ಕನ್ನಡಪ್ರಭ ವಾರ್ತೆ ಮಂಡ್ಯ
ಮಂಡ್ಯ ನಗರದಲ್ಲಿ ಶುಕ್ರವಾರ ನಡೆದ ಮಂಡ್ಯ ಸಕ್ಕರೆನಾಡು ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಶಿಕ್ಷಕರ, ಎಂಜಿನಿಯರ್ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆ.ಎಸ್.ಮೋಹನ್ ಕಂಪಲಾಪುರ ನೇತೃತ್ವದಲ್ಲಿ ಉತ್ತಮ ಸೇವಾ ಚಟುವಟಿಕೆ ನಡೆಸಿದ ಕಾರಣ ಮತ್ತೊಮ್ಮೆ ಅಧ್ಯಕ್ಷರಾಗಿದ್ದಾರೆ. ಈ ವರ್ಷವೂ ಅಗತ್ಯದ ಜನರಿಗೆ ನೆರವಾಗಿರಿ ಎಂದು ಪ್ರಮಾಣವಚನ ಬೋಧಿಸಿದರು. ದೇಶ ಕಟ್ಟುವಲ್ಲಿ ಶಿಕ್ಷಕರು ಮತ್ತು ಎಂಜಿನಿಯರ್ಗಳ ಪಾತ್ರ ಅಮೂಲ್ಯವಾದುದು ಎಂದರು.
ಬಳಿಕ ಎಂ.ಎಂ.ಫೌಂಡೇಷನ್ ಅಧ್ಯಕ್ಷ ಮಹಾಲಿಂಗೇಗೌಡ ಮುದ್ದನಘಟ್ಟ ಮಾತನಾಡಿ, ಅಗತ್ಯವುಳ್ಳ ಜನರಿಗೆ ಸೇವೆ ಮಾಡಲು ನಾವು ಕಟಿಬದ್ಧರಾಗಿದ್ದು ಸಕ್ಕರೆನಾಡು ಲಯನ್ಸ್ ಕ್ಲಬ್ ಜತೆಗೆ ಎಂ.ಎಂ.ಫೌಂಡೇಶನ್ ಹೆಚ್ಚಿನ ಸೇವಾ ಕಾರ್ಯಕ್ರಮ ನಡೆಸಲಾಗುವುದು ಎಂದರು.ಬಳಿಕ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕೆ.ಎಸ್.ಮೋಹನ್ ಕಂಪಲಾಪುರ ಮಾತನಾಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯನ್ನು ಮಾದರಿ ಶಾಲೆ ನಿರ್ಮಾಣ ಮಾಡಲು ದತ್ತು ತೆಗೆದುಕೊಳ್ಳಲಾಗಿದೆ ಎಂದರು. ಶಿಕ್ಷಕರ, ಎಂಜಿನಿಯರ್ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕುರಿತು ಶಿಕ್ಷಕ ಕೆ.ಆರ್.ಶಶಿಧರ ಈಚಗೆರೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕ್ಲಬ್ ಅಧ್ಯಕ್ಷ ಕೆ.ಎಸ್.ಮೋಹನ್ ಕಂಪಲಾಪುರ, ನಿರ್ದೇಶಕರಾದ ಕೆ.ಪ್ರಸನ್ನಕುಮಾರ್, ನಿವೃತ್ತ ಮುಖ್ಯ ಶಿಕ್ಷಕ ಶಿವರಾಮು, ಎಚ್.ಚಂದ್ರಶೇಖರ್, ಬಿ.ಎನ್.ಚಂದ್ರಶೇಖರ್, ಎಸ್.ನಂದೀಶ್, ಸಿದ್ದರಾಜು, ಸಿದ್ದೇಗೌಡ, ಉಮೇಶ್ ಸೇರಿದಂತೆ ಹಲವರು ಇದ್ದರು.