ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

KannadaprabhaNewsNetwork |  
Published : Dec 05, 2025, 02:30 AM IST
32 | Kannada Prabha

ಸಾರಾಂಶ

ಪ್ರಭಾಕರ ಭಟ್ ಜಾಮೀನು ಅರ್ಜಿ ವಿಚಾರಣೆಯಲ್ಲಿ ಬಿಎನ್‌ಎಸ್‌ಎಸ್ ಸೆಕ್ಷನ್ ೩೩೮ - ೩೩೯ ಅಡಿ ಅವಕಾಶ ಕೋರಿ ದೂರುದಾರೆ ಸಲ್ಲಿಸಿರುವ ಅರ್ಜಿಯನ್ನು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಪುರಸ್ಕರಿಸಿದೆ. ಡಾ. ಪ್ರಭಾಕರ ಭಟ್ ಜಾಮೀನು ಅರ್ಜಿಯ ವಿಚಾರಣೆಯನ್ನು ೫ಕ್ಕೆ ಮುಂದೂಡಿದೆ.

ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ, ಸಾರ್ವಜನಿಕ ಅಶಾಂತಿ ಉಂಟು ಮಾಡುವ ಭಾಷಣ ಮಾಡಿರುವ ಆರೋಪದಲ್ಲಿ ಪ್ರಭಾಕರ ಭಟ್ ಜಾಮೀನು ಅರ್ಜಿ ವಿಚಾರಣೆಯಲ್ಲಿ ಬಿಎನ್‌ಎಸ್‌ಎಸ್ ಸೆಕ್ಷನ್ ೩೩೮ - ೩೩೯ ಅಡಿ ಅವಕಾಶ ಕೋರಿ ದೂರುದಾರೆ ಸಲ್ಲಿಸಿರುವ ಅರ್ಜಿಯನ್ನು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಪುರಸ್ಕರಿಸಿದೆ. ಡಾ. ಪ್ರಭಾಕರ ಭಟ್ ಜಾಮೀನು ಅರ್ಜಿಯ ವಿಚಾರಣೆಯನ್ನು ೫ಕ್ಕೆ ಮುಂದೂಡಿದೆ.

ಈಶ್ವರಿ ಪದ್ಮುಂಜ ಪರ ವಕೀಲ ಸತೀಶನ್ ಅವರ ಬಿಎನ್‌ಎಸ್‌ಎಸ್ ಸೆಕ್ಷನ್ ೩೩೮ - ೩೩೯ ಅರ್ಜಿ ಪುರಸ್ಕೃತಗೊಂಡಿರುವುದರಿಂದ ಅವರು ಪ್ರಭಾಕರ ಭಟ್ ಸಲ್ಲಿಸಿರುವ ಜಾಮೀನು ಅರ್ಜಿಗೆ ವಿರುದ್ಧವಾಗಿ ವಾದ ಮಂಡಿಸುವ ಅವಕಾಶ ಪಡೆದುಕೊಂಡಿದ್ದಾರೆ. ಇದೀಗ ಕಲ್ಲಡ್ಕ ಭಟ್ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಲಾಗಿದೆ.ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಅ.೨೨ರಂದು ನಡೆದ ದೀಪೋತ್ಸವ ಮತ್ತು ಗೋಪೂಜೆ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಧ್ವೇಷ ಭಾಷಣ ಮಾಡಿದ್ದಾರೆಂದು ಆರೋಪಿಸಿ ಜನವಾದಿ ಮಹಿಳಾ ಸಂಘಟನೆಯ ಈಶ್ವರಿ ಪದ್ಮುಂಜ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು ಬಿಎನ್‌ಎಸ್-೨೦೨೩ರ ಸೆಕ್ಷನ್ ೭೯, ೧೯೬, ೨೯೯, ೩೦೨ ಹಾಗೂ ೩(೫) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಆರೋಪಿ ಪ್ರಭಾಕರ ಭಟ್ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಅಲ್ಲಿಸಿದ್ದರು.

ಅ.೨೭ ರಂದು ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಅವರ ವಿರುದ್ದ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಮಧ್ಯಂತರ ಆದೇಶ ನೀಡಿ ಪೂರ್ಣ ಪ್ರಮಾಣದ ವಿಚಾರಣೆ ಮತ್ತು ನಿರೀಕ್ಷಣಾ ಜಾಮೀನು ಸಂಬಂಧ ಅದೇಶವನ್ನು ಅ.೨೯ ಕ್ಕೆ ಮುಂದೂಡಿತ್ತು. ಬಳಿಕ ಹಲವು ಬಾರಿ ವಿಚಾರಣೆ ಮುಂದೂಡಲ್ಪಟ್ಟಿತ್ತು. ಇದೀಗ ಜಾಮೀನು ಅರ್ಜಿ ವಿಚಾರಣೆ ದ.೫ಕ್ಕೆ ಮುಂದೂಡಲ್ಪಟ್ಟಿದೆ ಹಾಗೂ ಬಿಎನ್‌ಎಸ್‌ಎಸ್ ಸೆಕ್ಷನ್ ೩೩೮ - ೩೩೯ ಅಡಿ ಅವಕಾಶ ಕೊಡಬೇಕು ಎಂಬ ದೂರುದಾರೆ ಈಶ್ವರಿ ಪದ್ಮುಂಜ ಪರ ವಕೀಲ ಸತೀಶನ್ ಮಂಡಿಸಿದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿ ವಾದ ಮಂಡನೆಗೆ ಅವಕಾಶ ನೀಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳ್ತಂಗಡಿ ಬಸ್ ನಿಲ್ದಾಣ ಕಾಮಗಾರಿಗೆ ಮರುಜೀವ
ಪ್ರತಿಭಾ ಕಾರಂಜಿ ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಸೋಮಯ್ಯ