ದ್ವೇಷ ಭಾಷಣ ಆರೋಪ: ಡಾ. ಪ್ರಭಾಕರ ಭಟ್, ಯೂಟ್ಯೂಬ್‌ ಚಾನೆಲ್ ವಿರುದ್ಧ ಎಫ್‌ಐಆರ್‌

KannadaprabhaNewsNetwork |  
Published : Jan 23, 2026, 03:00 AM IST
ಕಲ್ಲಡ್ಕ ಪ್ರಭಾಕರ ಭಟ್ | Kannada Prabha

ಸಾರಾಂಶ

ಪ್ರಚೋದನಾಕಾರಿ ಭಾಷಣ ಆರೋಪದ ಹಿನ್ನೆಲೆಯಲ್ಲಿ ಪುತ್ತೂರಿನ ಮಾನವ ಬಂಧುತ್ವ ವೇದಿಕೆಯ ವತಿಯಿಂದ ನೀಡಲಾಗಿರುವ ದೂರಿನಂತೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಆರ್‌ಎಸ್‌ಎಸ್‌ ಪ್ರಮುಖ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಖಾಸಗಿ ಯೂಟ್ಯೂಬ್ ಚಾನಲ್ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ದೂರು

ಪುತ್ತೂರು: ಪ್ರಚೋದನಾಕಾರಿ ಭಾಷಣ ಆರೋಪದ ಹಿನ್ನೆಲೆಯಲ್ಲಿ ಪುತ್ತೂರಿನ ಮಾನವ ಬಂಧುತ್ವ ವೇದಿಕೆಯ ವತಿಯಿಂದ ನೀಡಲಾಗಿರುವ ದೂರಿನಂತೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಆರ್‌ಎಸ್‌ಎಸ್‌ ಪ್ರಮುಖ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಖಾಸಗಿ ಯೂಟ್ಯೂಬ್ ಚಾನಲ್ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.ಕಾರ್ಯಕ್ರಮದಲ್ಲಿ ಕೋಮುಧ್ವೇಷ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಡಾ.ಕಲ್ಲಡ ಪ್ರಭಾಕರ ಭಟ್ ವಿರುದ್ದ ಹಾಗೂ ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ಚಾನಲ್ ಹಾಗೂ ಸದ್ರಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ದ ಕಾನೂನುಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 10/2026, ಕಲಂ:196,299,302,353(2),3(5) BNS ರಂತೆ ಪ್ರಕರಣ ದಾಖಲಿಸಲಾಗಿದೆ.

ಜ.೧೨ರಂದು ವಿವೇಕಾನಂದ ಕಾಲೇಜಿನ ಅವರಣದಲ್ಲಿ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಅವರು ಕಾಲೇಜಿನ ವಿದ್ಯಾರ್ಥಿಗಳು, ಪೋಷಕರು ಹಾಗೂ ಹದಿ ಹರೆಯದ ಬಾಲಕ ಬಾಲಕಿಯರು ಭಾಗವಹಿಸಿದ್ದ ಸಭೆಯಲ್ಲಿ ದ್ವೇಷ ಭಾಷಣ ಮಾಡಿದ್ದಾರೆ. ದ್ವೇಷ ಭಾಷಣದಲ್ಲಿ ಮುಸಲ್ಮಾನರ ಮತ್ತು ಕ್ರೈಸ್ತರ ಮೇಲೆ ಹಿಂಸೆ ಮಾಡಲು ಪ್ರಚೋದಿಸುತ್ತಾರೆ ಎಂದು ಮಾನವ ಬಂಧಿತ್ವ ವೇದಿಕೆಯ ವತಿಯಿಂದ ಬುಧವಾರ ಪುತ್ತೂರು ನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ದೂರು ನೀಡುವ ಸಂದರ್ಭ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಅಮಳ ರಾಮಚಂದ್ರ, ಪ್ರಮುಖರಾದ ಎಂ.ಬಿ ವಿಶ್ವನಾಥ ರೈ, ಮೌರಿಸ್ ಮಸ್ಕರೇನಸ್, ಎಚ್ ಮಹಮ್ಮದ್ ಆಲಿ, ಕೆನ್ಯೂಟ್ ಮಸ್ಕರೇನಸ್, ಡಾ. ರಾಜಾರಾಮ್ ಕೆ.ಬಿ, ಬೋಲೋಡಿ ಚಂದ್ರಹಾಸ ರೈ, ಶಶಿಕಿರಣ್ ರೈ, ಅಬ್ದುಲ್ ರೆಹಮಾನ್ ಯೂನಿಕ್, ಉಲ್ಲಾಸ್ ಕೋಟ್ಯಾನ್, ಪ್ರಕಾಶ್ ಗೌಡ ತೆಂಕಿಲ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂತ್ರಜ್ಞಾನದ ಬದಲಾವಣೆಗೆ ತಕ್ಕಂತೆ ‘ಸುಸ್ಥಿರ ಡೇಟಾ ಸೆಂಟರ್‌’
ಉಪ ನೋಂದಣಾಧಿಕಾರಿಗೆ ಧಮ್ಕಿ ಹಾಕಿದ್ದ ಆರೋಪಿ ಸೆರೆ