ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಸ್ಥಳೀಯರೊಬ್ಬರು ತೋಟದಲ್ಲಿ ಔಷಧಿ ತಯಾರಿಗಾಗಿ ಇಟ್ಟಿದ್ದ 200 ಲೀಟರ್ ಡ್ರಮ್ಮನ್ನು ಆನೆಯು ಸಮೀಪದಲ್ಲಿ ಹರಿಯುವ ತೋಡಿಗೆ ದೂಡಿ ಹಾಕಿದ್ದು ಅದು ನೀರು ಪಾಲಾಗಿದೆ.
ಕಳೆದ ಹತ್ತು ದಿನಗಳಿಂದ ಕಾಡಾನೆ ಕಡಿರುದ್ಯಾವರ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಇಲ್ಲಿನ ರಾಮಂದೊಟ್ಟು, ಪಣಿಕಲ್ಲು, ಹಿತ್ತಿಲ ಕೋಡಿ, ಕೋಡಿ, ಎರುಬಳ್ಳಿ, ಕಾನರ್ಪ ಮುಂತಾದ ಪ್ರದೇಶಗಳ ಮನೆಗಳ ಅಂಗಳದ ತನಕವು ಬಂದಿತ್ತು.ವಿಪರೀತ ಮಳೆ ಇರುವ ಕಾರಣ ಕಾಡಾನೆ ಮನೆ ಹತ್ತಿರ ಬಂದರೂ ತೋಟದಲ್ಲಿ ಹಾನಿ ಉಂಟು ಮಾಡಿದರೂ ತಕ್ಷಣ ಗಮನಕ್ಕೆ ಬರುತ್ತಿಲ್ಲ ಪಟಾಕಿಗಳನ್ನು ಸಿಡಿಸಿದರೂ ಆನೆ ಓಡುತ್ತಿಲ್ಲ ಎಂದು ಇಲ್ಲಿನ ಕೃಷಿಕರು ತಿಳಿಸಿದ್ದಾರೆ.