ಶೀಘ್ರದಲ್ಲಿಯೇ ಪತ್ರಕರ್ತರಿಗೆ ನಿವೇಶನ: ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ

KannadaprabhaNewsNetwork |  
Published : Aug 21, 2026, 04:00 AM IST
ಪತ್ರಕರ್ತರ ಗ್ರಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮಾತನಾಡುತ್ತಿರುವುದು | Kannada Prabha

ಸಾರಾಂಶ

ಶೀಘ್ರದಲ್ಲಿಯೇ ಪತ್ರಕರ್ತರಿಗೆ ನಿವೇಶನ ಒದಗಿಸಲು ಎಲ್ಲ ಪ್ರಯತ್ನ ಮುಂದುವರಿದಿದೆ ಎಂದು ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದ್ದಾರೆ.

ಮಂಗಳೂರು: ಶೀಘ್ರದಲ್ಲಿಯೇ ಪತ್ರಕರ್ತರಿಗೆ ನಿವೇಶನ ಒದಗಿಸಲು ಎಲ್ಲ ಪ್ರಯತ್ನ ಮುಂದುವರಿದಿದೆ ಎಂದು ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದ್ದಾರೆ.

ಮಂಗಳೂರು ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈಗಾಗಲೇ ಮಂಗಳೂರು ಹೊರವಲಯದಲ್ಲಿ ಕಂದಾಯ ಭೂಮಿಯನ್ನು ಮಂಜೂರು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಅತೀ ಶೀಘ್ರವೇ ಮಂಜೂರಾತಿ ಸಿಗುವ ವಿಶ್ವಾಸ ಇದೆ. ಆದ್ಯತೆಯ ಮೇಲೆ ಸಂಘದ ಷೇರು ಹೊಂದಿದ ಸದಸ್ಯರಿಗೆ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿಯವರು ಕೂಡಾ ಪತ್ರಕರ್ತರಿಗೆ ನಿವೇಶನ ನೀಡಲು ಮುಂದಾಗಿದ್ದಾರೆ ಎಂದು ಹೇಳಿದರು. ಕಳೆದ ಆರ್ಥಿಕ ವರ್ಷದಲ್ಲಿ ಸಹಕಾರ ಸಂಘ 36 ಸಾವಿರ ರು. ನಿವ್ವಳ ಲಾಭ ಗಳಿಸಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಪಾಂಡುರಂಗ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.

ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟಾ ವರದಿ ವಾಚಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಸಂಘದ ನಿರ್ದೇಶಕ ಪುಷ್ಪರಾಜ್ ಬಿ. ಎನ್. ವಂದಿಸಿದರು.ಸಹಕಾರ ಸಂಘದ ನಿರ್ದೇಶಕರಾದ ಮೊಹಮ್ಮದ್ ಆರಿಫ್, ಸತ್ಯವತಿ. ಕೆ, ಇಬ್ರಾಹಿಂ ಅಡ್ಕಸ್ಥಳ ಜಿತೇಂದ್ರ ಕುಂದೇಶ್ವರ, ವಿರ್ಲ್ಫ್ರೆಡ್ ಡಿ ಸೋಜಾ, ವಿಜಯ್ ಪಡು, ಸುರೇಶ್ ಪಳ್ಳಿ, ಹರೀಶ್ ಮೋಟುಕಾನ, ಶಿಲ್ಪಾ, ಆತ್ಮಭೂಷಣ್, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಮಂಗಳೂರು ಪ್ರೆಸ್ ಕ್ಲಬ್ ಸ್ಟಾಪಕಾಧ್ಯಕ್ಷ ಆನಂದ್ ಶೆಟ್ಟಿ, ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಹಾಗೂ ಸಂಘದ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

3ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಧರಣಿ
ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸ್ಮರಣೀಯ: ಡಾ.ಆನಂದ ಕೆ.