ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಕಾಡಾ ಆವರಣದಲ್ಲಿ ಆರಂಭಿಸಲಾದ ಕಚೇರಿಯಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಹೋಮ ನಡೆಯಿತು. ಬಳಿಕ ಮೂರು ಗಂಟೆಗೆ ನಗರದ ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಕೆ.ಪಿ. ವೀರಪ್ಪ ಅವರ ಜತೆಗೂಡಿ ಸಂಸದ ಯದುವೀರ್ ಅವರ ಟೇಪು ಕತ್ತರಿಸಿ ಕಚೇರಿ ಉದ್ಘಾಟಿಸಿದರು.
ನಂತರ ಚಾಮುಂಡೇಶ್ವರಿ, ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ತಮ್ಮ ಆಸನದಲ್ಲಿ ಕುಳಿತರು. ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ ಸಚಿವರಾದ ಎಸ್.ಎ. ರಾಮದಾಸ್, ಸಾ.ರಾ. ಮಹೇಶ್, ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ, ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಮೊದಲಾದವರು ಇದ್ದರು.ಮಧ್ಯಾಹ್ನದ ತನಕ ಕಚೇರಿ
ಸಾರ್ವಜನಿಕರು ಯಾವುದೇ ಕೆಲಸ ಕಾರ್ಯಗಳಿಗೆ ಸಂಪರ್ಕಿಸಬಹುದು. ಮೊದಲು ಅರಮನೆ ಕಚೇರಿ ಸಾರ್ವಜನಿಕ ಕಟ್ಟಡದಲ್ಲಿ ಇತ್ತು. ಈಗ ಅದೇ ಕಟ್ಟಡದಲ್ಲಿ ಕಚೇರಿ ತೆರೆಯಲಾಗಿದೆ. ಸಂಸದರ ಕಚೇರಿ ಸಾರ್ವಜನಿಕರ ಕಚೇರಿ ಆಗಿರುತ್ತದೆ. ಇಲ್ಲಿಗೆ ಬರುವುದಕ್ಕೆ ಯಾವುದೇ ಸಮಯ ನಿಗದಿ ಇಲ್ಲ. ಯಾವಾಗ ಬೇಕಾದರೂ ಭೇಟಿ ಆಗಬಹುದು ಎಂದು ಅವರು ತಿಳಿಸಿದರು.
ಆರ್ಯವೈಶ್ಯ ಕೋ ಆಪರೇಟಿವ್ ಬ್ಯಾಂಕ್ ಪದಾಧಿಕಾರಿಗಳು, ಅರಸು ಸಮಾಜದ ಪ್ರಮುಖರು ಸೇರಿದಂತೆ ನೂರಾರು ಮಂದಿ ಅಗಮಿಸಿ ಸಂಸದರಿಗೆ ಪೇಟ ತೊಡಿಸಿ ಶಾಲು ಹೊದಿಸಿ ಸನ್ಮಾನಿಸಿದರು.