ಕೈಗಾದಿಂದ 13 ಸಾವಿರ ಕೋಟಿ ಯುನಿಟ್ ವಿದ್ಯುತ್ ಉತ್ಪಾದನೆ: ವಿನೋದ್ ಕುಮಾರ್

KannadaprabhaNewsNetwork |  
Published : Aug 05, 2025, 11:46 PM IST
ವಿನೋದಕುಮಾರ್ ಮಾತನಾಡಿದರು | Kannada Prabha

ಸಾರಾಂಶ

ಕೈಗಾ 1ರಿಂದ 4 ನೇ ಘಟಕದಲ್ಲಿ ಒಟ್ಟು 595 ಉದ್ಯೋಗಿಗಳಿದ್ದು, ಅದರಲ್ಲಿ 483 ಜನ ಕರ್ನಾಟಕದವರಾಗಿದ್ದಾರೆ.

ಕಾರವಾರ: ಕೈಗಾದ ನಾಲ್ಕೂ ಘಟಕಗಳು ನಿರ್ಧಾರಿತ ಕ್ಷಮತೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿವೆ. ವಾಣಿಜ್ಯಾತ್ಮಕವಾಗಿ ಈವರಗೆ ಕೈಗಾ ವಿದ್ಯುತ್ ಉತ್ಪಾದನಾ ಕೇಂದ್ರವು 13 ಸಾವಿರ ಕೋಟಿ ಯುನಿಟ್ ವಿದ್ಯುತ್ ಉತ್ಪಾದನೆ ಮಾಡಿದೆ ಎಂದು ಕೈಗಾ ಅಣು ವಿದ್ಯುತ್ ಕೇಂದ್ರದ ನಿರ್ದೇಶಕ ಬಿ. ವಿನೋದ ಕುಮಾರ್ ತಿಳಿಸಿದರು.

ಅವರು ಮಂಗಳವಾರ ಕೈಗಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ನ್ಯೂಕ್ಲಿಯರ್ ಪವರ್‌ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನ ಆರನೇ ಪರಮಾಣು ಕೇಂದ್ರವಾದ ಕೈಗಾದಲ್ಲಿ ಒಟ್ಟು 2280 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಿತ್ತಿದ್ದು, ಈ ಪೈಕಿ ತಲಾ 220 ಮೆಗಾವ್ಯಾಟ್ ಸಾಮರ್ಥ್ಯದ ನಾಲ್ಕು ಒತ್ತಡದ ಭಾರಜಲ ಘಟಕಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. 700 ಮೆಗಾವ್ಯಾಟ್ ಸಾಮರ್ಥ್ಯದ ಎರಡು ಒತ್ತಡದ ಭಾರಜಲ ಘಟಕಗಳ ನಿರ್ಮಾಣಕ್ಕಾಗಿ ಉತ್ಖನನ ಚಟುವಟಿಕೆಗಳು ಮುಕ್ತಾಯವಾಗಿದೆ ಎಂದರು.

ಕೈಗಾ-1 ಘಟಕವು 962 ದಿನಗಳವರೆಗೆ ಕಾರ್ಯನಿರ್ವಹಿಸಿ, ನಿರಂತರವಾಗಿ ಕಾರ್ಯನಿರ್ವಹಿಸಿದ ವಿಶ್ವದ ಮೊದಲ ವಾಣಿಜ್ಯ ಪರಮಾಣು ವಿದ್ಯುತ್ ರಿಯಾಕ್ಟರ್ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದು, ರಿಯಾಕ್ಟರುಗಳ ಆಯುಷ್ಯ ವೃದ್ಧಿಗಾಗಿ, ಬೃಹತ್ ಪ್ರಮಾಣದಲ್ಲಿ ಕೂಲಂಟ್ ಚಾನೆಲ್ ಬದಲಾವಣೆ ಮತ್ತು ಫೀಡರ್ ಬದಲಾವಣೆಗಾಗಿ ಕೈಗಾ-1 ಘಟಕವು ಏಪ್ರಿಲ್ 1, 2025 ರಿಂದ ಸ್ಥಗಿತಗೊಂಡಿದೆ. ಈ ಚಟುವಟಿಕೆಯು ಸುಮಾರು 18 ತಿಂಗಳುಗಳ ಕಾಲ ನಡೆಯುತ್ತದೆ ಎಂದರು.

ಕೈಗಾ 1ರಿಂದ 4 ನೇ ಘಟಕದಲ್ಲಿ ಒಟ್ಟು 595 ಉದ್ಯೋಗಿಗಳಿದ್ದು, ಅದರಲ್ಲಿ 483 ಜನ ಕರ್ನಾಟಕದವರಾಗಿದ್ದಾರೆ. ಒಟ್ಟು 2057 ಗುತ್ತಿಗೆ ಉದ್ಯೋಗಿಗಳ ಪೈಕಿ 1737 ಕರ್ನಾಟಕದವರಿದ್ದು, ಅದರಲ್ಲಿ 1601 ಜನ ಉತ್ತಕನ್ನಡ ಜಿಲ್ಲೆಯವರಾಗಿದ್ದು, ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲಾಗುತ್ತಿದೆ ಎಂದರು.

ಕೈಗಾದಲ್ಲಿ ವಿಕಿರಣ ಹರಡುವುದನ್ನು ತಡೆಯಲು ಗರಿಷ್ಠ ಪ್ರಮಾಣದ ಸುರಕ್ಷತೆಯಲ್ಲಿ ಕೈಗೊಂಡಿದ್ದು, ಇಲ್ಲಿನ ವಿಕಿರಣದ ಪ್ರಭಾವ ನಿಗದಿಗಿಂತ ಅತ್ಯಂತ ಕನಿಷ್ಠ ಮಟ್ಟದಲ್ಲಿದ್ದು ಸಾರ್ವಜನಿಕರು ಹಾಗೂ ಪರಿಸರದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಇದುವರೆಗೂ ಕಂಡುಬಂದಿಲ್ಲವಾಗಿದ್ದು ಈ ಬಗ್ಗೆ ಪ್ರತಿ ವರ್ಷ ತಪಾಸಣೆ ನಡೆಸಲಾಗುತ್ತಿದೆ. ಜಗತ್ತಿನ ಎಲ್ಲ ದೇಶಗಳಲ್ಲೂ ಕೂಡಾ ದೈನಂದಿನ ಸಾರ್ವಜನಿಕ ಚಟುವಟಿಕೆಗಳಲ್ಲೂ ಕೂಡಾ ವಿಕಿರಣದ ಪ್ರಭಾವ ಎಲ್ಲ ಕಡೆಗಳಲ್ಲಿ ಕಂಡುಬರಲಿದ್ದು, ಸಾರ್ವಜನಿಕರು ಯಾವುದೇ ಆಧಾರ ರಹಿತ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದರು.

ಸಿ.ಎಸ್.ಆರ್ ಯೋಜನೆಯಡಿ ಪ್ರತಿ ವರ್ಷ 9 ರಿಂದ 16 ಕೊಟಿ ರು.ವರೆಗೂ ಹಣ ವಿನಿಯೋಗಿಸುತ್ತಿದ್ದು, ಇದುವರೆಗೆ ₹110 ಕೋಟಿ ಖರ್ಚು ಮಾಡಲಾಗಿದ್ದು, ಕಾಳಿ ಹುಲಿ ಮೀಸಲು ವಲಯದಲ್ಲಿ ವನ್ಯಜೀವಿ ಸಂರಕ್ಷಣೆಗಾಗಿ ₹ 20 ಕೋಟಿಗಳನ್ನು ವ್ಯಯಿಸಲಾಗಿದೆ ಎಂದು ಕೈಗಾ ಅಧಿಕಾರಿಗಳು ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ