ಸಮಾಜ ಸುಧಾರಣೆಯಲ್ಲಿ ತೊಡಗಿದ್ದ ಕೈವಾರ ತಾತಯ್ಯ

KannadaprabhaNewsNetwork |  
Published : Mar 15, 2025, 01:05 AM IST
ಪೊಟೋ: 14ಎಸ್‌ಎಂಜಿಕೆಪಿ01ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಬಲಿಜ ಸೇವಾ ಸಂಘದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀ ಯೋಗಿನಾರೇಯಣ ಯತೀಂದ್ರ(ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ಉದ್ಘಾಟಿಸಿದರು. | Kannada Prabha

ಸಾರಾಂಶ

ಶಿವಮೊಗ್ಗ: ಬಳೆ ತೊಡೆಸುವುದು ಒಂದು ಸಂಸ್ಕೃತಿ. ಬಳೆ ಹೆಣ್ಣು ಮಕ್ಕಳ ದೊಡ್ಡ ಆಸ್ತಿ. ಬಳೆ ತೊಡೆಸುವ ಮಲಾರ ವೃತ್ತಿಯ ಜೊತೆ ಎಲ್ಲ ಹೆಣ್ಣು ಮಕ್ಕಳನ್ನು ತಾಯಂದಿರಂತೆ ಗೌರವಿಸಿದ, ಸಮಾಜ ಸುಧಾರಣೆಯಲ್ಲಿ ತೊಡಗಿದ್ದ ಮಹಾನ್ ಪುರುಷ ಕೈವಾರ ತಾತಯ್ಯ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ಬಣ್ಣಿಸಿದರು.

ಶಿವಮೊಗ್ಗ: ಬಳೆ ತೊಡೆಸುವುದು ಒಂದು ಸಂಸ್ಕೃತಿ. ಬಳೆ ಹೆಣ್ಣು ಮಕ್ಕಳ ದೊಡ್ಡ ಆಸ್ತಿ. ಬಳೆ ತೊಡೆಸುವ ಮಲಾರ ವೃತ್ತಿಯ ಜೊತೆ ಎಲ್ಲ ಹೆಣ್ಣು ಮಕ್ಕಳನ್ನು ತಾಯಂದಿರಂತೆ ಗೌರವಿಸಿದ, ಸಮಾಜ ಸುಧಾರಣೆಯಲ್ಲಿ ತೊಡಗಿದ್ದ ಮಹಾನ್ ಪುರುಷ ಕೈವಾರ ತಾತಯ್ಯ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ಬಣ್ಣಿಸಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಬಲಿಜ ಸೇವಾ ಸಂಘದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೈವಾರ ತಾತಯ್ಯ ನವರು ಅತ್ಯಂತ ಶ್ರೇಷ್ಠರು. ಅವರೊಬ್ಬ ಆದರ್ಶ ಪುರುಷ. ಮಹಾನ್ ವ್ಯಕ್ತಿ. ಅವರ ವೃತ್ತಿ ಬಳೆ ವ್ಯಾಪಾರ. ಕಷ್ಟದಿಂದಲೇ ಬದುಕಿದವರು. ಮನೆ ಮನೆಗೆ ಹೋಗಿ ಬಳೆ ತೊಡಿಸುವುದರೊಂದಿಗೆ ಎಲ್ಲರನ್ನೂ ಗೌರವಿಸುತ್ತಿದ್ದರು. ಇಂತಹ ವೃತ್ತಿಯಲ್ಲಿ ಬಂದಿರುವ ಬಲಿಜ ಸಮಾಜದವರು ಅತ್ಯಂತ ಪ್ರೀತಿ, ವಿಶ್ವಾಸಾರ್ಹ ಉಳ್ಳವರ ಎಂದರು.ತಾತಯ್ಯನವರು ತಮ್ಮ ನುಡಿಗಳ ಮೂಲಕ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. 110 ವರ್ಷ ಕಾಲ ಬದುಕಿದ್ದ ಇವರಿಗೆ ಜನರು ಋಣಾತ್ಮಕತೆ ಹೆಚ್ಚು ವಾಲುವುದರ ಬಗ್ಗೆ ಅಸಮಾಧಾನವಿತ್ತು. ದುಷ್ಟರನ್ನು ದೂರವಿಡಬೇಕೆಂದು ಹೇಳುತ್ತಾ, ತಾವೂ ನುಡಿದಂತೆ ನಡೆಯುತ್ತಿದ್ದರು. ಕೈವಾರ ತಾತಯ್ಯ ಸೇರಿದಂತೆ ಮಹನೀಯರು ಯಾವುದೇ ಜಾತಿಗೆ ಸೀಮಿತರಲ್ಲ. ಅವರುಗಳು ಸಮಾನತೆಯನ್ನು ಪ್ರತಿಪಾದಿಸಿದ್ದಾರೆ ಎಂದರು.ನಮ್ಮಲ್ಲಿ ಹಿಂದುಳಿದ ಸಮಾಜಗಳು ಸಾಕಷ್ಟಿವೆ. ಬಲಿಜ ಸಮಾಜ 2 ಎ ಪ್ರವರ್ಗಕ್ಕೆ ಸೇರಬೇಕು. ಅವಕಾಶ ಸಿಕ್ಕರೆ ತಾವೂ ಸಹ ನಾಯಕರ ಹತ್ತಿರ ಈ ಬಗ್ಗೆ ಪ್ರಸ್ತಾಪಿಸುತ್ತೇನೆ ಎಂದ ಭರವಸೆ ನೀಡಿದ ಅವರು, ನಾವೆಲ್ಲರೂ ಶ್ರೇಷ್ಠರು. ಒಗ್ಗಾಟ್ಟಾಗಬೇಕು. ಆಗ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕಿ ಡಾ.ಛಾಯಾಕುಮಾರಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಗುರುವಿದ್ದಲ್ಲಿ ಮೋಕ್ಷವಿದೆ. ಗುರುವಿಲ್ಲದೆ ಗೋವಿಂದನನ್ನೂ ಪಡೆಯಲು ಸಾಧ್ಯವಿಲ್ಲ. ಕೈವಾರ ತಾತಯ್ಯನವರನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಅವರೊಂದು ಅಗಾಧವಾದ ಸಮುದ್ರ. ತಾತಯ್ಯ ಎಂದರೆ ದೇವರು ಕುಣಿಸುವ ತಾಳಕ್ಕೆ ತಕ್ಕಂತೆ ಕುಣಿಯುವವನು ಎಂದರ್ಥ ಎಂದು ತಾತಯ್ಯ ನಂಬಿದ್ದರು. ಅವರು ದೈವಾಂಶ ಸಂಭೂತರು ಎಂದು ತಿಳಿಸಿದ ಅವರು ತಾತಯ್ಯನವರ ಬಾಲ್ಯ, ತಾರುಣ್ಯ ಸೇರಿದಂತೆ ಜೀವನದ ವಿವಿಧ ಘಟ್ಟಗಳನ್ನು ವಿವರಿಸಿದರು.ಇದೇ ವೇಳೆ ವಿಶೇಷ ಸಾಧನೆ ಮಾಡಿದ ಸಮಾಜದ ಸ್ನೇಹಾ ಹಾಗೂ ಕೆಯುಡಬ್ಲುಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪುರಸ್ಕೃತೆ ಪತ್ರಕರ್ತೆ ಕವಿತಾ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಬಲಿಜ ಸೇವಾ ಸಂಘದ ಅಧ್ಯಕ್ಷ ಜಿ.ರಾಘವೇಂದ್ರ, ಜಿಲ್ಲಾ ಬಲಿಜ ಸೇವಾ ಸಂಘದ ಕಾರ್ಯದರ್ಶಿ ಬಿ.ಆರ್.ಶಿವಕಯಮಾರ್, ಜಿಲ್ಲಾ ಬಲಿಜ ಸೌಹಾರ್ಧ ಪತ್ತಿನ ಸಹಕಾರ ಸಂಘದ ವೆಂಕಟೇಶ ನಾಯ್ಡು, ಆದಿಲಕ್ಷ್ಮಿ ಬಲಿಜ ಮಹಿಳಾ ಸಮಾಜದ ಸ್ಮಿತಾ ಶಿವಕುಮಾರ್, ತಹಸೀಲ್ದಾರ್ ಎಂ.ಲಿಂಗರಾಜು, ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್.ಎಚ್ ಸ್ವಾಗತಿಸಿದರು,

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾವೂರು ಶ್ರೀ ಗೋಪಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಸಂಪನ್ನ
ಸಚಿವ ತಿಮ್ಮಾಪುರ ಬೆಂಬಲಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ