ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಕಲಾಮಂದಿರ ಆವರಣದಲ್ಲಿ ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಗುರುವಾರ ಆಯೋಜಿಸಿದ್ದ ನೈಪುಣ್ಯೋತ್ಸವ- ಜನಪದ ತೇರು ವಾರ್ಷಿಕೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮುಖ್ಯ. ಕೇವಲ ಓದು ಮಾತ್ರವಲ್ಲದೇ ಇನ್ನಿತರೆ ವಿಚಾರಗಳಲ್ಲಿ ಆಸಕ್ತಿ ಇರುವ ಮಕ್ಕಳಿಗೆ ಪೋಷಕರು ಸಹಕಾರ ಮತ್ತು ಬೆಂಬಲ ನೀಡಬೇಕು. ಬೆನ್ನುತಟ್ಟಿ ಪ್ರೋತ್ಸಾಹಿಸಿ ಮಕ್ಕಳ ಪ್ರತಿಭೆ ಅನಾವರಣಕ್ಕೆ ಮುಂದಾಗಬೇಕು ಎಂದರು.ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೂಷಕರು, ಶಿಕ್ಷಕರು ಹಾಗೂ ಸರ್ಕಾರ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳು ತಮ್ಮ ಪೋಷಕರನ್ನೇ ಮಾದರಿಯಾಗಿ ಸ್ವೀಕರಿಸುತ್ತಾರೆ. ಪೋಷಕರಾಗಿ ನಾವು ಮಕ್ಕಳಿಗೆ ಎಲ್ಲವೂ ಆಗಿರುತ್ತೇವೆ. ನಮ್ಮ ನಡವಳಿಕೆ, ಸ್ವಭಾವವೇ ಮಕ್ಕಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.
ಶಿಕ್ಷಣ ತಜ್ಞೆ ಡಾ.ಎಲ್. ಸವಿತಾ ಮಾತನಾಡಿ, ಸಮಾಜದಲ್ಲಿ ನೋಡಿದ್ದನ್ನೇ ಮಕ್ಕಳು ಕಲಿಯುತ್ತಾರೆ. ಸಮಾಜದೊಂದಿಗೆ ಮಕ್ಕಳು ಬರೆಯುವ ರೀತಿಯಲ್ಲಿ, ಮಕ್ಕಳ ಸರ್ವತೋಮುಖ ಬೆಳವಣಿಗೆ ಮೇಲೆ ಪೋಷಕರ ಮಾರ್ಕ್ಸ್ ಕಾರ್ಡ್ ಸಿಗುತ್ತದೆ. ಹಾಗಾಗಿ ಉತ್ತಮ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಇದೇ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಹಾಸನ ರಘು ಅವರಿಗೆ ನೈಪುಣ್ಯ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಘುಲೀಲಾ ಸಂಗೀತ ಶಾಲೆಯ ಸುನೀತಾ ಚಂದ್ರಕುಮಾರ್ ನಿರ್ದೇಶನದಲ್ಲಿ ದಟ್ಟಗಳ್ಳಿ ಕ್ಯಾಂಪಸ್ನ ಸಿಬಿಎಸ್ಇ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳು ಜನಪದ ಸಂಗಮ ಕಾರ್ಯಕ್ರಮ ನಡೆಸಿಕೊಟ್ಟರು.
eom/mys/dnm/