ಮೂಲ ಸೌಕರ್ಯ ಅಭಿವೃದ್ಧಿಗೆ ಕಳಕಪ್ಪ ಬಂಡಿ ಆದ್ಯತೆ

KannadaprabhaNewsNetwork |  
Published : Aug 19, 2026, 02:15 AM IST
ಪೋಟೊ : ಪಕ್ಷದ ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಕಳಕಪ್ಪ ಬಂಡಿಪೋಟೊ ಕ್ಯಾಪ್ಸನ್: ಮಲ್ಲಪ್ಪ  ಮಠದ   | Kannada Prabha

ಸಾರಾಂಶ

ಕಳಕಪ್ಪ ಬಂಡಿ ಅವರು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದ ಸಂದರ್ಭದಲ್ಲಿ ಕೈಗಾರಿಕಾ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.

ರಿಯಾಜಅಹ್ಮದ ಎಂ. ದೊಡ್ಡಮನಿಡಂಬಳ: ರೋಣ ಕ್ಷೇತ್ರದ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮೂಲ ಸೌಕರ್ಯವೇ ಬುನಾದಿ ಎಂಬ ಆಶಯದೊಂದಿಗೆ ಮಾಜಿ ಶಾಸಕ ಕಳಕಪ್ಪ ಬಂಡಿ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಕೈಗೊಂಡ ಕಾರ್ಯಗಳು ಇಂದಿಗೂ ಮನೆಮಾತಾಗಿವೆ.

ಇವರು ತಮ್ಮ ಅಧಿಕಾರದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಅಸಂಖ್ಯಾತ. ಪ್ರಮುಖವಾಗಿ ₹24 ಕೋಟಿ ವೆಚ್ಚದಲ್ಲಿ ಚಿಕ್ಕವಡ್ಡಟ್ಟಿಯಿಂದ ದಿಂಡೂರ ಗ್ರಾಮದ ವರೆಗೆ ರಸ್ತೆ ಅಭಿವೃದ್ಧಿ, ಕದಾಂಪುರ ಗ್ರಾಮದಿಂದ ಚುರ್ಚಿಹಾಳ ಗ್ರಾಮಕ್ಕೆ ₹1 ಕೋಟಿ ವೆಚ್ಚ, ವೆಂಕಟಾಪುರ ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ, ಮೇವುಂಡಿ ಗ್ರಾಮದಲ್ಲಿ ಕೋಟಿ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ, ಹೊಸ ಡಂಬಳದಲ್ಲಿ ₹28 ಲಕ್ಷ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ, ಡಂಬಳ ಗ್ರಾಪಂ ಕಟ್ಟಡ ನಿರ್ಮಿಸಿದ್ದಾರೆ.

ಹಾರೂಗೇರಿ ಗ್ರಾಮದ ಎಸ್‌ಸಿ ಕಾಲನಿಯಲ್ಲಿ ₹251 ಲಕ್ಷ, ಮುರಡಿ ತಾಂಡಾದ ಎಸ್ಸಿ ಕಾಲನಿಯಲ್ಲಿ ₹25 ಲಕ್ಷ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿ ಕೈಗೊಂಡಿದ್ದಾರೆ. ಅದೇ ರೀತಿ ವೇಠಾಆಲೂರು ಗ್ರಾಮದಲ್ಲಿ ₹46 ಲಕ್ಷ ವೆಚ್ಚದಲ್ಲಿ ಚೆಕ್ ಡ್ಯಾಂ, ₹2 ಕೋಟಿ ವೆಚ್ಚದಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ಶಾಲೆ ಕಟ್ಟಡ, ಸ್ವಚ್ಛ ಮತ್ತು ಸುಂದರ ಗ್ರಾಮಗಳಿಗಾಗಿ ಪ್ರತಿ ಗ್ರಾಮಗಳಿಗೆ ತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಣ ಘಟಕ ನಿರ್ಮಿಸಿದ್ದಾರೆ.

ಕಾಲನಿಗಳಿಗೆ ಮೂಲ ಸೌಕರ್ಯ: ಸಾಮಾಜಿಕವಾಗಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೂ ಗಮನ ನೀಡಿದ್ದಾರೆ. ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳಡಿ ವಿವಿಧ ಗ್ರಾಮಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲನಿಗಳಲ್ಲಿ ಸಿಸಿ ರಸ್ತೆ ಸೇರಿದಂತೆ ಮೂಲ ಸೌಕರ್ಯ ಕಾಮಗಾರಿಗಳನ್ನು ಕೈಗೊಂಡಿದ್ದಾರೆ.

ನೀರಾವರಿ ಯೋಜನೆ: ರೋಣ ಕ್ಷೇತ್ರದ ಕೃಷಿ ಆಧರಿತ ಆರ್ಥಿಕತೆಗೆ ನೀರಾವರಿ ಅತ್ಯಂತ ಪ್ರಮುಖವಾಗಿರುವ ಹಿನ್ನೆಲೆ ಕೆರೆಗಳಿಗೆ ಬಾಂದಾರಗಳ ನಿರ್ಮಾಣದ ಮೂಲಕ ನೀರು ತುಂಬಿಸುವುದು ಹಾಗೂ ನೀರಾವರಿ ಸೌಲಭ್ಯ ವಿಸ್ತರಿಸುವ ಯೋಜನೆಗಳಿಗೆ ಒತ್ತು ನೀಡಿದ್ದಾರೆ.

ಉದ್ಯೋಗ ಸೃಷ್ಟಿಗೆ ಪ್ರಯತ್ನ: ಕಳಕಪ್ಪ ಬಂಡಿ ಅವರು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದ ಸಂದರ್ಭದಲ್ಲಿ ಕೈಗಾರಿಕಾ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.

ವಿಶೇಷ ಛಾಪು: ಜನಸಾಮಾನ್ಯರು ಮತ್ತು ಪಕ್ಷ ನಿಷ್ಠೆಯಲ್ಲಿರುವರನ್ನು ಗುರುತಿಸಿ ಗೌರವಿಸುವ ಗುಣ ಹೊಂದಿರುವುದರಿಂದ ಮಾಜಿ ಶಾಸಕ ಕಳಕಪ್ಪ ಬಂಡಿ ಅವರು ಅಪಾರ ಜನಪ್ರಿಯತೆ ಹೊಂದಿದ್ದಾರೆ. ಅವರು ತಮ್ಮದೇ ಆದ ವಿಶೇಷ ಛಾಪನ್ನು ರಾಜಕಾರಣದಲ್ಲಿ ಮೈಗೂಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಡಂಬಳ ಮಂಡಳ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಮಲ್ಲಪ್ಪ ಗವಿಸಿದ್ಧಪ್ಪ ಮಠದ ತಿಳಿಸಿದರು.

ಅಪಾರ ಕಾಳಜಿ: ಮಾಜಿ ಸಚಿವ ಕಳಕಪ್ಪ ಬಂಡಿ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಡಂಬಳ ಹೋಬಳಿಯಲ್ಲಿ ಶೈಕ್ಷಣಿಕ, ನೀರಾವರಿ, ರಸ್ತೆ ಸುಧಾರಣೆ ಶಾಲಾ, ಸಮುದಾಯ ಭವನ ನಿರ್ಮಾಣ, ಕೃಷಿ ಕ್ಷೇತ್ರ ಸೇರಿದಂತೆ ಮೂಲ ಸೌಕರ್ಯಗಳ ಬಗ್ಗೆ ಹೆಚ್ಚು ಕಾಳಜಿ ವಹಿಸಿದ್ದರು. ಗ್ರಾಮೀಣ, ಬಡ, ಕೂಲಿಕಾರರ ಮತ್ತು ಜನಸಾಮಾನ್ಯರ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ ಎಂದು ಬಿಜೆಪಿ ಡಂಬಳ ಮಂಡಳದ ಅಧ್ಯಕ್ಷ ಅಂದಪ್ಪ ಗಿ. ಹಾರೂಗೇರಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರು, ಮಕ್ಕಳಿಂದ ಹೊಳೆ ಗಂಗಾ ಪೂಜೆ
ಕೂಲಿಕಾರರಿಗೆ ಸ್ಕೀಂನ ಲಾಭ ಪಡೆಯಲಿ: ಪಾಟೀಲ್