ಮೂಡುಬಿದಿರೆ: ಸಜ್ಜನ ರಾಜಕಾರಣಿಯಾಗಿ ರಾಜಕೀಯ ರಂಗದಲ್ಲಿ ಮಾತ್ರವಲ್ಲ ಸಾಮಾಜಿಕ, ಧಾರ್ಮಿಕ ಸೇವೆಯಲ್ಲೂ ತನ್ನದೇ ಛಾಪು ಮೂಡಿಸಿದವರು ಅಮರನಾಥ ಶೆಟ್ಟಿ. ಅವರ ಹೆಸರಿನಲ್ಲಿ ಸ್ಥಾಪನೆಯಾಗಿರುವ ಟ್ರಸ್ಟ್ ಅವರ ಆಶಯಗಳನ್ನು ಈಡೇರಿಸುವ ಪ್ರಯತ್ನವನ್ನು ನಿರಂತರ ಮಾಡಲಿ ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ನುಡಿದರು.
ಡಾ.ಎಂ ಶಾಂತರಾಮ ಶೆಟ್ಟಿ ಶಿಬಿರ ಉದ್ಘಾಟಿಸಿದರು. ಶಾಸಕ ಉಮಾನಾಥ ಎ.ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಕುದ್ರೋಳಿ ಶ್ರೀ ಗೋಕರ್ಣಾಥೇಶ್ವರ ದೇವಳದ ಕೋಶಾಧಿಕಾರಿ ಪದ್ಮರಾಜ್ ರಾಮಯ್ಯ, ಅಮರನಾಥ ಶೆಟ್ಟಿ ಮನೆತನದ ಹಿರಿಯರಾದ ಪ್ರತಾಪ್ಚಂದ್ರ ಶೆಟ್ಟಿ ಅದಾನಿ ಯುಪಿಸಿಎಲ್ನ ಅಧ್ಯಕ್ಷ ಕಿಶೋರ್ ಆಳ್ವ, ಉದ್ಯಮಿ ಕೆ.ಶ್ರೀಪತಿ ಭಟ್, ಡಾ. ಪ್ರಶಾಂತ್ ಶೆಟ್ಟಿ ಡಾ. ಕಮಲಾಕ್ಷ ಶೆಣೈ, ಡಾ.ಕವಿತಾ ಮುಖ್ಯ ಅತಿಥಿಯಾಗಿದ್ದರು. ಟ್ರಸ್ಟಿಗಳಾದ ಜಯಶ್ರೀ ಅಮರನಾಥ ಶೆಟ್ಟಿ, ಆಶ್ರಿತಾ ಪಿ.ಶೆಟ್ಟಿ ಉಪಸ್ಥಿತರಿದ್ದರು. ವೇಣುಗೋಪಾಲ್ ಶೆಟ್ಟಿ ನಿರೂಪಿಸಿದರು.