ಹಾಡುಹಗಲೇ ಸಿನಿಮೀಯ ರೀತಿ ಪತ್ರಕರ್ತ ಅಪಹರಣ !

KannadaprabhaNewsNetwork |  
Published : Aug 09, 2026, 01:15 AM IST
ಸಾಗರಕುಮಾರ್ ದೇಸಾಯಿ ಪತ್ರಕರ್ತ | Kannada Prabha

ಸಾರಾಂಶ

An incident in which a journalist was assaulted and abducted in a car—in a manner reminiscent of a movie scene—occurred in broad daylight around 11:45 AM on Saturday, on the road opposite Lumbini Park in the city.

-ಯಾದಗಿರಿಯಲ್ಲಿ ನಡೆದ ಘಟನೆ । ಕ್ರಾಂತಿ ಪತ್ರಿಕೆಯ ಜಿಲ್ಲಾ ವರದಿಗಾರಿಗೆ ಹಲ್ಲೆಗೈದು ಕಿಡ್ನಾಪ್‌ । ನಾಲ್ಕು ಪೊಲೀಸರ ತಂಡದಿಂದ ತೀವ್ರ ಶೋಧ

-------

ಕನ್ನಡಪ್ರಭ ವಾರ್ತೆ ಯಾದಗಿರಿ

ಹಾಡುಹಗಲೇ ಸಿನಿಮೀಯ ರೀತಿಯಲ್ಲಿ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ಅಪಹರಿಸಿಕೊಂಡು ಹೋದ ಘಟನೆ ಶನಿವಾರ ನಗರದ ಲುಂಬಿನಿ ಪಾರ್ಕ್‌ ಎದುರಿನ ರಸ್ತೆಯ ಮೇಲೆ ಬೆಳಗ್ಗೆ 11.45 ರ ಸುಮಾರಿಗೆ ನಡೆದಿದೆ.

ಬೆಳಗ್ಗೆ ಎಂದಿನಂತೆ ಮನೆಯಿಂದ ಹೊರಟಿದ್ದ ಕ್ರಾಂತಿ ಪತ್ರಿಕೆಯ ಜಿಲ್ಲಾ ವರದಿಗಾರ ಸಾಗರ್‌ಕುಮಾರ ದೇಸಾಯಿ (35) ಅವರನ್ನು ಲುಂಬಿನಿ ಪಾರ್ಕ್‌ ಬಳಿ ನಂಬರ್ ಪ್ಲೇಟ್‌ ಇಲ್ಲದ ಕಾರಿನಲ್ಲಿ ಬಂದ ನಾಲ್ವರು ಅಡ್ಡಗಟ್ಟಿ, ಹಲ್ಲೆ ನಡೆಸಿದ್ದಾರೆ. ಸುತ್ತಮುತ್ತ ಜನರು ಘಟನೆ ಬಗ್ಗೆ ಅರಿಯುವಷ್ಟರಲ್ಲಿ ದುಷ್ಕರ್ಮಿಗಳನ್ನು ಸಾಗರ್‌ ಅವರನ್ನು ಎತ್ತಿ ಕಾರಿನಲ್ಲಿ ಬಲವಂತವಾಗಿ ಹಾಕಿ, ಜನರು ಜಮಾಯಿಸುವ ಮುನ್ನವೇ ಭಾರಿ ವೇಗದಲ್ಲಿ ಪರಾರಿಯಾಗಿದ್ದಾರೆ. ಈ ಘಟನೆ ನಡೆಯುವ ವೇಳೆ ಲುಂಬಿನಿ ಪಾರ್ಕಿನ ಕಾವಲುಗಾರ, ಹೋಂಗಾರ್ಡ್ ಸಿಬ್ಬಂದಿ ವಿಶ್ವ ತಡೆಯುವ ಪ್ರಯತ್ನದಲ್ಲಿ ಬಂದಾಗ ಕಾರು ವೇಗವಾಗಿ ದಾಟಿಕೊಂಡು ಹೋಗಿದೆ. ಕೂಡಲೇ ವಿಶ್ವ ಅವರು ಪೊಲೀಸ್‌ ಕಂಟ್ರೋಲ್‌ ರೂಂಗೆ ಮಾಹಿತಿ ನೀಡಿದ್ದಾರೆ.

ಘಟನೆಯ ಸುದ್ದಿ ಅರಿಯುತ್ತಲೇ ಎಸ್ಪಿ ಪೃಥ್ವಿಕ್‌ ಶಂಕರ್ ಕಾರ್ಯಪ್ರವೃತ್ತರಾಗಿ, ನಾಕಾಬಂದಿಗೆ ಸೂಚಿಸಿದರು. ನಗರ ಠಾಣೆಯ ಪಿಎಸ್ಐ ಮಂಜುನಾಥ್‌ ಹಾಗೂ ಅವರ ತಂಡ ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಅಪಹರಣಕಾರರ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಪತ್ತೆ ಹಚ್ಚುವುದಾಗಿ ಎಸ್ಪಿ ಪೃಥ್ವಿಕ್‌ ಶಂಕರ್‌ ತಿಳಿಸಿದ್ದಾರೆ. ಹಳೆಯ ದ್ವೇಷ ಹಿನ್ನೆಲೆಯಲ್ಲಿ ಅಪಹರಣ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಶನಿವಾರ ರಾತ್ರಿವರೆಗೂ ಶೋಧಕಾರ್ಯ ನಡೆದಿದೆ. ಪೊಲೀಸರ ಮೂರ್ನಾಲ್ಕು ತಂಡಗಳು ಹುಡುಕಾಟ ನಡೆಸಿವೆ. ಮೊಬೈಲ್‌ ಫೋನ್‌ ಟವರ್ ಆಧರಿಸಿ, ರಾಯಚೂರು, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ.

-----

8ವೈಡಿಆರ್1 : ಸಾಗರಕುಮಾರ್ ದೇಸಾಯಿ ಪತ್ರಕರ್ತ

8ವೈಡಿಆರ್2 : ಅಪಹರಣ ಸ್ಥಳ,

--000--

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯಮಟ್ಟದ ಪ್ರಥಮ ಯೋಗ ಸ್ಪರ್ಧೆ ಇಂದು
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಗಾರ್ಮೆಂಟ್ಸ್‌ ಕಾರ್ಮಿಕರ ಪ್ರತಿಭಟನೆ