ಒಂದೇ ದಿನ ಎರಡು ಗೌರವ ಡಾಕ್ಟರೇಟ್‌ ಸ್ವೀಕರಿಸಿದ ಕಾಗೋಡು

KannadaprabhaNewsNetwork |  
Published : Jan 23, 2025, 12:45 AM IST
ಪೊಟೋ: 22ಎಸ್ಎಂಜಿಕೆಪಿ06ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ 34ನೇ ಘಟಿಕೋತ್ಸವದಲ್ಲಿ ಹಿರಿಯ ಮುತ್ಸದ್ದಿ ಹಾಗೂ ವಿಧಾನ ಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಗೌರವ ಅವರಿಗೆ ಗೌರವ ಡಾಕ್ಟರೇಟ್‌ ನೀಡಲಾಯಿತು. | Kannada Prabha

ಸಾರಾಂಶ

ಶಿವಮೊಗ್ಗ: ಹಿರಿಯ ಮುತ್ಸದ್ಧಿ ಹಾಗೂ ವಿಧಾನ ಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಒಂದೇ ದಿನ ಎರಡು ಕಡೆ ಗೌರವ ಡಾಕ್ಟರೇಟ್‌ ಪದವಿ ಸ್ವೀಕರಿಸಿ ಗಮನ ಸೆಳೆದರು.

ಶಿವಮೊಗ್ಗ: ಹಿರಿಯ ಮುತ್ಸದ್ಧಿ ಹಾಗೂ ವಿಧಾನ ಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಒಂದೇ ದಿನ ಎರಡು ಕಡೆ ಗೌರವ ಡಾಕ್ಟರೇಟ್‌ ಪದವಿ ಸ್ವೀಕರಿಸಿ ಗಮನ ಸೆಳೆದರು.

ಬುಧವಾರ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆದ 34ನೇ ಘಟಿಕೋತ್ಸವದಲ್ಲಿ ಮೊದಲು ಗೌರವ ಡಾಕ್ಟರೇಟ್‌ ಸ್ವೀಕರಿಸಿದ ಅವರು ಬಳಿಕ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯ ನೀಡಿದ ಗೌರವ ಡಾಕ್ಟರೇಟ್ ಅನ್ನು ಸ್ವೀಕರಿಸಿದರು.

ಕುವೆಂಪು ವಿವಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಡೆ, ನುಡಿ ಗೌರವಿಸಿ ಡಾಕ್ಟರೇಟ್ ನೀಡಿ ಸನ್ಮಾನ ಮಾಡಿದ್ದಾರೆ. ಕುವೆಂಪು ವಿವಿ ನನಗೆ ಗೌರವ ಡಾಕ್ಟರೇಟ್ ಕೊಟ್ಟಿರೋದು ಸಂತೋಷ ಆಗಿದೆ. ನಮ್ಮ ನಡೆ ನುಡಿಯನ್ನು ಗೌರವಿಸಿದ್ದಾರೆ. ಅವರಿಗೆ ನಾನು ವಿಶೇಷವಾದ ಕೃತಜ್ಞನೆ ಸಲ್ಲಿಸುತ್ತೇನೆ. ನನ್ನ ಮೇಲೆ ವಿಶ್ವಾಸ ಇಟ್ಟು ಎರಡು ಡಾಕ್ಟರೇಟ್ ಕೊಟ್ಟಿದ್ದಾರೆ. ನಾನೇನು ಹೇಳಲಿ ಎಂದರು.

ಬಳಿಕ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಸ್ವೀಕರಿಸಿ ಮಾತನಾಡಿದ ಅವರು, ಕೆಳದಿ ವಿಶ್ವವಿದ್ಯಾಲಯ ನನ್ನ ಸಮಾಜ ಸೇವೆ ಹಾಗೂ ನಿಷ್ಠೆಯ ಕಾಯಕವನ್ನು ಗುರುತಿಸಿ ಗೌರವ ನೀಡಿರುವುದು ತುಂಬಾ ಸಂತಸ ತಂದಿದೆ. ಯುವರಾಜಕಾರಣಿಗಳು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದರೆ ಇಂತಹ ಗೌರವ ಡಾಕ್ಟರೇಟ್‌ಗಳು ದೊರೆಯಲು ಸಾಧ್ಯ ಎಂದು ಕಿವಿ ಮಾತು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಸುರಕ್ಷತೆಗೆ ಸಾರಿಗೆ ಇಲಾಖೆ ಎಐ ಆಧರಿತ ಕ್ಯಾಮೆರಾ ಅಳವಡಿಕೆ
ಮಂಡ್ಯ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸ್ವತಂತ್ರ ಸ್ಪರ್ಧೆ - ಸುಮಲತಾ ಪರ ನಾರಾಯಣಗೌಡ ಬ್ಯಾಟಿಂಗ್‌