ಕಲಬುರಗಿ ಜೈಲು ಅಕ್ರಮ ಆರೋಪ: ವಿಚಾರಣೆಗೆ ಎಐಜಿಪಿ ರೆಡ್ಡಿ ನೇಮಕ

KannadaprabhaNewsNetwork |  
Published : Jan 02, 2026, 03:15 AM IST
ಪೊಟೋ: 01ಎಸ್‌ಎಂಜಿಕೆಪಿ05ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಶ್ವಕರ್ಮ ಮಹಾಸಭಾದ ಸಹಯೋಗದಲ್ಲಿ ಗುರುವಾರ  ಏರ್ಪಡಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಶಾಸಕ ಎಸ್‌.ಎನ್‌.ಚನ್ನಬಸಪ್ಪ ಉದ್ಘಾಟಿಸಿದರು.   | Kannada Prabha

ಸಾರಾಂಶ

Kalaburagi jail illegality allegations: AIGP Reddy appointed to investigate

ಕನ್ನಡಪ್ರಭ ವಾರ್ತೆ ಬೆಂಗಳೂರು

ಇತ್ತೀಚೆಗೆ ಕಲುಬರಗಿ ಕೇಂದ್ರ ಕಾರಾಗೃಹದಲ್ಲಿ ಕೇಳಿ ಬಂದ ಅಕ್ರಮ ಚಟುವಟಿಕೆ ಆರೋಪ ಸಂಬಂಧ ವಿಚಾರಣೆಗೆ ಎಐಜಿಪಿ ಪಿ.ವಿ.ಆನಂದ್ ರೆಡ್ಡಿ ಅವರನ್ನು ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಡಿಜಿಪಿ ನೇಮಿಸಿದ್ದಾರೆ.ಕೆಲ ದಿನಗಳ ಹಿಂದೆ ಕಲುಬರಗಿ ಕಾರಾಗೃಹದಲ್ಲಿ ಕೈದಿಗಳು ಮದ್ಯಪಾನ ಹಾಗೂ ಧೂಮಪಾನ ವಿಡಿಯೋ ಬಹಿರಂಗವಾಗಿತ್ತು. ಈ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿಪಿ ಅವರು, ಈ ಘಟನೆ ಕುರಿತು ವಿಚಾರಣೆ ನಡೆಸಿ ವರದಿ ನೀಡುವಂತೆ ಎಐಜಿಪಿ ಅವರಿಗೆ ಸೂಚಿಸಿದ್ದಾರೆ. ಕಾರಾಗೃಹಕ್ಕೆ ಶುಕ್ರವಾರ ಆನಂದ ರೆಡ್ಡಿ ಭೇಟಿ ನೀಡಲಿದ್ದಾರೆ. ಈ ವಿಡಿಯೋ ಎರಡ್ಮೂರು ತಿಂಗಳ ಹಳೆಯದು. ಕಲುಬರಗಿ ಸೆಂಟ್ರಲ್ ಜೈಲಿನಲ್ಲಿದ್ದ ಬೆಂಗಳೂರಿನ ಮುನಿಕೃಷ್ಣ ಅಲಿಯಾಸ್ ಕಪ್ಪೆಗೆ ಅಕ್ರಮವಾಗಿ ಮದ್ಯ ಹಾಗೂ ಸಿಗರೇಟ್ ಪೂರೈಸಿರುವುದು ತಿಳಿದು ಬಂದಿದೆ. ಈ ಬಗ್ಗೆ ತಪ್ಪಿತಸ್ಥ ಅಧಿಕಾರಿ-ಸಿಬ್ಬಂದಿ ಬಗ್ಗೆ ಆನಂದ ರೆಡ್ಡಿ ವಿಚಾರಣೆ ನಡೆಸಲಿದ್ದಾರೆ ಎಂದು ಡಿಜಿಪಿ ಕಚೇರಿ ಪ್ರಕಟಣೆಯಲ್ಲಿ ಹೇಳಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೂಪಾ ಮೌದ್ಗಿಲ್‌ ಮಾನಹಾನಿ ಕೇಸ್‌: ರೋಹಿಣಿ ಅರ್ಜಿ ವಜಾ
ವಿರೋಧದ ನಡುವೆ ಮದುವೆ : ಸಿಟ್ಟಲ್ಲಿ ಅಳಿಯನ ಮನೆಗೆ ಮಾವನಿಂದ ಬೆಂಕಿ!