ನೆರೆಪೀಡಿತ ಪ್ರದೇಶಕ್ಕೆ ನ್ಯಾಯಾಧೀಶರ ಭೇಟಿ

KannadaprabhaNewsNetwork |  
Published : Aug 01, 2024, 12:16 AM IST
30ಎಚ್ಎಸ್ಎನ್11 : ಕೆಎಸ್‌ಎಲ್‌ಎಸ್‌ಎ ನಿರ್ದೇಶನದಂತೆ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ನ್ಯಾ.ಎಂ. ಎಸ್.ಶಶಿಕಲಾ | Kannada Prabha

ಸಾರಾಂಶ

ಬೇಲೂರು ತಾಲೂಕಿನಲ್ಲಿ ಮಳೆಯಿಂದ ಹಾನಿಯಾಗಿರುವ ಮನೆ ಮತ್ತು ಬೆಳೆ ನಾಶ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಅನ್ವಯ ಬೇಲೂರು ತಾಲೂಕು ದಂಡಾಧಿಕಾರಿಗಳಾದ ಮಮತಾರವರ ಸಹಕಾರದಿಂದ ಬೇಲೂರಿನ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎಸ್.ಶಶಿಕಲಾರವರು ತಾಲೂಕು ದಂಡಾಧಿಕಾರಿಗಳು ಸಿದ್ಧಪಡಿಸಿರುವ ಮಳೆ ಹಾನಿಗೊಳಗಾಗಿರುವವರ ಪಟ್ಟಿಯನ್ನಾಧರಿಸಿ ಹಲವು ಪ್ರದೇಶಗಳಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕಿನ ಹಲವು ಕಡೆ, ಮಳೆಯಿಂದ ಹಾನಿಯಾಗಿರುವ ಮನೆ ಮತ್ತು ಬೆಳೆ ನಾಶ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಅನ್ವಯ ಬೇಲೂರು ತಾಲೂಕು ದಂಡಾಧಿಕಾರಿಗಳಾದ ಮಮತಾರವರ ಸಹಕಾರದಿಂದ ಬೇಲೂರಿನ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎಸ್.ಶಶಿಕಲಾರವರು ತಾಲೂಕು ದಂಡಾಧಿಕಾರಿಗಳು ಸಿದ್ಧಪಡಿಸಿರುವ ಮಳೆ ಹಾನಿಗೊಳಗಾಗಿರುವವರ ಪಟ್ಟಿಯನ್ನಾಧರಿಸಿ ಹಲವು ಪ್ರದೇಶಗಳಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.

ಹಾನಿಗೊಳಗಾಗಿರುವ ಜನರಿಗೆ ಶೀಘ್ರದಲ್ಲಿ ಪರಿಹಾರ ಒದಗಿಸಿ ಕೊಡುವಂತೆ ತಾಲೂಕು ದಂಡಾಧಿಕಾರಿಯವರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಬೇಲೂರು ತಾಲೂಕು ತಾಲೂಕು ಕಚೇರಿಯ 2ನೇ ದರ್ಜೆ ತಹಸೀಲ್ದಾರ್‌ ಅಶೋಕ್, ಪೊಲೀಸ್ ಸಿಬ್ಬಂದಿ ನ್ಯಾಯಾಲಯದ ಪ್ರಕಾಶ್, ಗಿರಿಯಪ್ಪ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!