ಜೋಳದರಾಶಿ ದೊಡ್ಡನಗೌಡರ ಸಾಹಿತ್ಯ ಸಂಪತ್ತು ಡಿಜಿಟಲೀಕರಣಗೊಳ್ಳಲಿ; ಬಿ. ಶ್ರೀರಾಮುಲು

KannadaprabhaNewsNetwork |  
Published : Aug 01, 2026, 03:45 AM IST
ಬಳ್ಳಾರಿ ತಾಲೂಕಿನ ಜೋಳದರಾಶಿ ಗ್ರಾಮದಲ್ಲಿ ಜರುಗಿದ ನವೀಕೃತ ರಾಮೇಶ ಕಲಾಮಂದಿರ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಬಿ.ಶ್ರೀರಾಮುಲು ಗೌಡರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಮತ್ತಿತರರಿದ್ದರು.  | Kannada Prabha

ಸಾರಾಂಶ

ದೊಡ್ಡನಗೌಡರು ಕನ್ನಡ ಸಾಹಿತ್ಯ, ಗಮಕ ಕಲೆ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ಸಲ್ಲಿಸಿರುವ ಕೊಡುಗೆ ಅಪಾರವಾಗಿದೆ.

ಬಳ್ಳಾರಿ: ಗಮಕಕಲಾನಿಧಿ ಜೋಳದರಾಶಿ ದೊಡ್ಡನಗೌಡರ ಡೈರಿಗಳು, ಕ್ಯಾಸೆಟ್‌ಗಳು, ಹಸ್ತಪ್ರತಿಗಳು, ಇತರೆ ಸಾಹಿತ್ಯಿಕ ಬರಹಗಳನ್ನು ಸಮಗ್ರವಾಗಿ ಡಿಜಿಟಲೀಕರಣಗೊಳಿಸುವ ಕಾರ್ಯವಾಗಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆಶಿಸಿದರು.

ತಾಲೂಕಿನ ಜೋಳದರಾಶಿ ಗ್ರಾಮದಲ್ಲಿ ನವೀಕೃತ ರಾಮೇಶ ಕಲಾಮಂದಿರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ದೊಡ್ಡನಗೌಡರು ಕನ್ನಡ ಸಾಹಿತ್ಯ, ಗಮಕ ಕಲೆ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ಸಲ್ಲಿಸಿರುವ ಕೊಡುಗೆ ಅಪಾರವಾಗಿದೆ. ಅವರ ಅಮೂಲ್ಯ ದಾಖಲೆಗಳನ್ನು ಸಂರಕ್ಷಿಸಿ ಡಿಜಿಟಲ್ ರೂಪದಲ್ಲಿ ಉಳಿಸುವ ಮೂಲಕ ಸಂಶೋಧಕರು, ವಿದ್ಯಾರ್ಥಿಗಳು ಹಾಗೂ ಸಾಹಿತ್ಯಾಸಕ್ತರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಬೇಕು. ಈ ಮಹತ್ವದ ಕಾರ್ಯಕ್ಕೆ ಅಗತ್ಯ ಸಹಕಾರ ನೀಡಲು ತಾವು ಸದಾ ಸಿದ್ಧರಾಗಿರುವುದಾಗಿ ಶ್ರೀರಾಮುಲು ಭರವಸೆ ನೀಡಿದರು.

ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಮಾತನಾಡಿ, ಭಾರತದ ನೈಜ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳು ಇಂದಿಗೂ ಗ್ರಾಮೀಣ ಬದುಕಿನಲ್ಲಿ ಜೀವಂತವಾಗಿವೆ. ಹಳ್ಳಿಗಳಲ್ಲಿ ಸಂಸ್ಕೃತಿ, ಪರಂಪರೆ ಹಾಗೂ ಜೀವನ ಮೌಲ್ಯಗಳು ಉಳಿದು ಬೆಳೆದರೆ ಮಾತ್ರ ಭಾರತದ ಸಾಂಸ್ಕೃತಿಕ ವೈಭವವೂ ಅಷ್ಟೇ ಸದೃಢವಾಗಿ ಮುಂದುವರಿಯಲಿದೆ. ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಸಂಸ್ಕೃತಿ ಮರೆಯಾಗದಂತೆ ಪ್ರತಿಯೊಬ್ಬರೂ ಕಾಳಜಿ ವಹಿಸುವ ಅಗತ್ಯವಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಉರವಕೊಂಡ ಗವಿಮಠ ಸಂಸ್ಥಾನದ ಜಗದ್ಗುರು ಡಾ.ಕರಿಬಸವರಾಜೇಂದ್ರ ಮಹಾಸ್ವಾಮಿಗಳು, ಉರವಕೊಂಡ ಮಠ ಸಂಸ್ಥಾನದ 6ನೇ ಜಗದ್ಗುರು ಶ್ರೀ ಚನ್ನಬಸವರಾಜೇಂದ್ರ

ಸ್ವಾಮಿಗಳ ಜೊತೆ ದೊಡ್ಡನಗೌಡರ ಅವಿನಾವಭಾವ ಸಂಬಂಧ ಕುರಿತು ಮಾತನಾಡಿದರು.

ಕಲೆ, ಸಾಹಿತ್ಯ, ಗಮಕ, ಸಂಸ್ಕೃತಿಯಿಂದ ಮಾತ್ರ ಭಾರತೀಯ ಸಂಸ್ಕೃತಿ ಉಳಿಯಲು ಸಾಧ್ಯವಾಗಿದ್ದು ಅಪರೂಪ ಎನ್ನುವಂತೆ ಬಳ್ಳಾರಿ ಜಿಲ್ಲೆಗೆ ಸಿಕ್ಕಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶೀಘ್ರವೇ ಜರುಗುವಂತಾಗಲಿ ಎಂದು

ಶ್ರೀಚನ್ನಬಸವರಾಜೇಂದ್ರಸ್ವಾಮಿಗಳು ಒತ್ತಾಸೆ ವ್ಯಕ್ತಪಡಿಸಿದರು. ಲೆಕ್ಕಪರಿಶೋಧಕ ಎರಿಸ್ವಾಮಿ ಚಿಲ್ಕರಾಯಿ ಮಾತನಾಡಿದರು. ಪ್ರಾಸ್ತಾವಿಕ ಜೋಳದರಾಶಿ ದೊಡ್ಡನಗೌಡ ಪ್ರತಿಷ್ಠಾನದ ಅಧ್ಯಕ್ಷ ಪಂಪನಗೌಡ ಅವರು ಜೋಳದರಾಶಿ ಗ್ರಾಮದ ಸಾಂಸ್ಕೃತಿಕ ಹಿನ್ನಲೆ ಕುರಿತು ಮಾತನಾಡಿದರು. ರಂಗತೋರಣ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು, ಎರ್ರಿತಾತ ಜೀವಸಮಾಧಿ ಟ್ರಸ್ಟ್‌ನ ಧರ್ಮದರ್ಶಿ ಎಚ್.ಬಾಳನಗೌಡ ಅವರು ಉಪಸ್ಥಿತರಿದ್ದರು. ಗಮಕ ಕಲಾವಿದ ಎರ್ರೆಪ್ಪಗೌಡ ಹಾಗೂ ಜೋಳದರಾಶಿ ಬಸವರಾಜ್ ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ಪ್ರದರ್ಶನಗೊಂಡ ಧಾರವಾಡದ ಆಟಮಾಟ ತಂಡದ ಮಹಾದೇವ ಹಡಪದ ರಚನೆ, ನಿರ್ದೇಶನದ "ಗುಡಿಯ ನೋಡಿರಣ್ಣ " ಆಧ್ಯಾತ್ಮಿಕ ನಾಟಕ ನೆರೆದಿದ್ದ ಪ್ರೇಕ್ಷಕರನ್ನು ಆಧ್ಯಾತ್ಮಿಕ ಲೋಕಕ್ಕೆ ಕರೆದೊಯ್ದಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದುಷಿ ಡಾ. ಉಷಾ ಹೆಬ್ಬಾರ್ ಗೆ ಗುರುವಂದನೆ
ಮಾನವ ಹಸ್ತಕ್ಷೇಪದಿಂದ ಪ್ರಕೃತಿ ವಿಕೋಪ: ದಿನೇಶ್ ಹೊಳ್ಳ