ನ್ಯಾಯಮೂರ್ತಿ ನಾಗಮೋಹನ್ ದಾಸ್ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ

KannadaprabhaNewsNetwork |  
Published : Aug 11, 2025, 12:30 AM IST
ನ್ಯಾಯಮೂರ್ತಿ ನಾಗಮೋಹನ್ ದಾಸ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅಕ್ರೋಶ | Kannada Prabha

ಸಾರಾಂಶ

ನ್ಯಾಯಮೂರ್ತಿ ನಾಗಮೋಹನ್‌ ದಾಸ್ ಸಮೀಕ್ಷೆ ವರದಿಯನ್ನು ಜಾರಿಗೊಳಿಸಬಾರದೆಂದು ಒತ್ತಾಯಿಸಿ ಬಲಗೈ ಸಮುದಾಯದ ವತಿಯಿಂದ ನಾಗಮೋಹನ್ ದಾಸ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ನ್ಯಾಯಮೂರ್ತಿ ನಾಗಮೋಹನ್‌ ದಾಸ್ ಸಮೀಕ್ಷೆ ವರದಿಯನ್ನು ಜಾರಿಗೊಳಿಸಬಾರದೆಂದು ಒತ್ತಾಯಿಸಿ ಬಲಗೈ ಸಮುದಾಯದ ವತಿಯಿಂದ ನಾಗಮೋಹನ್ ದಾಸ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಭುವನೇಶ್ವರಿ ವೃತ್ತದಲ್ಲಿ ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ ಪಾಪು ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ನಾಗಮೋಹನ್ ದಾಸ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ವೆಂಕಟರಮಣಸ್ವಾಮಿ ಮಾತನಾಡಿ, ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆ ವರದಿ ಅವೈಜ್ಞಾನಿಕವಾಗಿದೆ. ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ. ನಾಗಮೋಹನ್ ದಾಸ್ ಅವರು ಹೊಲಯ ಸಮುದಾಯಕ್ಕೆ ಮರಣ ಶಾಸನ ವರದಿ ನೀಡಿದ್ದಾರೆ. ಹಾಗಾಗಿ ಈ ವರದಿಯನ್ನು ಯಥಾವತ್ತಾಗಿ ಜಾರಿ ಮಾಡದೇ ತಿರಸ್ಕರಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಸಚಿವ ಸಂಪುಟ ಕರೆದು ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗವು ಸಲ್ಲಿಸಿರುವ ಸಮೀಕ್ಷೆ ವರದಿಯನ್ನು ಪುನರ್ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬಲಗೈ ಸಮುದಾಯಕ್ಕೆ ಸೇರಿದ ಛಲವಾದಿ/ ಹೊಲಯ ಒಳಮೀಸಲಾತಿಯ ಜಾಗೃತಿ ಸಮಿತಿಯ ಪ್ರಮುಖರು, ಜಿ.ಪಂ..ಮಾಜಿ ಅಧ್ಯಕ್ಷ ,ಅಯ್ಯನಪುರ ಶಿವಕುಮಾರ್, ಸಿ.ಎಂ.ಶಿವಣ್ಣ, ಆಲೂರು ನಾಗೇಂದ್ರ, ನಾಗಯ್ಯ, ವಕೀಲ ದಲಿತರಾಜ್, ಆಟೋ ಉಮೇಶ್ , ನಾಗೇಶ್, ಶಿವಣ್ಣ ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಿಗೆ ಪಠೇತರ ಚಟುವಟಿಕೆಗಳೂ ಮುಖ್ಯ
ಅಸಂಘಟಿತ ಕಾರ್ಮಿಕರಿಗೆ ವಸತಿ, ಸಾಲ ಸೌಲಭ್ಯಕ್ಕೆ ಯತ್ನ: ಶ್ರೀನಿವಾಸ್ ಭರವಸೆ