ಕೆ.ಆರ್.ಪೇಟೆ: ಕ್ರೀಡಾಂಗಣಗಳ ನಿರ್ವಹಣೆ ಜವಾಬ್ದಾರಿ ಮಿತ್ರ ಫೌಂಡೇಷನ್‌ಗೆ

KannadaprabhaNewsNetwork |  
Published : Aug 27, 2025, 01:00 AM IST
26ಕೆಎಂಎನ್ ಡಿ14 | Kannada Prabha

ಸಾರಾಂಶ

ಕೆ.ಆರ್.ಪೇಟೆ ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ಬಯಲು ಕ್ರೀಡಾಂಗಣ ಮತ್ತು ಡಾ.ಬಾಲಗಂಗಾಧರನಾಥ ಸ್ವಾಮೀಜಿ ಒಳಾಂಗಣ ಕ್ರೀಡಾಂಗಣದ ನಿರ್ವಹಣೆಯನ್ನು ರಾಜ್ಯ ಸರ್ಕಾರ ಮೈಸೂರಿನ ಮಿತ್ರ ಫೌಂಡೇಷನ್‌ಗೆ ವಹಿಸಿರುವ ಹಿನ್ನೆಲೆಯಲ್ಲಿ ಸಂಸ್ಥೆ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ ರಾಮೇಗೌಡ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕುಂದು ಕೊರತೆಗಳ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ಬಯಲು ಕ್ರೀಡಾಂಗಣ ಮತ್ತು ಡಾ.ಬಾಲಗಂಗಾಧರನಾಥ ಸ್ವಾಮೀಜಿ ಒಳಾಂಗಣ ಕ್ರೀಡಾಂಗಣದ ನಿರ್ವಹಣೆಯನ್ನು ರಾಜ್ಯ ಸರ್ಕಾರ ಮೈಸೂರಿನ ಮಿತ್ರ ಫೌಂಡೇಷನ್‌ಗೆ ವಹಿಸಿರುವ ಹಿನ್ನೆಲೆಯಲ್ಲಿ ಸಂಸ್ಥೆ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ ರಾಮೇಗೌಡ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕುಂದು ಕೊರತೆಗಳ ಪರಿಶೀಲನೆ ನಡೆಸಿದರು.

ಪಟ್ಟಣದಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 14 ಕೋಟಿ ರು. ಅಂದಾಜು ವೆಚ್ಚದಲ್ಲಿ ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಿಸಿ ಅದಕ್ಕೆ ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳ ಹೆಸರಿಟ್ಟಿತು.

ಒಳಾಂಗಣ ಕ್ರೀಡಾಂಗಣದಲ್ಲಿ ಸುಸಜ್ಜಿತ ಜಿಮ್, ಈಜುಕೋಳ, ಟೆನ್ನಿಸ್, ಟೇಬಲ್ ಟೆನ್ನಿಸ್ ಕೋರ್ಟ್, ಕಬಡ್ಡಿ ಆಟದ ಮೈದಾನ, ಯೋಗಾಸನ ಮುಂತಾದ ಹಲವು ಕ್ರೀಡಾ ಸೌಲಭ್ಯಗಳಿದ್ದರೂ ನಿರ್ವಹಣೆ ಕೊರತೆಯಿಂದ ನಲುಗುತ್ತಿತ್ತು.

ಶಾಸಕ ಎಚ್.ಟಿ.ಮಂಜು ಅವರು ಅಧಿವೇಶದಲ್ಲಿ ವಿಷಯ ಪ್ರಸ್ತಾಪಿಸಿ ಸ್ಟೇಡಿಯಂ ಸುಧಾರಣೆ ಬಗ್ಗೆ ಸದನದಲ್ಲಿ ಮುಖ್ಯಮಂತ್ರಿಗಳಿಂದ ಉತ್ತರ ಪಡೆದಿದ್ದರು. ಸದನದಲ್ಲಿ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 18ರಿಂದ ಜಾರಿಗೆ ಬರುವಂತೆ ನಿರ್ವಹಣೆ ಜವಾಬ್ದಾರಿಯನ್ನು ಮಿತ್ರ ಫೌಂಡೇಷನ್ ಸಂಸ್ಥೆಗೆ ವಹಿಸಿದ್ದು, ಸಂಸ್ಥೆ ಅಧ್ಯಕ್ಷ ವಿಜಯರಾಮೇಗೌಡ ಸ್ಟೇಡಿಯಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು, ಈಗಾಗಲೇ ಕ್ರೀಡಾಂಗಣಗಳ ಸಮಸ್ಯೆಗಳ ಪಟ್ಟಿ ಮಾಡಿದ್ದೇನೆ. ವಿದ್ಯತ್ ಬಿಲ್ ಪಾವತಿಸಿ, ನೀರು ಮತ್ತು ಶೌಚಾಲಯ ನಿರ್ವಹಣೆಗೆ ತಕ್ಷಣವೇ ಕ್ರಮ ವಹಿಸುತ್ತಿದ್ದೇನೆ. ದೈನಂದಿನ ವಾಯು ವಿಹಾರಿಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸಬೇಕಾಗಿದೆ ಎಂದರು.

ಈಜುಕೊಳದ ನೀರು ಪಾಚಿಕಟ್ಟಿದೆ. ಇದರ ನಿರ್ವಹಣಾ ಯಂತ್ರಗಳು ಸೇರಿ ಎಲ್ಲಾ ಘಟಕಗಳ ಪರಿಶೀಲನೆ ಮಾಡಿದ್ದೇನೆ. ತಾಲೂಕಿನ ಕ್ರೀಡಾಪಟುಗಳನ್ನು ಉತ್ತೇಜಿಸುವ ಕೋಚಿಂಗ್ ಸೆಂಟರ್ ಆಗಿ ರೂಪಿಸುವುದು ನನ್ನ ಬಯಕೆ. ಈಗಾಗಲೇ ಅಂತರ ರಾಷ್ಟ್ರೀಯ ಮಟ್ಟದ ಇಬ್ಬರು ಕ್ರೀಡಾಪುಟಗಳನ್ನು ಸಂಪರ್ಕಿಸಿದ್ದು, ಅವರ ಮೂಲಕ ಒಳಾಂಗಣ ಕ್ರೀಡಾಂಗಣದಲ್ಲಿ ಬೇಕಾದ ಉತ್ತಮ ಸೌಲಭ್ಯಗಳ ಬಗ್ಗೆ ಮಾರ್ಗದರ್ಶನ ಪಡೆದು ಅಭಿವೃದ್ಧಿ ಪಡಿಸಲಾಗುವುದು ಎಂದರು.

ತಾಲೂಕಿನ ಮೂರ್‍ನಾಲ್ಕು ಮಂದಿ ಅಂತಾರಾಷ್ಟ್ರೀಯ ಕ್ರೀಡಾಪಟುಗಳಿದ್ದಾರೆ. ಶಾಸಕರ ಸಹಕಾರ ಪಡೆದು ಸೂಕ್ತ ದಿನಾಂಕ ನಿಗಧಿ ಪಡಿಸಿ ಅಂತಾರಾಷ್ಟ್ರೀಯ ಕ್ರೀಡಾಪಟುಗಳನ್ನು ಗೌರವಿಸುವ ಮೂಲಕ ಸ್ಟೇಡಿಯಂಗೆ ಹೊಸ ಕಾಯಕಲ್ಪ ನೀಡುವುದಾಗಿ ತಿಳಿಸಿದರು.

ಈ ವೇಳೆ ಮುಖಂಡರಾದ ಬಲ್ಲೇನಹಳ್ಳಿ ರಮೇಶ್, ಬಸವರಾಜು, ಅಜಯ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ