ಆದರ್ಶ ವ್ಯಕ್ತಿಗಳ ಗುಣಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಿ

KannadaprabhaNewsNetwork |  
Published : Jan 22, 2024, 02:20 AM IST
4 | Kannada Prabha

ಸಾರಾಂಶ

ಪ್ರತಿಯೊಬ್ಬರ ಜೀವನದಲ್ಲಿಯೂ ಬದಲಾವಣೆಯ ಸಮಯ ಬರುತ್ತದೆ. ಆ ಸಮಯವನ್ನು ಅರಿತು ಉತ್ತಮರಾಗಬೇಕು. ಮನುಷ್ಯ ಶುದ್ಧಿ ಆಗಬೇಕೆಂದರೆ ಗಣ್ಯ ವ್ಯಕ್ತಿಗಳನ್ನು ಅನುಸರಿಸಿ ಸಮಾಜದಲ್ಲಿರುವ ಮಾಲಿನ್ಯವನ್ನು ತೊಲಗಿಸಬೇಕು

- ವಿಧಾನಪರಿಷತ್‌ ಸದಸ್ಯ ಸಿ.ಎನ್. ಮಂಜೇಗೌಡ ಸಲಹೆ ----ಕನ್ನಡಪ್ರಭ ವಾರ್ತೆ ಮೈಸೂರು

ಮಹಾಯೋಗಿ ವೇಮನ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅವರಂತಹ ಮಹಾನ್ ವ್ಯಕ್ತಿಗಳ ಆದರ್ಶ ಗುಣಗಳನ್ನ ಪಾಲಿಸಬೇಕು. ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿಗಳಾಗಬೇಕು ಎಂದು ವಿಧಾನಪರಿಷತ್‌ ಸದಸ್ಯ ಸಿ.ಎನ್. ಮಂಜೇಗೌಡ ಕರೆ ನೀಡಿದರು.

ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಭಾನುವಾರ ಆಯೋಜಿಸಿದ್ದ ಮಹಾಯೋಗಿ ಶ್ರೀ ವೇಮನ ಜಯಂತಿ ಮತ್ತು ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ರೀತಿಯ ಕಾರ್ಯಕ್ರಮಗಳನ್ನು ಜನರು ಭಾಗವಹಿಸಿ, ಇದರಿಂದ ಸಿಗುವ ಉತ್ತಮ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ವ್ಯಕಿಗಳಾಗಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಾಗ ವಿಚಾರ ಹಾಗೂ ತಿಳಿವಳಿಕೆಗಳು ಹೆಚ್ಚಾಗುತ್ತವೆ ಎಂದರು.

ಪ್ರತಿಯೊಬ್ಬರ ಜೀವನದಲ್ಲಿಯೂ ಬದಲಾವಣೆಯ ಸಮಯ ಬರುತ್ತದೆ. ಆ ಸಮಯವನ್ನು ಅರಿತು ಉತ್ತಮರಾಗಬೇಕು. ಮನುಷ್ಯ ಶುದ್ಧಿ ಆಗಬೇಕೆಂದರೆ ಗಣ್ಯ ವ್ಯಕ್ತಿಗಳನ್ನು ಅನುಸರಿಸಿ ಸಮಾಜದಲ್ಲಿರುವ ಮಾಲಿನ್ಯವನ್ನು ತೊಲಗಿಸಬೇಕು. ಕೆಟ್ಟ ವಿಚಾರಗಳು ಮನಸ್ಸಿನಲ್ಲಿ ಬಂದಾಗ ಅವುಗಳನ್ನು ತೊರೆದು ಒಳ್ಳೆಯ ವಿಚಾರದತ್ತ ಗಮನ ಕೊಡಬೇಕು. ಕ್ರೋದ, ಮದ -ಮತ್ಸರಗಳನ್ನು ಬಿಟ್ಟು ಸಹಬಾಳ್ವೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಲೋಕನಾಥ್, ನಗರ ಪಾಲಿಕೆಯ ಉಪ ಆಯುಕ್ತ ಸೋಮಶೇಖರ್, ನಿವೃತ್ತ ಪ್ರಾಧ್ಯಾಪಕಿ ಡಾ.ಎಚ್.ಎಂ. ವಸಂತಮ್ಮ, ಪ್ರೊ. ಜ್ಯೋತಿ ಶಂಕರ್, ಕನ್ನಡಪರ ಹೋರಾಟಗಾರ ತಾಯೂರು ವಿಠಲಮೂರ್ತಿ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!