-ಟ್ಯಾಂಕರ್ಗಟ್ಟಲೇ ಕೆಮಿಕಲ್ ಕಂಪನಿಗಳ ರಾಸಾಯನಿಕ ತ್ಯಾಜ್ಯ ಹಳ್ಳಕ್ಕೆ ಬಿಡುಗಡೆ । ಸ್ಥಳಕ್ಕೆ ಪರಿಸರ ಮಂಡಳಿ, ಪೊಲೀಸ್ ಅಧಿಕಾರಿಗಳ ಭೇಟಿ
-ಕಡೇಚೂರು, ರಾಚನಹಳ್ಳಿ, ಶೆಟ್ಟಿಹಳ್ಳಿ ಗ್ರಾಮಗಳಲ್ಲಿ ಕೆಮಿಕಲ್ ತ್ಯಾಜ್ಯ ಹರಿಬಿಟ್ಟ ಕಂಪನಿಗಳು !
-----ಕನ್ನಡಪ್ರಭ ಸರಣಿ ವರದಿ ಭಾಗ : 118
ಕನ್ನಡಪ್ರಭ ವಾರ್ತೆ ಯಾದಗಿರಿ
ಒಂದು ದಿನದ ಹಿಂದಷ್ಟೇ, ಇಂತಹುದ್ದೇ ಘಟನೆಯ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾದ ಬೆನ್ನಲೇ, ಶನಿವಾರ ತಡರಾತ್ರಿ ಟ್ಯಾಂಕರುಗಳಟ್ಟಲೇ ರಾಸಾಯನಿಕ ತ್ಯಾಜ್ಯ ಕಡೇಚೂರು, ಶೆಟ್ಟಿಹಳ್ಳಿ ಹಾಗೂ ರಾಚನಹಳ್ಳಿ ಭಾಗಕ್ಕಂಟಿಕೊಂಡಂತೆ ಇರುವ ಪ್ರಮುಖ ರಸ್ತೆಗಳ ಪಕ್ಕದ ಹಳ್ಳದ ಸೇತುವೆಯಲ್ಲಿ ಚೆಲ್ಲಿ ಹೋಗಿರುವುದು ಜನರ ಆಕ್ರೋಶ- ಆತಂಕಕ್ಕೆ ಕಾರಣವಾಗಿದೆ.
ಪರಿಸರ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಸರ ಅಧಿಕಾರಿಗಳ ತಂಡ, ರಾಸಾಯನಿಕ ತ್ಯಾಜ್ಯದ ಮಾದರಿ ಸಂಗ್ರಹಿಸಿದೆ. ಪ್ರಾದೇಶಿಕ ಪ್ರಯೋಗಾಲಯಕ್ಕೆ ಕಳುಹಿಸಿ, ವರದಿ ಪಡೆಯುವ ಸಿದ್ಧತೆ ನಡೆಸಿದೆ. ಎರಡು ದಿನಗಳ ಹಿಂದೆ ಇಂತಹುದ್ದೇ ತ್ಯಾಜ್ಯ ದ್ರವ ಮಾದರಿ ಸಂಗ್ರಹಿಸಿದ್ದ ಅಧಿಕಾರಿಗಳು, ಕಲಬುರಗಿ ಪ್ರಾದೇಶಿಕ ಪ್ರಯೋಗಾಲಯಕ್ಕೆ ವೈಜ್ಞಾನಿಕ ಪರೀಕ್ಷೆಗೆ ಕಳುಹಿಸಿದ್ದಾಗ, ಅತೀ ಅಪಾಯಕಾರಿ ಎಂಬ ವರದಿ ಬಂದಿದ್ದರಿಂದ, ಸೈದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಸದ್ಯ, ಕೆಮಿಕಲ್ ಕಂಪನಿಗಳ ಇಂತಹ ಕಳ್ಳಾಟಕ್ಕೆ ಕಡಿವಾಣ ಹಾಕುವಲ್ಲಿ ಈ ಭಾಗದ ಜನರು ತಂಡಗಳಾಗಿ ಕೂಡಿಕೊಂಡು, ಜನರು ರಾತ್ರಿ ವೇಳೆ ತಪಾಸಣೆ ಮುಂದಾಗಲಿದ್ದೇವೆ ಎಂದು ವೀರೇಶ ಕನ್ನಡಪ್ರಭಕ್ಕೆ ತಿಳಿಸಿದರು.
ಕೋಟ್-1
- ಕಾಶಿನಾಥ್, ಸಾಮಾಜಿಕ ಕಾರ್ಯಕರ್ತ, ಶೆಟ್ಟಿಹಳ್ಳಿ. (3ವೈಡಿಆರ್20)
ಕೋಟ್-2
ಪದೇ ಪದೇ ಇಂತಹ ಘಟನೆಗಳು ಘಟಿಸುತ್ತಿದ್ದರೂ ಸಹ, ಪರಿಸರ ಇಲಾಖೆ ತನಗೇನೂ ಗೊತ್ತಿಲ್ಲದಂತೆ ವರ್ತಿಸುತ್ತದೆ. ಜನರ ದೂರುಗಳಿಗೆ ಕಿಡಿಗೊಡದ ಪೊಲೀಸರು, ಮೇಲಧಿಕಾರಿಗಳಿಂದ ಆದೇಶ ಬಂದಾಗ ಮಾತ್ರ ಅಪರಿಚಿತರ ಹೆಸರಲ್ಲಿ ದೂರು ದಾಖಲಿಸಿ, ತನಿಖೆಯನ್ನೇ ಮಾಡದೆ ಪ್ರಕರಣ ಹಳ್ಳ ಹಿಡಿಸುತ್ತಾರೆ. ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಇಂತಹ ವಿಷಕಾರಿ ಕಂಪನಿಗಳ ಕೃತ್ಯ ತಡೆಯಬೇಕು, ಮಲಗಿಕೊಂಡಂತೆ ನಟಿಸುತ್ತಿರುವ ಅಧಿಕಾರಿಗಳನ್ನು ಬಡಿದೆಬ್ಬಿಸಬೇಕಾದರೆ ಹೋರಾಟಗಳು ಅನವಾರ್ಯ ಎಂದೆನ್ನಿಸುತ್ತದೆ.- ವೀರೇಶ ಸಜ್ಜನ್, ಕನ್ನಡಪರ ಸಂಘಟನೆ ಹೋರಾಟಗಾರ, ಸೈದಾಪುರ. (3ವೈಡಿಆರ್21)
-3ವೈಡಿಆರ್15 : ಅಪಾಯಕಾರಿ ತ್ಯಾಜ್ಯ ಚೆಲ್ಲಿರುವ ಬಗ್ಗೆ ಪರಿಸರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ದ್ರವ ಮಾದರಿ ಸಂಗ್ರಹಿಸಿದ್ದಾರೆ.
3ವೈಡಿಆರ್16 : ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.3ವೈಡಿಆರ್17 : ಕಡೇಚೂರು ಕೈಗಾರಿಕಾ ಪ್ರದೇಶದ ಮುಖ್ಯಸ್ತೆಯ ಬದಿ ಅಪಾಯಕಾರಿ ಕೆಮಿಕಲ್ ತ್ಯಾಜ್ಯ ಟ್ಯಾಂಕರ್ ಮೂಲಕ ಚೆಲ್ಲಿ ಪರಾರಿಯಾಗಿರುವುದು.
3ವೈಡಿಆರ್18 : ಕಡೇಚೂರು ಕೈಗಾರಿಕಾ ಪ್ರದೇಶದ ಮುಖ್ಯಸ್ತೆಯ ಬದಿ ಹಳ್ಳದ ಸೇತುವೆಗೆ ಅಪಾಯಕಾರಿ ಕೆಮಿಕಲ್ ತ್ಯಾಜ್ಯ ಟ್ಯಾಂಕರ್ ಮೂಲಕ ಚೆಲ್ಲಿ ಪರಾರಿಯಾಗಿರುವುದರಿಂದ ಅಲ್ಲಿನ ಹುಲ್ಲುಗಾವಲು ಸುಟ್ಟು ಭಸ್ಮವಾಗಿರುವುದು.3ವೈಡಿಆರ್19 : ಹಳ್ಳಕ್ಕೆ ಅಪಾಯಕಾರಿ ರಾಸಾಯನಿಕ ತ್ಯಾಜ್ಯ ಚೆಲ್ಲಿದ್ದರಿಂದ ಕಪ್ಪೆ ಮುಂತಾದ ಜಲಚರಗಳು ಸುಟ್ಟು ಸಾವನ್ನಪ್ಪಿರುವುದು.