ಕಾಳಬೆಳಗುಂದಿ: ಬನದೇಶ್ವರ ವೃಕ್ಷೋದ್ಯಾನ ನಿರ್ಮಾಣ

KannadaprabhaNewsNetwork |  
Published : Aug 08, 2026, 01:15 AM IST
ಗುರುಮಠಕಲ್ ವಿಧಾನಸಭಾ ಮತಮಕ್ಷೇತ್ರದ ಕಾಳೆಬೆಳಗುಂದಿಯಲ್ಲಿ ಅರಣ್ಯ ಇಲಾಖೆಯಿಂದ ₹2 ಕೋಟಿ ಅನುದಾನದಲ್ಲಿ ಟ್ರೀ ಪಾರ್ಕ್ ನಿರ್ಮಾಣ ಕಾಮಗಾರಿಗೆ ಗುರುಮಠಕಲ್‌ ಮತಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಚಾಲನೆ ನೀಡಿ, ಕಾಮಗಾರಿ ವೀಕ್ಷಿಸಿದರು. | Kannada Prabha

ಸಾರಾಂಶ

Kalabelagundi: Construction of Banadeshwar Arboretum

-2 ಕೋಟಿ ರು.ವೆಚ್ಚದ ಯೋಜನೆ । ಸಾಮಾಜಿಕ ಅರಣ್ಯ ಇಲಾಖೆಯಿಂದ ನಿರ್ಮಾಣ । ಕಾಮಗಾರಿಗೆ ಶಾಸಕ ಶರಣಗೌಡ ಕಂದಕೂರ ಚಾಲನೆ

------

ಕನ್ನಡಪ್ರಭ ವಾರ್ತೆ ಯಾದಗಿರಿ

ಜಿಲ್ಲೆಯ ಗುರುಮಠಕಲ್ ವಿಧಾನಸಭಾ ಮತಕ್ಷೇತ್ರದ ಕಾಳೆಬೆಳಗುಂದಿಯಲ್ಲಿ ಅರಣ್ಯ ಇಲಾಖೆಯಿಂದ 2 ಕೋಟಿ ರು.ಅನುದಾನದಲ್ಲಿ ಟ್ರೀ ಪಾರ್ಕ್ ನಿರ್ಮಿಲಾಗುತ್ತಿದ್ದು, ಇದೀಗ 50 ಲಕ್ಷ ರು.ಅನುದಾನ ಬಂದಿದೆ. ಅದರ ಕಾಮಗಾರಿಗಳ ಅಭಿವೃದ್ಧಿ ಕೆಲಸ ಪ್ರಾರಂಭವಾಗಲಿದ್ದು, ಜನರಿಗೆ ಒಂದು ದಿನದ ವಿರಾಮಕ್ಕಾಗಿ ಟ್ರೀ ಪಾರ್ಕ್ ಸಹಕಾರವಾಗಲಿದೆ ಎಂದು ಶಾಸಕ ಶರಣಗೌಡ ಕಂದಕೂರ ಹೇಳಿದರು.

ಕಾಳಬೆಳಗುಂದಿ ಅರಣ್ಯ ಪ್ರದೇಶದಲ್ಲಿ 2 ಕೋಟಿ ರು.ವೆಚ್ಚದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ಬನದೇಶ್ವರ ಪ್ರಾಣವಾಯು ವೃಕ್ಷೋದ್ಯಾನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಕನಸಿನ ಟ್ರೀ ಪಾರ್ಕ್ ಯೋಜನೆ ಪ್ರತಿಕ್ಷೇತ್ರಗಳಲ್ಲಿ ಅರಣ್ಯ ಹಸಿರೀಕರಣ ಮಾಡುವ ಉದ್ದೇಶದಿಂದ ರಾಜ್ಯದಾದ್ಯಂತ ಹಲವು ಟ್ರೀ ಪಾರ್ಕ್ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅಂಗವಾಗಿ ಮೊದಲ ಹಂತದಲ್ಲಿ 50 ಲಕ್ಷ ರು. ಅನುದಾನ ಬಿಡುಗೆಯಾಗಿದೆ. ಮುಂದೆ ಈ ಟ್ರೀ ಪಾರ್ಕ್ ಯೋಜನೆ ಅನುಷ್ಠಾನಗೊಳಿಸಲು ಉಳಿದ ಅನುದಾನ ತರಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ಜಗತ್ತು ಆಧುನೀಕರಣಕ್ಕೆ ಒಡ್ಡಿಕೊಳ್ಳುತ್ತಿದ್ದಂತೆ ಪ್ರಕೃತಿ, ಪರಿಸರ ಕ್ಷೀಣವಾಗುತ್ತಿದೆ. ಭೂಮಿ ತಾಯಿಯನ್ನು ನಿಕೃಷ್ಟವಾಗಿ ಕಂಡು ತಮ್ಮ ಏಳಿಗೆಯನ್ನು ಮನುಷ್ಯ ಮಾಡಲು ಹೊರಟಿದ್ದಾನೆ. ದಿನದಿಂದ ದಿನಕ್ಕೆ ಮರಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಉಷ್ಣತೆ, ಬರಗಾಲ, ನೆರೆ, ಪ್ರಕೃತಿ ವಿಕೋಪಗಳು ತಾರಕ್ಕೇರುತ್ತಿವೆ. ಇದನ್ನು ಮನಗಂಡ ಕರ್ನಾಟಕ ಅರಣ್ಯ ಇಲಾಖೆ ಮಹತ್ ಕಾರ್ಯಕ್ಕೆ ಕೈ ಹಾಕಿದೆ ಎಂದು ತಿಳಿಸಿದರು.

*ಅರಣ್ಯ ಬೆಳೆಸಲು ರೈತರಿಗೆ ಪ್ರೋತ್ಸಾಹ ಧನ: ಅತೀ ಕಡಿಮೆ ಪ್ರತಿಶತ 5 ರಷ್ಟು ಅರಣ್ಯ ಹೊಂದಿದ ಕಲ್ಯಾಣ ಕರ್ನಾಟಕದಲ್ಲಿ ಕೃಷಿ ಜೊತೆ ಅರಣ್ಯ ಬೆಳೆಸಲು ರೈತರಿಗೆ ಪ್ರೊತ್ಸಾಹ ಧನ ನೀಡಲಾಗುತ್ತಿದೆ. ಪರಿಸರ ಸಮತೋಲನಕ್ಕಾಗಿ ಗಿಡ, ಮರಗಳನ್ನು ಬೆಳೆಯಬೇಕು ಎಂದು ಶಾಸಕ ಶರಣಗೌಡ ಕಂದಕೂರ ಸಲಹೆ ನೀಡಿದರು.

ಸಾಮಾಜಿಕ ಅರಣ್ಯ ಇಲಾಖೆಯ ಡಿಸಿಎಫ್‌ಒ ಚೇತನ ಗಸ್ತಿ ಮಾತನಾಡಿ, 5 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಟ್ರೀ ಪಾರ್ಕ್ನಲ್ಲಿ ಆಮ್ಲ ಜನಕ ಹೊರಸೂಸೂವ ಸಸಿಗಳನ್ನು ನೆಡುವುದು, ವಾಕಿಂಗ್ ಟ್ರ‍್ಯಾಕ್, ಯೋಗ ವೇದಿಕೆ, ಮಕ್ಕಳ ಆಟಿಕೆಗಳು, ಜಿಮ್ ವ್ಯವಸ್ಥೆ ಎರಡು ಪರಗೋಲಗಳು(ಆಸನಗಳು), ಆರ್‌ಓ ಶುದ್ಧ ಕುಡಿಯುವ ನೀರಿನ ಪ್ಲ್ಯಾಂಟ್, ಪ್ರತ್ಯೇಕ ಶೌಚಾಲಯಗಳು ಸಹಿತ ಟ್ರೀ ಪಾರ್ಕ್ ಭದ್ರತೆಗಾಗಿ ತಂತಿಬೇಲಿ ಅಳವಡಿಕೆ, ಟ್ರೀಕ್ ಪಾರ್ಕ್ ಎದುರುಗಡೆ ಅತ್ಯಂತ ಸುಂದರವಾದ ಆರ್ಚ್(ದ್ವಾರಬಾಗೀಲು) ನಿರ್ಮಾಣ ಮಾಡಿ ಟ್ರೀ ಪಾರ್ಕ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪ್ರಸ್ತುತ ಹಂತದಲ್ಲಿ ಯೋಜನೆಯ ಭೂಮಿ ಗುರುತು ಹಾಕಲಾಗಿದೆ ಹಾಗೂ ನಿರ್ಮಾಣದ ಪೂರ್ವತಯಾರಿಗಳು ಆರಂಭವಾಗಿವೆ. ಗುರುಮಠಕಲ್ ಮತಕ್ಷೇತ್ರಕ್ಕೆ ಹೊಸ ಗುರುತು ನೀಡಲಿರುವ ಈ ಯೋಜನೆ, ಪ್ರವಾಸೋದ್ಯಮ, ಉದ್ಯಮ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ಟ್ಯಪಟ್ಟರು.

ಸಾಮಾಜಿಕ ಅರಣ್ಯ ಇಲಾಖೆಯ ಎಸಿಎಫ್‌ಒ ಮಹ್ಮದ್ ಅಸದ್, ಸಾಮಾಜಿಕ ಆರ್‌ಎಫ್‌ಒ ಚನ್ನಬಸವ ಕಟ್ಟಿಮನಿ, ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ, ಮುಖಂಡರಾದ ಅಜಯರಡ್ಡಿ ಎಲ್ಹೇರಿ, ಮಲ್ಲಣಗೌಡ ಕೌಳೂರು, ಶರಣಪ್ಪಗೌಡ ಹೊಸಳ್ಳಿ, ಪರ್ವತರಡ್ಡಿ, ಬಸವರಾಜ ಕಣೇಕಲ್, ಲಕ್ಷ್ಮಣ ನಾಯಕ ಕಾಳಬೆಳಗುಂದಿ, ಪೋಲಪ್ಪ ನೀಲಹಳ್ಳಿ, ಬೆಂಜಮನ್, ರಾಜೇಶ ಉಪ್ಪಿನ್, ಮಹಿಪಾಲರಡ್ಡಿ ಮಲ್ಹಾರ, ರಾಜು ಕಾಳಬೆಳಗುಂದಿ, ನರಸಿಂಹರಡ್ಡಿ ಚಿಂತಗುಂಟಾ, ರಾಜೇಶ ಉಡುಪಿ, ಅಲ್ಲಾವುದ್ದೀನ್, ಚೌಡಯ್ಯ, ಶರಣಗೌಡ ಮಾಧ್ವಾರ, ಮಲ್ಲಣಗೌಡ ಬದ್ದೇಪಲ್ಲಿ, ಶರಣು ಗಾಡಿ ಮೊಟ್ನಳ್ಳಿ, ವೆಂಕಟರಮಣ ಮೊಟ್ನಳ್ಳಿ. ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಇದ್ದರು.

---ಕೋಟ್‌-----

ನೈಸರ್ಗಿಕ ಕಾಡುಗಳಿಗಿಂತ ಭಿನ್ನವಾಗಿ, ಮೂಲಭೂತ ಸೌಕರ್ಯಗಳ ಸ್ಥಾಪನೆ ಒಳಗೊಂಡಿರುವ ಈ ಟ್ರೀ ಪಾರ್ಕ್ ವಿರಾಮಕ್ಕಾಗಿ ಬರುವ ಜನರಿಗೆ ಅನುಕೂಲತೆ ಮತ್ತು ಸೌಕರ್ಯಗಳನ್ನು ಒದಗಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಜನರು ತಮ್ಮ ಕುಟುಂಬದೊಂದಿಗೆ ಬಂದು ಕೆಲವು ಕಾಲ ತಂಗಲು ಇಲ್ಲಿ ವ್ಯವಸ್ಥೆ ಮಾಡುವುದರ ಜತೆಗೆ ಒಂದು ಅತ್ಯುತ್ತಮ ಉದ್ಯಾನ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ.

। ಶರಣಗೌಡ ಕಂದಕೂರ ಶಾಸಕ, ಗುರುಮಠಕಲ್.

----ಫೋಟೊ---

7ವೈಡಿಆರ್4

ಗುರುಮಠಕಲ್ ವಿಧಾನಸಭಾ ಮತಮಕ್ಷೇತ್ರದ ಕಾಳೆಬೆಳಗುಂದಿಯಲ್ಲಿ ಅರಣ್ಯ ಇಲಾಖೆಯಿಂದ 2 ಕೋಟಿ ರೂ.ಅನುದಾನದಲ್ಲಿ ಟ್ರೀ ಪಾರ್ಕ್ ನಿರ್ಮಾಣ ಕಾಮಗಾರಿಗೆ ಶಾಸಕ ಶರಣಗೌಡ ಕಂದಕೂರ ಚಾಲನೆ ನೀಡಿ, ಕಾಮಗಾರಿ ವೀಕ್ಷಿಸಿದರು. ಎಸಿಎಫ್‌ಒ ಮಹ್ಮದ್ ಅಸದ್, ಸಾಮಾಜಿಕ ಆರ್‌ಎಫ್‌ಒ ಚನ್ನಬಸವ ಕಟ್ಟಿಮನಿ, ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲೆಯ ವಿವಿಧೆಡೆ ಬರದ ಭೀಕರ ಪರಿಸ್ಥಿತಿ ದರ್ಶನ
ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಸಂಘಟಿತ ಕೆಲಸ