ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಪತ್ರಿಕಾಭವನದಲ್ಲಿ ಶುಕ್ರವಾರ ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಇವತ್ತು ಸೋಷಿಯಲ್ ಮೀಡಿಯಾ ದುರುಪಯೋಗ ಹೆಚ್ಚಾಗ ತೊಡಗಿದ್ದು, ಸಮಾಜದ ಮೇಲೆ ಗಂಭೀರ ಪರಿಣಾಮವನ್ನು ಭೀರುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯನ್ನು ನಿಯಂತ್ರಿಸುವ ಮಟ್ಟಕ್ಕೆ ಸೋಷಿಯಲ್ ಮೀಡಿಯಾ ಹೋಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಪ್ರಪಂಚದ ಮೂಲೆಯಲ್ಲಿ ಏನೇ ಘಟನೆ ನಡೆದರೂ ಅಂಗೈನಲ್ಲಿ ನೋಡುವ ಅವಕಾಶವನ್ನು ಡಿಜಿಟಲ್ ಮಾಧ್ಯಮ ಒದಗಿಸಿಕೊಟ್ಟಿದೆ. ಆದರೆ ದುರುಪಯೋಗ ಹೆಚ್ಚಿದೆ. ಡಿಜಿಟಲ್ ಕ್ರಾಂತಿಯ ನಡುವೆ ಪತ್ರಿಕೆಗಳು ಇಂದಿಗೂ ವಿಶ್ವಾಸ ಉಳಿಸಿಕೊಂಡಿವೆ. ಪತ್ರಕರ್ತರ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಜನಸಾಮಾನ್ಯರ ಧ್ವನಿಯಾಗಿ ನಾವು ಕೆಲಸ ಮಾಡಬೇಕು ಎಂದರು.ಯುವ ಪತ್ರಕರ್ತರಲ್ಲಿ ಕಲಿಕಾ ಮಟ್ಟ ಕುಸಿದಿದೆ. ಪ್ರಜ್ಞಾವಂತ ಪತ್ರಕರ್ತರ ಸಂಖ್ಯೆ ಕಡಿಮೆಯಾಗಿದೆ. ಓದುವ, ಕಲಿಯುವ ಆಸಕ್ತಿ ಯುವ ಪತ್ರಕರ್ತರಲ್ಲಿ ಕುಂದಿದೆ. ಅವಕಾಶಕ್ಕೆ ತಕ್ಕಂತೆ ಪತ್ರಕರ್ತರು ಬದಲಾವಣೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ ನೌಕರರ ಸಂಘ ರಾಜ್ಯ ಘಟಕ ಅಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅತಿಥಿಯಾಗಿ ಮಾತನಾಡಿ, ರಾಜ್ಯದಲ್ಲಿ ಮಾದರಿಯಾಗಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಕಾರ್ಯ ನಿರ್ವಹಿಸುತ್ತಿದೆ. ಟ್ರಸ್ಟ್ ನಲ್ಲಿ ಅಥಿತಿ ಗೃಹ ಮಾಡುವುದಾದರೆ ಅನುದಾನ ಕೊಡಿಸುವ ಜವಾಬ್ದಾರಿ ನಮ್ಮದು ಎಂದ ಅವರು, ಪ್ರಜಾಪ್ರಭುತ್ವದ ಜೀವಾಳವಾಗಿ ಪತ್ರಿಕಾರಂಗ ಕಾರ್ಯನಿರ್ವಹಿಸುತ್ತಿದೆ. ಸೋಷಿಯಲ್ ಮೀಡಿಯಾವನ್ನು ಇಂದು ನಿಯಂತ್ರಿಸುವ ಅವಶ್ಯಕತೆ ಇದೆ. ವಸ್ತುನಿಷ್ಠ ವರದಿ ಮಾಡುವ ಅಗತ್ಯ ಇದೆ ಎಂದರು.
ಕಾರ್ಯಕ್ರಮದಲ್ಲಿ ಪ್ರೆಸ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ನಾಗರಾಜ್ ನೇರಿಗೆ ಸ್ವಾಗತಿಸಿದರು. ಮೋಹನ್ ಕೃಷ್ಣ ನಿರೂಪಿಸಿದರು. ಸೌಮ್ಯ ಪ್ರಾರ್ಥಿಸಿದರು. ಕಿರಣ್ ಕಂಕಾರಿ ವಂದಿಸಿದರು.
ಸಾಧಕರಿಗೆ ಆತ್ಮೀಯ ಸನ್ಮಾನ
ಇದೇ ಸಂದರ್ಭ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು. ಚರಣೆ ಕಾರ್ಯಕ್ರಮದಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.