ಅನುಚಿತ ವರ್ತನೆ ಕಾಗಿಮಡು ಶಾಲೆ ಶಿಕ್ಷಕಿ ಅಮಾನತು

KannadaprabhaNewsNetwork |  
Published : Aug 22, 2024, 01:01 AM IST
21ಮಾಗಡಿ2 : ಕಾಗಿಮಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಪರಿಮಳ  | Kannada Prabha

ಸಾರಾಂಶ

ತಾಲೂಕಿನ ಕಾಗಿಮಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಪರಿಮಳ ಸಹೋದ್ಯೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದಕ್ಕೆ ಅಮಾನತು ಮಾಡಿ ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿ.ಸಿ ಬಸವರಾಜೇಗೌಡ ಆದೇಶ ಹೊರಡಿಸಿದ್ದಾರೆ.

ಮಾಗಡಿ: ತಾಲೂಕಿನ ಕಾಗಿಮಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಪರಿಮಳ ಸಹೋದ್ಯೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದಕ್ಕೆ ಅಮಾನತು ಮಾಡಿ ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿ.ಸಿ ಬಸವರಾಜೇಗೌಡ ಆದೇಶ ಹೊರಡಿಸಿದ್ದಾರೆ.

ಪರಿಮಳ ಸಹೋದ್ಯೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಾ ಅಶ್ಲೀಲ ಪದ ಬಳಕೆ, ಶಾಲಾ ಅವಧಿಯಲ್ಲಿ ಮೊಬೈಲ್ ಬಳಕೆ, ಅಡುಗೆ ಸಿಬ್ಬಂದಿಗಳ ಜೊತೆ ಜಗಳವಾಡುತ್ತಿದ್ದರು. ಇತ್ತೀಚೆಗೆ ಅದೇ ಶಾಲೆಯ ಹಿಂದಿ ಶಿಕ್ಷಕಿ ಯಶೋದಮ್ಮ ಮೇಲೆ ರೌಡಿಯಂತೆ ವರ್ತಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಗೆ ಪೆಟ್ಟು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಯಶೋದಮ್ಮ 10 ದಿನಗಳ ಕಾಲ ವೈದ್ಯಕೀಯ ಚಿಕಿತ್ಸೆ ಪಡೆದಿದ್ದರು.

ಈ ಎಲ್ಲಾ ಕಾರಣಗಳಿಂದಾಗಿ ಅಮಾನತ್ತುಗೊಂಡ ಶಿಕ್ಷಕಿ ಪರಿಮಳ ಮೇಲೆ ಎಸ್.ಡಿ.ಎಂ.ಸಿ, ಪೋಷಕರು ಹಾಗೂ ಕಾಗಿಮಡು ಗ್ರಾಮಸ್ಥರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದು ಇಲಾಖೆಯ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದರು.

ಡಿಡಿಪಿಐ ಬಸವರಾಜೇಗೌಡ ಈ ಕುರಿತು ಮಾಗಡಿ ಬಿಇಒಗೆ ತನಿಖೆ ನಡೆಸಿ ವರದಿ ಕೊಡುವಂತೆ ಸೂಚಿಸಿದ್ದರು. ಅನುಚಿತವಾಗಿ ವರ್ತಿಸಿರುವುದು ದೃಢಪಟ್ಟ ನಂತರ ಪರಿಮಳರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಬಿಇಒ ಶಿಫಾರಸ್ಸು ಮಾಡಿದ್ದರು. ಹೀಗಾಗಿ ಡಿಡಿಪಿಐ ಬಸವರಾಜೇಗೌಡ ತಕ್ಷಣದಿಂದಲೇ ಜಾರಿಗೆ ಬರುವಂತೆ ಪರಿಮಳರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''
ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ