ಪತ್ರಕರ್ತರು ನಿಷ್ಪಕ್ಷಪಾತವಾಗಿ ಸತ್ಯವನ್ನು ಜನರಿಗೆ ತಲುಪಿಸಬೇಕು: ಮಲ್ಲೇಶ್ ಗುರೂಜಿ

KannadaprabhaNewsNetwork |  
Published : Jul 25, 2026, 01:45 AM IST
24ಕೆಎಂಎನ್ ಡಿ24 | Kannada Prabha

ಸಾರಾಂಶ

ಪತ್ರಿಕೆಗಳು ಸಮಾಜಕ್ಕೆ ದಾರಿದೀಪವಾಗಿವೆ. ಒಂದು ಸಣ್ಣ ಪೆನ್ನಿನ ಮೂಲಕ ಸತ್ಯವನ್ನು ಸಮಾಜದ ಮುಂದೆ ತರುವ ಶಕ್ತಿ ಪತ್ರಕರ್ತರಿಗಿದೆ. ಯಾವುದೇ ವ್ಯಕ್ತಿ, ಸಂಸ್ಥೆ ಅಥವಾ ವ್ಯವಸ್ಥೆ ತಪ್ಪು ಮಾಡಿದರೆ ಅದನ್ನು ನಿರ್ಭೀತಿಯಿಂದ ಜನರ ಮುಂದೆ ತರುವ ಹೊಣೆಗಾರಿಕೆ ಪತ್ರಕರ್ತರ ಮೇಲಿದೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ಪತ್ರಕರ್ತರು ಯಾರಿಗೂ ಹೆದರದೆ, ನಿಷ್ಪಕ್ಷಪಾತವಾಗಿ ಸತ್ಯವನ್ನು ಜನರಿಗೆ ತಲುಪಿಸಬೇಕು. ಸಮಾಜ ಸೇವೆಗಾಗಿ ನಿರಂತರವಾಗಿ ದುಡಿಯಬೇಕು ಎಂದು ಶ್ರೀ ಚೌಡೇಶ್ವರಿ ಬಸಪ್ಪನವರ ಕ್ಷೇತ್ರದ ಧರ್ಮದರ್ಶಿ ಶ್ರೀ ಮಲ್ಲೇಶ್ ಗುರೂಜಿ ಹೇಳಿದರು.

ಪಟ್ಟಣದ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿದ್ದು, ತಮ್ಮ ಕರ್ತವ್ಯವನ್ನು ನಿಷ್ಠೆ, ಪ್ರಾಮಾಣಿಕತೆ ಹಾಗೂ ಧೈರ್ಯದಿಂದ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪತ್ರಿಕೆಗಳು ಸಮಾಜಕ್ಕೆ ದಾರಿದೀಪವಾಗಿವೆ. ಒಂದು ಸಣ್ಣ ಪೆನ್ನಿನ ಮೂಲಕ ಸತ್ಯವನ್ನು ಸಮಾಜದ ಮುಂದೆ ತರುವ ಶಕ್ತಿ ಪತ್ರಕರ್ತರಿಗಿದೆ. ಯಾವುದೇ ವ್ಯಕ್ತಿ, ಸಂಸ್ಥೆ ಅಥವಾ ವ್ಯವಸ್ಥೆ ತಪ್ಪು ಮಾಡಿದರೆ ಅದನ್ನು ನಿರ್ಭೀತಿಯಿಂದ ಜನರ ಮುಂದೆ ತರುವ ಹೊಣೆಗಾರಿಕೆ ಪತ್ರಕರ್ತರ ಮೇಲಿದೆ ಎಂದು ಹೇಳಿದರು.

ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್.ರಾಘವೇಂದ್ರ ಮಾತನಾಡಿ, ಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದೆ. ಸಮಾಜದಲ್ಲಿ ನಡೆಯುವ ಬೆಳವಣಿಗೆಗಳು, ಸಮಸ್ಯೆಗಳು, ಸಾಧನೆಗಳು ಹಾಗೂ ಜನರ ಧ್ವನಿಯನ್ನು ನಿಖರವಾಗಿ ಜನರ ಮುಂದೆ ತರುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದರು.

ಪತ್ರಿಕೆಗಳು ಸಮಾಜದಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಮಹತ್ತರ ಕಾರ್ಯ ನಿರ್ವಹಿಸುತ್ತವೆ. ಸಾರ್ವಜನಿಕ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವಲ್ಲಿ ಪತ್ರಿಕೋದ್ಯಮದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಮಂಡ್ಯ ಮಲ್ಲೇಶ್ ಮಾತನಾಡಿ, ಪತ್ರಿಕೆಗಳೇ ಇಲ್ಲದಿದ್ದರೆ ಸಮಾಜದ ಸ್ಥಿತಿಯನ್ನು ಊಹಿಸುವುದೂ ಕಷ್ಟ. ಜನರ ಸಮಸ್ಯೆಗಳು, ಸರ್ಕಾರದ ಕಾರ್ಯಚಟುವಟಿಕೆಗಳು ಹಾಗೂ ಸಮಾಜದ ಒಳಿತು- ಕೆಡುಕುಗಳನ್ನು ಜನರಿಗೆ ತಲುಪಿಸುವ ಪ್ರಮುಖ ಮಾಧ್ಯಮವೇ ಪತ್ರಿಕೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪತ್ರಿಕಾ ವಿತರಕರಾದ ವಿ.ಕೆ.ಗೌತಮ್ ಹಾಗೂ ಜಿ.ಎಸ್.ಚಂದ್ರು ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾ ಪುರಸ್ಕಾರವನ್ನು ದಕ್ಷ ಪಟೇಲ್ ಎ.ಎಸ್., ದಕ್ಷ ಚಕ್ರವರ್ತಿ ಮತ್ತು ವರ್ಷಿಣಿ ಎನ್.ಸಿ. ಅವರಿಗೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯ ಎಚ್.ಆರ್.ಅನಂತೇಗೌಡ, ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಮ್, ರಾಜ್ಯ ಕಾರ್ಯದರ್ಶಿ ಸಿ.ಎನ್.ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಾಡುಕೊತ್ತನಹಳ್ಳಿ, ತಾಲೂಕು ಅಧ್ಯಕ್ಷ ಶಿವನಂಜಯ್ಯ, ಜಿಲ್ಲಾ ಉಪಾಧ್ಯಕ್ಷ ಕೆ.ಸಿ.ಮಂಜುನಾಥ್, ರವಿ ಸವಂದಿಪುರ, ಚಿನಕುರುಳಿ ಲೋಕೇಶ್, ಜಿಲ್ಲಾ ಕಾರ್ಯದರ್ಶಿಗಳಾದ ಕೆ.ಎನ್.ನಾಗೇಗೌಡ, ಎಚ್.ಶಿವರಾಜು, ರಾಷ್ಟ್ರೀಯ ಮಂಡಳಿ ಸದಸ್ಯ ಎಂ.ಎಸ್. ಶಿವಪ್ರಕಾಶ್, ತಾಲೂಕು ಉಪಾಧ್ಯಕ್ಷ ಸಿ.ಹರೀಶ್, ಪ್ರಧಾನ ಕಾರ್ಯದರ್ಶಿ ಎಂ.ಆರ್.ಚಕ್ರಪಾಣಿ, ಕಾರ್ಯದರ್ಶಿ ಎಂ.ಪಿ.ವೆಂಕಟೇಶ್, ಖಜಾಂಚಿ ಪಿ.ನಂದೀಶ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೈಬರ್ ಅಪರಾಧಗಳ ಬಗ್ಗೆ ಮಹಿಳೆಯರು ಜಾಗೃತರಾಗಿರಿ
ಮೆದುಳಿನ ಕಾಯಿಲೆಗಳಿಗೆ ಹಾಸನದಲ್ಲೇ ಪರಿಣತ ಚಿಕಿತ್ಸೆ ಲಭ್ಯ