನಂತರದಲ್ಲಿ ಬಗರ್ ಹುಕುಂ 57, 94ಸಿಸಿ ರಡಿ ಸಲ್ಲಿಕೆಯಾದ ಬಹುತೇಕ ಅರ್ಜಿಗಳು ಶೀಘ್ರವೇ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ 70 ಕೋಟಿ ರು. ಅನುದಾನ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ತಾಲೂಕಿನ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ 94 ದೇವಸ್ಥಾನಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದರು.

ಕೆಡಿಪಿ ಸದಸ್ಯ ಜಿ.ಜಿ.ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಉಮಾ ನಾಗೇಂದ್ರ, ತಾಲೂಕು ಪಶು ಸಂಗೋಪನ ನಾಮ ನಿರ್ದೇಶಕ ಸದಸ್ಯ ಗಣೇಶ್ ಜಾಕಿ, ದೇವರಾಜ್ ಕಪ್ಪದೂರ್, ರಾಮಚಂದ್ರ ಹಾಬಿಗೆ, ಎಸ್ಎಲ್ ನಾಗರಾಜ್, ಸತೀಶ್ ತಲ್ಲೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ
ಕಟ್ಟುನಿಟ್ಟು ಮಾಡಿದರೂ ನಿಲ್ಲದ ಪರಪ್ಪನ ಅಗ್ರಹಾರ ಪವಾಡ