ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಬುಡಕಟ್ಟು ಶಿಕ್ಷಣ ಸಮಸ್ಯೆಗಳು ಮತ್ತು ಸವಾಲುಗಳು ಕುರಿತ ಎರಡು ದಿನಗಳ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಅವರು, ಬುಡಕಟ್ಟು ಮಕ್ಕಳ ಶಿಕ್ಷಣದಲ್ಲಿ ಮಾಧ್ಯಮದ ಪಾತ್ರ ಕುರಿತು ಮಾತನಾಡಿದರು.
ಹಾಡಿ ಜನರ ಮಕ್ಕಳಿಗೆ ಶಿಕ್ಷಣ ಮರೀಚಿಕೆಯಾಗಿದ್ದು, 8ನೇ ತರಗತಿ ಓದುತ್ತಿರುವ ಮಕ್ಕಳಿಗೆ ಮಗ್ಗಿ ಅಕ್ಷರಗಳೇ ಬರುತ್ತಿಲ್ಲ. ಶಿಕ್ಷಕರೇ ಮಕ್ಕಳಿಗೆ ಮೋಸ ಮಾಡುತ್ತಿದ್ದಾರೆ. ಇದನ್ನು ನೋಡಿದರೆ ಮನಸ್ಸಿಗೆ ನೋವಾಗುತ್ತದೆ. ಈ ವ್ಯವಸ್ಥೆಯ ಬದಲಾವಣೆಗೆ ಮಾಧ್ಯಮದ ಪಾತ್ರ ಬಹಳ ಮುಖ್ಯವಾಗಿದೆ ಎಂದರು.ಇಂದು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ. ಬುಡಕಟ್ಟು ಸಮುದಾಯದ ಜನರು ಮಾಧ್ಯಮಗಳ ಜೊತೆ ಒಡನಾಡವಿಟ್ಟುಕೊಂಡು ನಿಮ್ಮದೇ ತಂಡ ಮಾಡಿಕೊಂಡು, ನಿಮ್ಮದೇ ಯೂಟ್ಯೂಬ್ ಚಾನಲ್ ಮಾಡಿಕೊಂಡು ಸಮಸ್ಯೆಗಳನ್ನು ಪ್ರತಿದಿನ ಸರ್ಕಾರದ ಗಮನಕ್ಕೆ ತರಬೇಕು. ಮೊಬೈಲ್ ನಲ್ಲೇ ಸೆರೆ ಹಿಡಿದು ನಮಗೂ ಕಳುಹಿಸಿ. ನಿಮ್ಮ ಧ್ವನಿ ಏರಿಸಿ ಪ್ರಶ್ನೆ ಮಾಡಿದರೆ ಮಾಧ್ಯಮಗಳು ನಿಮ್ಮ ಹತ್ತಿರ ಬರುತ್ತವೆ. ಏನಾಗಬೇಕು, ಏನಾಗಿಲ್ಲ ಎಂಬುದನ್ನು ತಿಳಿಸಿ, ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಅವರು ಹೇಳಿದರು.
ಸಂಸ್ಥೆಯ ಸಂಶೋಧನಾಧಿಕಾರಿ ಕೆ. ಶ್ರೀನಿವಾಸ್, ಪ್ರೊ.ಜಿ. ವೆಂಕಟೇಶ್ ಕುಮಾರ್, ಡಾ. ದೀಪಾ ಭಟ್, ಡಾ.ಸಿ. ಮಾದೇಗೌಡ, ಡಾ. ಕಲಾವತಿ, ರತ್ನಮ್ಮ, ಪ್ರೊ.ಎಚ್.ಪಿ. ಜ್ಯೋತಿ, ಡಾ. ಕುಶಾಲ ಬರಗೂರು, ಡಾ. ಮೋಹನ್ ಕುಮಾರ್, ಲೆಕ್ಕಪರಿಶೋಧನಾಧಿಕಾರಿ ಬಿ.ಆರ್. ಭವ್ಯಾ, ಡಾ. ಮಂಜುನಾಥ್, ರವಿಕುಮಾರ್, ಗುಣಧರ್, ಹೇಮಚಂದ್ರ ಇದ್ದರು.