ಸುಗಮ ಸಂಗೀತಕ್ಕೆ ಕಾಳಿಂಗರಾವ್ ಕೊಡುಗೆ: ಎಸ್.ಶಾಂತಾಶೆಟ್ಟಿ

KannadaprabhaNewsNetwork |  
Published : Sep 02, 2025, 01:00 AM IST
ಶಿವಮೊಗ್ಗ ನಗರದ ಮಥುರಾ ಪ್ಯಾರಾಡೈಸ್ ನಲ್ಲಿ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಇದರ 28 ನೇ ವಾರ್ಷಿಕೋತ್ಸವ ಹಾಗೂ ವಿಶ್ವ ಸುಗಮ ಸಂಗೀತ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಕಲಾವಿದರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಸುಗಮ ಸಂಗೀತ ಪಿತಾಮಹ ಎಂದೇ ಗುರುತಿಸಲಾಗುವ ಪಿ. ಕಾಳಿಂಗರಾವ್ ಅವರು ಸುಗಮ ಸಂಗೀತ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಅಪಾರವಾದುದು. ಅವರ ಸಾಧನೆ ಹಾಗೂ ಸಲ್ಲಿಸಿದ ಸೇವೆಗಳು ಇಂದಿಗೂ ಅಜರಾಮರ ಎಂದು ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟಿನ ಅಧ್ಯಕ್ಷ ಎಸ್.ಶಾಂತಾಶೆಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸುಗಮ ಸಂಗೀತ ಪಿತಾಮಹ ಎಂದೇ ಗುರುತಿಸಲಾಗುವ ಪಿ. ಕಾಳಿಂಗರಾವ್ ಅವರು ಸುಗಮ ಸಂಗೀತ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಅಪಾರವಾದುದು. ಅವರ ಸಾಧನೆ ಹಾಗೂ ಸಲ್ಲಿಸಿದ ಸೇವೆಗಳು ಇಂದಿಗೂ ಅಜರಾಮರ ಎಂದು ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟಿನ ಅಧ್ಯಕ್ಷ ಎಸ್.ಶಾಂತಾಶೆಟ್ಟಿ ಹೇಳಿದರು.

ನಗರದ ಮಥುರಾ ಪ್ಯಾರಾಡೈಸ್ ನಲ್ಲಿ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಇದರ 28ನೇ ವಾರ್ಷಿಕೋತ್ಸವ ಹಾಗೂ ವಿಶ್ವ ಸುಗಮ ಸಂಗೀತ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಿ.ಕಾಳಿಂಗರಾಯರ ಹಾಡುಗಳು ಇಂದಿಗೂ ಸಹ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿವೆ. ಅವರ ಮಾರ್ಗದರ್ಶನದಲ್ಲಿ ಬೆಳೆದ ಸಾಕಷ್ಟು ಜನ ಕಲಾವಿದರು ಇಂದು ಸುಗಮ ಸಂಗೀತ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಎಂದರು.

ಸುಗಮ ಸಂಗೀತ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದ ಸುಗಮ ಸಂಗೀತ ಹಾಗೂ ಆಕಾಶವಾಣಿ ಕಲಾವಿದರಾದ ವಿದುಷಿ ಜಯಶ್ರೀ ಶ್ರೀಧರ್ ಹಾಗೂ ವಿದುಷಿ ಉಮಾ ದಿಲೀಪ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶೋಭಾ ಸತೀಶ್, ಸುಶೀಲ, ರಾಜಕುಮಾರ್, ದಾಕ್ಷಾಯಿಣಿ, ಲಕ್ಷ್ಮಿ ಮಹೇಶ್, ಕೆ.ಎಸ್.ಮಂಜುನಾಥ್, ಶ್ವೇತಾ ಪಾಟೀಲ್, ಮಥುರಾ ನಾಗರಾಜ್, ಲತಾ ಕೆದಿಲಾಯ, ಮಮತಾ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?