ಕಬಕ-ಪುತ್ತೂರು ರೈಲು ನಿಲ್ದಾಣ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರು. ಮಂಜೂರು: ಕ್ಯಾ. ಚೌಟ

KannadaprabhaNewsNetwork |  
Published : Apr 01, 2026, 02:45 AM IST
ಕ್ಯಾ.ಬ್ರಿಜೇಶ್‌ ಚೌಟ | Kannada Prabha

ಸಾರಾಂಶ

ಕಬಕ- ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರು. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಕಬಕ- ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರು. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.ಈ ಯೋಜನೆಯಡಿ ಕಬಕ ಪುತ್ತೂರು ನಿಲ್ದಾಣದ ಪ್ಲಾಟ್‌ಫಾರ್ಮ್ ನಂ.1ರಲ್ಲಿ 2.91 ಕೋಟಿ ರು. ವೆಚ್ಚದಲ್ಲಿ ಬೃಹತ್ ಶೆಲ್ಟರ್ ನಿರ್ಮಾಣ ಮಾಡಲಾಗುತ್ತದೆ. ಪ್ರಸ್ತುತ ಈ ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣಕ್ಕೆ ಕೇವಲ 531 ಚ. ಮೀಟರ್ ಉದ್ದದ ಶೆಲ್ಟರ್ ಇದೆ. ಇದೀಗ ಈ ಯೋಜನೆಯಡಿ 3392 ಚ.ಮೀಟರ್ ವಿಸ್ತೀರ್ಣದ ಬೃಹತ್ ಶೆಲ್ಟರ್ ನಿರ್ಮಾಣ ಆಗಲಿದೆ. ಶೆಲ್ಟರ್ ನಿರ್ಮಾಣಕ್ಕೆ ಸ್ಥಳ ಗುರುತು ಮಾಡುವ ಪ್ರಕ್ರಿಯೆ ಮುಗಿದಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ಈ ಕಾಮಗಾರಿ ಪೂರ್ಣಗೊಂಡರೆ ಕಬಕ- ಪುತ್ತೂರು ರೈಲ್ವೇ ಸ್ಟೇಶನ್‌ನಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.ಇದರೊಂದಿಗೆ ನಿಲ್ದಾಣದಲ್ಲಿ ಪ್ರಯಾಣಿಕರು ಸುಲಭವಾಗಿ ಓಡಾಡಲು ಅನುಕೂಲವಾಗುವಂತೆ ನಿಲ್ದಾಣದಲ್ಲಿ ಸದ್ಯ ಇರುವ ಮೇಲ್ಸೇತುವೆಗೆ ಪ್ಲಾಟ್‌ಫಾರ್ಮ್ ನಂ.2ರ ಬಳಿ 2 ಲಿಫ್ಟ್‌ ವ್ಯವಸ್ಥೆ ಅಳವಡಿಸುವ ಪ್ರಸ್ತಾವನೆ ಇದೆ. ಇದಕ್ಕೆ ಅಂದಾಜು 1.33 ಕೋಟಿ ರು. ವೆಚ್ಚ ನಿರೀಕ್ಷಿಸಲಾಗಿದ್ದು, ಪ್ರಸ್ತುತ ಈ ಯೋಜನೆಯು ರೈಲ್ವೆ ಕೇಂದ್ರ ಕಚೇರಿಯಲ್ಲಿ ಪರಿಶೀಲನೆ ಹಂತದಲ್ಲಿದೆ ಎಂದು ಸಂಸದರು ತಿಳಿಸಿದ್ದಾರೆ.ಪತ್ರ ಬರೆದಿದ್ದ ಸಂಸದ:

ಕಬಕ ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಯ ಅಗತ್ಯತೆಯನ್ನು ಮನಗಂಡಿದ್ದ ಸಂಸದ ಕ್ಯಾ. ಬ್ರಿಜೇಶ್ ಚೌಟ, 2024ರ ನವೆಂಬರ್‌ನಲ್ಲಿ ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್‌ಗೆ ಪತ್ರ ಬರೆದು ಶೆಲ್ಟರ್ ವಿಸ್ತರಿಸಲು ಕ್ರಮ ಕೈಗೊಳ್ಳುವಂತೆ ಕೋರಿದ್ದರು. ಮಾತ್ರವಲ್ಲದೆ, ಈ ನಿಟ್ಟಿನಲ್ಲಿ ರೈಲ್ವೆ ಇಲಾಖೆಯು ಆದ್ಯತೆ ಮೇಲೆ ಅಗತ್ಯ ಅನುದಾನ ಬಿಡುಗಡೆ ಮಾಡಿಸಲು ಪ್ರಯತ್ನಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಲು ಜನ ತೀರ್ಮಾನ
ಎರಡನೇ ದಿನವೂ ಸಿಎಂ ಬಿರುಸಿನ ಪ್ರಚಾರ