ಕನ್ನಡಪ್ರಭ ವಾರ್ತೆ ಬೀದರ್
ಜೂನ್ 2025ರೊಳಗಾಗಿ ರೈಲ್ವೆ ನಿಲ್ದಾಣ ಕಾಮಗಾರಿ ಪೂರ್ಣ:
ನಗರದದಲ್ಲಿ 25 ಕೋಟಿ ರು. ವೆಚ್ಚದಲ್ಲಿ ಅಮೃತ ಯೋಜನೆಯಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ನಿಲ್ದಾಣ ಕಾಮಗಾರಿ ಮುಂಬರುವ ಜೂನ್ ಅಂತ್ಯದೊಳಗೆ ಮುಗಿಯಲಿದೆ ಎಂದು ರೈಲ್ವೆ ಇಲಾಖೆಯ ಅಧಿಕಾರಿ ಶಶಾಂಕ್ ತಿಳಿಸಿದರು.ರೈಲ್ವೆ ನಿಲ್ದಾಣದ ಗಾಂಧಿ ಗಂಜ್ ಕಡೆಯಲ್ಲಿ ಇನ್ನೂ ಪ್ಲಾಟ್ಫಾರಂ ನಿರ್ಮಾಣ ಮಾಡಬೇಕಾಗಿದೆ. ಅಲ್ಲದೇ ರೈಲ್ವೆಯ ಸರ್ವೆ ನಂಬರ್ 31ರಲ್ಲಿ ಕೆಲವರು ಜಮೀನು ಕಬಳಿಕೆ ಮಾಡಿದ್ದಾರೆಂದು ಮಾಹಿತಿ ನೀಡಿದರಲ್ಲದೇ ಪ್ರತಿ ದಿನ ರೈಲು ನಿಲ್ದಾಣಕ್ಕೆ 60 ಸಾವಿರ ಲೀಟರ್ ನೀರು ಕೊಡಲಾಗುತ್ತದೆ. ಇದನ್ನು 1 ಲಕ್ಷ ಲೀಟರ್ ವರೆಗೆ ಹೆಚ್ಚಳ ಮಾಡಬೇಕೆಂದು ಅಧಿಕಾರಿಗಳು ಕೋರಿದರು.
ಜಿಲ್ಲೆಯ ರೈತರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಅವರಿಗೆ ಸಮಯಕ್ಕೆ ಪರಿಹಾರ ಸೇರಿದಂತೆ ಎಲ್ಲ ಸೌಲಭ್ಯ ಒದಗಿಸಲು ಅಧಿಕಾರಿಗಳು ಗಮನಹರಿಸಬೇಕೆಂದು ಮತ್ತು ಅಧಿಕಾರಿಗಳು ಅಪೂರ್ಣ ಮಾಹಿತಿ ನೀಡುವದು ಬೇಡ. ಮುಂದಿನ ಸಭೆಗೆ ಪೂರ್ಣ ಮಾಹಿತಿ ತನ್ನಿ. ಸಭೆಗೆ ಯಾವ ಅಧಿಕಾರಿ ಬಂದಿಲ್ಲ ಅವರಿಗೆ ಕಾರಣ ಕೇಳಿ ನೊಟೀಸ್ ನೀಡಿ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಮ್ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಸಿತೊ ಡಾ.ಗಿರೀಶ ಬದೋಲೆ, ಎಸ್ಪಿ ಪ್ರದೀಪ ಗುಂಟಿ, ನಗರಸಭೆ ಅಧ್ಯಕ್ಷ ಮಹ್ಮದ ಗೌಸ್, ಎಂಎಲ್ಸಿ ಮಾರುತಿರಾವ್ ಮೂಳೆ ಇದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, ರಾಜ್ಯ ಸರ್ಕಾರದಿಂದ ಭಾಲ್ಕಿ ನಿಲಂಗಾ, ನೌಬಾದ್-ಕಮಲನಗರ, ನೌಬಾದ್-ಹುಮನಾಬಾದ್, ರಸ್ತೆಗಳು ರಾಜ್ಯ ಸರ್ಕಾರದಿಂದ ಮೇಲ್ದರ್ಜೆಗೇರಿಸಿದ್ದು, ರಸ್ತೆ ನಿರ್ಮಾಣ ಕಾಮಗಾರಿ ಕಳಪೆ ಮಟ್ಟದ್ದಾಗಿದ್ದು ಕೂಡಲೇ ಗುಣಮಟ್ಟ ಪರೀಕ್ಷೆ ಮಾಡಿ ತಪ್ಪಿಸ್ಥರ ವಿರದ್ದ ಕ್ರಮ ಕೈಗೊಂಡು ವರದಿ ನೀಡುವಂತೆ (ರಾಷ್ಟ್ರೀಯ ಹೆದ್ದಾರಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.