ಹುಬ್ಬಳ್ಳಿ:
ವಕ್ಫ್ ಕಾಯ್ದೆ ತಿದ್ದುಪಡಿ ಕುರಿತು ನೇಮಕವಾಗಿರುವ ಜಂಟಿ ಸದನ ಸಮಿತಿ ಅಧ್ಯಕ್ಷ ಜಗದಂಬಿಕಾ ಪಾಲ್ ಅವರನ್ನು ನಗರದಲ್ಲಿ ಬಿಜೆಪಿ ನಾಯಕರ ನಿಯೋಗದೊಂದಿಗೆ ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
ಹಾವೇರಿ ಜಿಲ್ಲೆಯ ಶಿಗ್ಗಾಂವಿ-ಸವಣೂರು ಸೇರಿದಂತೆ ಎಲ್ಲ ತಾಲೂಕುಗಳಲ್ಲಿ ವಕ್ಫ್ ಬೋರ್ಡ್ನಿಂದ ರೈತರಿಗೆ, ಆಸ್ಪತ್ರೆ, ಶಾಲೆ, ಕಾಗಿನೆಲೆ ಮಠಕ್ಕೆ ನೊಟೀಸ್ ನೀಡಿದ್ದಾರೆ. ಇದನ್ನು ಜೆಪಿಸಿ ಅಧ್ಯಕ್ಷರ ಗಮನಕ್ಕೆ ತಂದಿದ್ದೇವೆ. ಕೇವಲ ಹಾವೇರಿ ಜಿಲ್ಲೆಯಷ್ಟೇ ಅಲ್ಲ ಧಾರವಾಡ, ವಿಜಯಪುರ, ಕೊಪ್ಪಳ, ಗದಗ, ಮಂಡ್ಯ, ಮೈಸೂರು ಜಿಲ್ಲೆ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ರೈತರಿಗೆ ನೋಟಿಸ್ ಕೊಟ್ಟಿದ್ದಾರೆ ಎಂದರು. ವಕ್ಫ್ ಕಾಯಿದೆ ದುರ್ಬಳಕೆ ಮಾಡಿಕೊಂಡಿರುವುದರಿಂದ ಈ ಸಮಸ್ಯೆ ಉಲ್ಬಣಗೊಂಡಿದೆ. ಈ ಬಗ್ಗೆ ಸಮಿತಿ ಗಮನಕ್ಕೆ ತಂದಿದ್ದೇವೆ. ಈ ಸಮಿತಿ ತಳಮಟ್ಟದಲ್ಲಿ ವಾಸ್ತವ ಏನಿದೆ ಎನ್ನುವುದನ್ನು ತನ್ನ ವರದಿಯಲ್ಲಿ ಪ್ರಸ್ತಾಪಿಸಿ ಕಾಯ್ದೆ ತಿದ್ದುಪಡಿಗೆ ಸದನಕ್ಕೆ ಸಲ್ಲಿಸಲಿದೆ ಎಂದು ಹೇಳಿದರು.ತರಾತುರಿಯ ಅದಾಲತ್:
ಕಾಂಗ್ರೆಸಿಗೆ ವಕ್ಫ್ ದೊಡ್ಡದು:
ಒಂದು ವೇಳೆ ಬಿಜೆಪಿ ಇದನ್ನು ವಿರೋಧ ಮಾಡದಿದ್ದರೆ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿತ್ತು. ಇದು ಕ್ಷಮೆಗೂ ಅರ್ಹವಲ್ಲ. ರೈತರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ ರಾಜ್ಯ ಸರ್ಕಾರ ಎಷ್ಟು ಬೇಗ ತೊಲಗುತ್ತೋ ಅಷ್ಟು ಒಳ್ಳೆಯದು ಎಂದು ಕಿಡಿಕಾರಿದರು.
ಉಪಚುನಾವಣೆಗೆ ಮಂತ್ರಿಗಳು, ಶಾಸಕರ ದಂಡೇ ಬಂದು ಕುಳಿತಿದೆ. ಸರ್ಕಾರ ಅಧಿಕಾರಿಗಳ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಅಲ್ಲದೇ ಚುನಾವಣೆಯಲ್ಲಿ ಹಣದ ಹೊಳೆ ಹರಿಸುತ್ತಿದ್ದಾರೆ ಎಂದು ಆರೋಪಿಸಿದರು.