ಭುವನೇಂದ್ರ ಅವರ ಪಾರ್ಥೀವ ಶರೀರಕ್ಕೆ ಬೆಳ್ತಂಗಡಿ ಗುರುನಾರಾಯಣ ಸಭಾಭವನದ ಬಳಿ ಪತ್ರಿಕಾ ಮಿತ್ರರು ಅಂತಿಮ ನಮನ ಸಲ್ಲಿಸಿ ಬಳಿಕ ಪುದುವೆಟ್ಟು ಮನೆಗೆ ಕರೆ ತಂದು ಅಂತಿಮ ವಿಧಿವಿಧಾನ ನೆರವೇರಿಸಲಾಯಿತು.
ಬೆಳ್ತಂಗಡಿ: ವಿಜಯವಾಣಿ, ಕರಾವಳಿ ಅಲೆ, ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42) ಮಂಗಳವಾರ ನಿಧನರಾಗಿದ್ದಾರೆ.
ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮದ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡುಬಿದಿರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕರಾವಳಿ ಅಲೆ, ವೆಬ್ದುನಿಯಾ, ಕಸ್ತೂರಿ ಚಾನೆಲ್, ವಿಜಯವಾಣಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಭುವನೇಂದ್ರ ಪುದುವೆಟ್ಟು ಅವರು ಕಳೆದ ಕೆಲವು ಸಮಯಗಳಿಂದ ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿದ್ದರು. ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಇಬ್ಬರು ಪುಟ್ಟ ಮಕ್ಕಳು ಮತ್ತು ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
ಭುವನೇಂದ್ರ ಅವರ ಪಾರ್ಥೀವ ಶರೀರಕ್ಕೆ ಬೆಳ್ತಂಗಡಿ ಗುರುನಾರಾಯಣ ಸಭಾಭವನದ ಬಳಿ ಪತ್ರಿಕಾ ಮಿತ್ರರು ಅಂತಿಮ ನಮನ ಸಲ್ಲಿಸಿ ಬಳಿಕ ಪುದುವೆಟ್ಟು ಮನೆಗೆ ಕರೆ ತಂದು ಅಂತಿಮ ವಿಧಿವಿಧಾನ ನೆರವೇರಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.