ಆರ್.ಬಿ.ತಿಮ್ಮಾಪುರಗೆ ಸಚಿವ ಸ್ಥಾನಕ್ಕೆ ಕೈ ಮುಖಂಡರ ಒತ್ತಾಯ

KannadaprabhaNewsNetwork |  
Published : Jun 27, 2026, 03:15 AM IST
ಪೊಟೋ ಜೂ.26ಎಂಡಿಎಲ್ 2. ಆರ್.ಬಿ.ತಿಮ್ಮಾಪೂರ ಶಾಸಕರು, ಮುಧೋಳ | Kannada Prabha

ಸಾರಾಂಶ

ಕನ್ನಡ ಪ್ರಭ ವಾರ್ತೆ ಮುಧೋಳ ಕಾಂಗ್ರೆಸ್ ಪಕ್ಷದ ಹಿರಿಯ ದಲಿತ ನಾಯಕ, ಶಾಸಕ ಆರ್.ಬಿ.ತಿಮ್ಮಾಪುರ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸೂಕ್ತ ಸಚಿವ ಸ್ಥಾನ ನೀಡಬೇಕೆಂದು ನಗರ ಕಾಂಗ್ರೆಸ್ ಘಟಕದ ಪ್ರಮುಖ ಮುಖಂಡರು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರನ್ನು ಒತ್ತಾಯಿಸಿದ್ದಾರೆ.

ಕನ್ನಡ ಪ್ರಭ ವಾರ್ತೆ ಮುಧೋಳ

ಕಾಂಗ್ರೆಸ್ ಪಕ್ಷದ ಹಿರಿಯ ದಲಿತ ನಾಯಕ, ಶಾಸಕ ಆರ್.ಬಿ.ತಿಮ್ಮಾಪುರ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸೂಕ್ತ ಸಚಿವ ಸ್ಥಾನ ನೀಡಬೇಕೆಂದು ನಗರ ಕಾಂಗ್ರೆಸ್ ಘಟಕದ ಪ್ರಮುಖ ಮುಖಂಡರು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರನ್ನು ಒತ್ತಾಯಿಸಿದ್ದಾರೆ.

ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ನೀಡಿರುವ ಮುಖಂಡರು, ಆರ್.ಬಿ.ತಿಮ್ಮಾಪುರ ಅವರು ದಲಿತ ಸಮುದಾಯದ ಅತ್ಯಂತ ಪ್ರಭಾವಿ ನಾಯಕರಾಗಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡುವುದರಿಂದ ಶೋಷಿತ ಮತ್ತು ಹಿಂದುಳಿದ ವರ್ಗಗಳಿಗೆ ಪಕ್ಷದ ಮೇಲೆ ಮತ್ತಷ್ಟು ವಿಶ್ವಾಸ ಮೂಡಲಿದ್ದು, ಸಮುದಾಯಕ್ಕೆ ಉತ್ತರ ಕರ್ನಾಟಕಕ್ಕೆ ಸಾಮಾಜಿಕ ನ್ಯಾಯ ಸಿಗಲಿದೆ ಎಂದು ಮುಖಂಡರಾದ ರಘುನಾಥ ಮೊಕಾಶಿ ಹಾಗೂ ಚಿನ್ನು ಅಂಬಿ ಪ್ರತಿಪಾದಿಸಿದ್ದಾರೆ.

ಬಾಗಲಕೋಟ ಜಿಲ್ಲೆ ಹಾಗೂ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ತಿಮ್ಮಾಪುರ ಅವರ ಅನುಭವ ಅತ್ಯಗತ್ಯವಾಗಿದೆ. ಕ್ಷೇತ್ರದ ಬಲಿಷ್ಠ ನಾಯಕರನ್ನು ಸೋಲಿಸಿ ಗೆದ್ದು ಬಂದಿರುವ ಇವರಿಗೆ ಮಂತ್ರಿ ಸ್ಥಾನ ನೀಡುವುದು ಪ್ರಾದೇಶಿಕ ಸಮತೋಲನಕ್ಕೆ ಸಹಕಾರಿಯಾಗಲಿದೆ ಎಂದು ಹೋಳಬಸು ತೇಲಿ ಮತ್ತು ಪಿಂಟು ಕದಂ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಎಐಸಿಸಿ ವರಿಷ್ಠರು ತಕ್ಷಣವೇ ಈ ಬೇಡಿಕೆಯನ್ನು ಪುರಸ್ಕರಿಸಿ ಶಾಸಕ ಆರ್.ಬಿ.ತಿಮ್ಮಾಪುರ ಅವರಿಗೆ ಸಚಿವ ಸಂಪುಟ ದಲ್ಲಿ ಪ್ರಾತಿನಿಧ್ಯ ನೀಡಬೇಕೆಂದು ಪತ್ರಿಕಾ ಪ್ರಕಟಣೆಯ ಮೂಲಕ ಮುಖಂಡರಾದ ಚಿನ್ನು ಅಂಬಿ, ಮುರುಗೇಶ ಇಟಂಗಿ, ಕೃಷ್ಣ ಗುಜ್ಜನ್ನವರ, ರವಿ ಗಂಗಲ್, ನೀಲೇಶ್ ಇಂಗಳೆ, ಯೂನುಸ್ ಕೊಡಚಿ, ಬಸು ಬಳಿಗಾರ, ನಿತಿನ್ ಮಾನೆ ಒತ್ತಾಯಿಸಿದ್ದಾರೆ.--

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉದ್ಯೋಗಪತಿಗಳಾಗಿ ಸಮಾಜಕ್ಕೆ ಕೊಡುಗೆ ನೀಡಿ
ಮಹಿಳಾ ವಿವಿಯಲ್ಲಿ ನೇಮಕಾತಿ ಮರು ಪರಿಶೀಲಿಸಲು ಮನವಿ