ಮೋದಿ ಕೈಬಲಪಡಿಸಲು ಜೋಶಿ ಗೆಲ್ಲಿಸಿ

KannadaprabhaNewsNetwork |  
Published : Apr 08, 2024, 01:00 AM IST
7ಡಿಡಬ್ಲೂಡಿ1ಭಗನಿ ಸಮಾಜದ ಭವನದಲ್ಲಿ ಭಾನುವಾರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಬಿಜೆಪಿ ಮುಖಂಡ ಈರೇಶ ಅಂಚಟಗೇರಿ ಮಾತನಾಡಿದರು.  | Kannada Prabha

ಸಾರಾಂಶ

ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲು ನೀಡಿರುವ ಗ್ಯಾರಂಟಿಗಳು ಜನರ ಜೀವಕ್ಕೆ ಮಾರಕವಾಗಿವೆ. ಹೀಗಾಗಿ ಗ್ಯಾರಂಟಿಗೆ ತಕ್ಕ ಉತ್ತರ ನೀಡಬೇಕು.

ಧಾರವಾಡ:

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ಗೆಲುವಿಗೆ ಶ್ರಮಿಸುವಂತೆ ಜೆಡಿಎಸ್ ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ಕಾರ್ಯಕರ್ತರಿಗೆ ಕರೆ ನೀಡಿದರು.

ಇಲ್ಲಿಯ ಭಗನಿ ಸಮಾಜದ ಭವನದಲ್ಲಿ ಭಾನುವಾರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶಕ್ಕೆ ನರೇಂದ್ರ ಮೋದಿ ಬೇಕಿದೆ. ಹೀಗಾಗಿ ಪ್ರಹ್ಲಾದ್ ಜೋಶಿ ಗೆಲ್ಲಿಸುವ ಮೂಲಕ ಮೋದಿ ಕೈಬಲಪಡಿಸಲು ಸೂಚಿಸಿದರು.

ಮಾಜಿ ಮೇಯರ್ ಈರೇಶ ಅಂಚಟಗೇರಿ, ಏ. 15ರಂದು ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಬೇಕು. ಇದಕ್ಕೂ ಮುನ್ನ ಶಿವಾಜಿ ಮಹಾರಾಜ್ ಪುತ್ಥಳಿಗೆ ಮಾಲಾರ್ಪಣೆ ಬಳಿಕ ಮೆರವಣಿಗೆ ಜರುಗಲಿದೆ. ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಿದರೆ, ಸೋಲಿಲ್ಲದ ಸರದಾರರಾಗಿ ಜೋಶಿ ಈ ಬಾರಿ ನಾಲ್ಕು ಲಕ್ಷ ಮತಗಳ ಅಂತರದ ಗೆಲುವು ದಾಖಲಿಸುವ ಮೂಲಕ ಪುನಃ ಕೇಂದ್ರ ಸಚಿವರಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರೇಖಾ ನಾಯ್ಕರ ಮಾತನಾಡಿ, ಮಹಿಳಾ ಕಾರ್ಯಕರ್ತರು ಈ ಬಾರಿ ಪ್ರಹ್ಲಾದ ಜೋಶಿ ಅವರಿಗೆ ಬೆಂಬಲಿಸಬೇಕು. ಈ ಮೂಲಕ ಅವರನ್ನು ಪುನಃ ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸುವಂತೆ ಹೇಳಿದರು.

ಹುಬ್ಬಳ್ಳಿ ಶಹರ ಅಧ್ಯಕ್ಷೆ ಪೂರ್ಣಿಮಾ ಸವದತ್ತಿ, ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿಲು ನೀಡಿರುವ ಗ್ಯಾರಂಟಿಗಳು ಜನರ ಜೀವಕ್ಕೆ ಮಾರಕವಾಗಿವೆ. ಹೀಗಾಗಿ ಗ್ಯಾರಂಟಿಗೆ ತಕ್ಕ ಉತ್ತರ ನೀಡುವಂತೆ ಕರೆ ನೀಡಿದರು.

ಬಿಜೆಪಿ ಮುಖಂಡ ಮೋಹನ ರಾಮದುರ್ಗ, ದೇಶಕ್ಕೆ ಮೋದಿ ಜೀ, ಧಾರವಾಡಕ್ಕೆ ಜೋಶಿ ಜೀ ಸಂಕಲ್ಪ ಮಾಡಬೇಕು. ಈ ಪಣದ ಮೂಲಕ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಗ್ಗೂಡಿ ಜೋಶಿ ಅವರ ಗೆಲುವಿಗೆ ಶ್ರಮಿಸಬೇಕು ಎಂದರು.

ಸಭೆಯಲ್ಲಿ ಮಾಜಿ ಶಾಸಕ ಕೆ.ಎನ್. ಗಡ್ಡಿ, ಜೆಡಿಎಸ್ ಗ್ರಾಮೀಣಾಧ್ಯಕ್ಷ ಗಂಗಾಧರ ಮಠ, ಮಂಜುನಾಥ ಹೆಗೇದಾರ್, ಮಾರುತಿ ಹಿಂಡಸಗೇರಿ, ಸೈಯದ್ ನದಾಫ್, ಸಿದ್ದಣ್ಣ, ಗೌಸಸಾಬ್ ನದಾಫ್, ಚಿದಂಬರ ನಾಡಗೌಡ, ನವೀನ ಮಡಿವಾಳ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ