ಜಾಲಿ ಪ್ರೌಢಶಾಲೆಯ ಶಿಕ್ಷಕ ಶ್ರೀಧರ ಶೇಟ್‌ಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

KannadaprabhaNewsNetwork |  
Published : Sep 05, 2025, 01:00 AM IST
ಪೊಟೋ ಪೈಲ್ : 4ಬಿಕೆಲ್ 3 | Kannada Prabha

ಸಾರಾಂಶ

ಶಿಕ್ಷಕರಾಗಿ, ಕವಿ, ಲೇಖಕ, ಅಂಕಣಕಾರ, ಚಿತ್ರ ಕಲಾವಿದ, ವಾಗ್ಮಿ, ವ್ಯಂಗ್ಯಚಿತ್ರಕಾರರಾಗಿ ಅಲ್ಲದೇ ಕಾರ್ಯಕ್ರಮ ನಿರೂಪಕರಾಗಿಯೂ ಗುರುತಿಸಿಕೊಂಡಿದ್ದಾರೆ.

ಭಟ್ಕಳ: ಬಹುಮುಖ ಪ್ರತಿಭೆಯ ಜಾಲಿ ಸರ್ಕಾರಿ ಪ್ರೌಢಶಾಲೆಯ ಆಂಗ್ಲ ಭಾಷಾ ಶಿಕ್ಷಕ ಶ್ರೀಧರ ಶೇಟ್ ಶಿರಾಲಿ ಅವರನ್ನು ೨೦೨೫ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇವರು ಶಿಕ್ಷಕರಾಗಿ, ಕವಿ, ಲೇಖಕ, ಅಂಕಣಕಾರ, ಚಿತ್ರ ಕಲಾವಿದ, ವಾಗ್ಮಿ, ವ್ಯಂಗ್ಯಚಿತ್ರಕಾರರಾಗಿ ಅಲ್ಲದೇ ಕಾರ್ಯಕ್ರಮ ನಿರೂಪಕರಾಗಿಯೂ ಗುರುತಿಸಿಕೊಂಡಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಶೇ.100 ಫಲಿತಾಂಶ ಬರುವಲ್ಲಿ ಇವರ ಪಾತ್ರ ಮಹತ್ವದ್ದಾಗಿದೆ. ನಿರಂತರ ಎಂಟು ವರ್ಷಗಳಿಂದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.೧೦೦ಕ್ಕೆ ೧೦೦ ಫಲಿತಾಂಶ ಸಾಧಿಸುತ್ತಾ ಬಂದಿರುವುದು ಇವರ ಸಾಧನೆಯಾಗಿದೆ. ಇವರನ್ನು ಎರಡು ಬಾರಿ ಧಾರವಾಡದ ಡಾ.ಎಚ್.ಎಫ್.ಕಟ್ಟೀಮನಿ ಪ್ರತಿಷ್ಠಾನದ ''''''''ಶಿಕ್ಷಕ ಪರಿಶ್ರಮ ಹಿರಿಮೆಗೆ ಗೌರವ'''''''' ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಡಿಎಸ್‌ಇಆರ್‌ಟಿಯಿಂದ ''''''''ಚೈತನ್ಯ ತರಣಿ'''''''' ಬೋಧನೋಪಕರಣಗಳ ತರಬೇತಿಯ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಬೀದರ್, ಬಳ್ಳಾರಿ, ರಾಯಚೂರು ಮತ್ತು ಗುಲ್ಬರ್ಗಾ ಜಿಲ್ಲೆಗಳ ಶಿಕ್ಷಕರಿಗೆ ಟಿ.ಎಲ್.ಎಂ. ತರಬೇತಿ ನೀಡಿದ್ದಾರೆ.

ಶಿಕ್ಷಣದಲ್ಲಿ ರಂಗಕಲೆ, ಚಿಣ್ಣರ ಮೇಳ, ಕಲಿಕಾ ಚೇತರಿಕೆ ಮತ್ತು ಕ್ರಿಯಾ ಸಂಶೋಧನೆ ತರಬೇತಿಗಳ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ. ಇಂಗ್ಲಿಷ್ ವಿಷಯದ ಮತ್ತು ವಿಶ್ವಾಸ ಕಿರಣ ತರಬೇತಿಯ ಸಂಪನ್ಮೂಲ ವ್ಯಕ್ತಿಯಾಗಿ, ಬ್ಲಾಕ್ ರಿಸೋರ್ಸ್ ಟೀಂನ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಶಿಕ್ಷಣ ಇಲಾಖೆಯ ಸಹಪಠ್ಯ ಚಟುವಟಿಕೆ ಸ್ಪರ್ಧೆ ಆಶುಭಾಷಣ ಸ್ಪರ್ಧೆಯಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದಿರುವ ಅವರನ್ನು ಭಟ್ಕಳದ ಅರ್ಬನ್ ಬ್ಯಾಂಕ್ ತಾಲೂಕಿನ ಉತ್ತಮ ಶಿಕ್ಷಕ ಪ್ರಶಸ್ತಿ ಯನ್ನು ನೀಡಿ ಗೌರವಿಸಿದ್ದನ್ನು ಸ್ಮರಿಸಬಹುದು. ಸಾಹಿತ್ಯ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಇವರು ತಾಲೂಕಿನ ಒಂಭತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು.

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶ್ರೀಧರ ಶೇಟ್ ಶಿರಾಲಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ