2 ಕೋಟಿ ವೆಚ್ಚದಲ್ಲಿ ಕಲ್ಮೇಶ್ವರ ದೇವಸ್ಥಾನ ನಿರ್ಮಾಣ

KannadaprabhaNewsNetwork |  
Published : Aug 09, 2025, 12:10 AM IST
ಚಂದನಹೊಸೂರು ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದ ನೂತನ ಕಟ್ಟಡದ ನಿರ್ಮಾಣ ಕಾಮಗಾರಿ ಚಾಲನೆ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿದರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಕಳೆದ ಚುನಾವಣೆ ವೇಳೆ ಕೊಟ್ಟ ಮಾತಿನಂತೆ ಚಂದನ ಹೊಸೂರಿನಲ್ಲಿ ₹2 ಕೋಟಿ ವೆಚ್ಚದಲ್ಲಿ ಕಲ್ಮೇಶ್ವರ ದೇವಸ್ಥಾನ ನಿರ್ಮಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕಳೆದ ಚುನಾವಣೆ ವೇಳೆ ಕೊಟ್ಟ ಮಾತಿನಂತೆ ಚಂದನ ಹೊಸೂರಿನಲ್ಲಿ ₹2 ಕೋಟಿ ವೆಚ್ಚದಲ್ಲಿ ಕಲ್ಮೇಶ್ವರ ದೇವಸ್ಥಾನ ನಿರ್ಮಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಚಂದನಹೊಸೂರು ಗ್ರಾಮದ ಕಲ್ಮೇಶ್ವರ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸುಮಾರು ₹2 ಕೋಟಿ ವೆಚ್ಚದಲ್ಲಿ ದೇವಸ್ಥಾನ ಕಟ್ಟಡ ನಿರ್ಮಾಣವಾಗಲಿದ್ದು, ಈಗಾಗಲೇ ಮೊದಲನೇ ಹಂತದಲ್ಲಿ ₹40 ಲಕ್ಷ ಹಾಗೂ 2ನೇ ಹಂತದಲ್ಲಿ ₹40 ಲಕ್ಷ ಒಟ್ಟು ₹80 ಲಕ್ಷ ಬಿಡುಗಡೆಗೊಂಡಿದ್ದು, ಇನ್ನುಳಿದ ಹಣ ಹಂತ ಹಂತವಾಗಿ ಬಿಡುಗಡೆಗೊಳ್ಳಲಿದೆ ಎಂದರು.

ಕ್ಷೇತ್ರದ ಜನರ ಆಶೋತ್ತರಗಳು ಹಾಗೂ ಭಾವನೆಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡುತ್ತಿರುವೆ. ಕೇವಲ ಚುನಾವಣೆ ಸಮಯದಲ್ಲಿ ಗ್ರಾಮಗಳಿಗೆ ನಾನು ಬರುವುದಿಲ್ಲ. ಗ್ರಾಮದ ಅಭಿವೃದ್ಧಿ ಕೆಲಸಗಳಿಗೆ ಸ್ಪಂದಿಸದ ಕೆಲ ಮಂದಿ ಮೋದಿ ಹೆಸರು ಹೇಳಿಕೊಂಡು ಚುನಾವಣೆ ವೇಳೆ ಮತ ಕೇಳಲು ಬರುತ್ತಾರೆ. ನಾನು ಜನರೊಂದಿಗೆ ಸದಾ ಒಡನಾಟ ಇಟ್ಟಿಕೊಂಡಿರುವೆ ಎಂದರು.

ಕಾರ್ಯಕ್ರಮದಲ್ಲಿ ಹಣಬರಟ್ಟಿಯ ಬಸವಲಿಂಗ ಶಿವಾಚಾರ್ಯರು, ಮುತ್ನಾಳ ಕೇದಾರ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯರು, ಚಂದನಹೊಸೂರು-ಸುತಗಟ್ಟಿ ಸಿದ್ದಲಿಂಗ ಶಿವಾಚರ್ಯ ಸ್ವಾಮೀಜಿ, ಬಡೇಕೊಳ್ಳಿಮಠದ ಶಿವಯೋಗಿ ನಾಗೇಂದ್ರ ಸ್ವಾಮೀಜಿ, ವೇದಮೂರ್ತಿ ಮಹೇಶ ಸ್ವಾಮೀಜಿ, ಗಂಗಯ್ಯ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಉಪಸ್ಥಿತರಿದ್ದರು.

ಕೋಟ್....ಕ್ಷೇತ್ರದಲ್ಲಿರುವ 114 ಗ್ರಾಮಗಳಲ್ಲಿ 140 ಗುಡಿಗಳನ್ನು ನಿರ್ಮಿಸಿರುವೆ. ರಾಮರಾಜ್ಯದ ಪರಿಕಲ್ಪನೆಯೊಂದಿಗೆ ಕೆಲಸ ಮಾಡುತ್ತಿರುವೆ. ಅಧಿಕಾರ ಯಾವತ್ತೂ ಶಾಶ್ವತ ಅಲ್ಲ. ಜನರೊಂದಿಗೆ ಒಡನಾಟ ಮುಖ್ಯ. ದಿನದ 24 ಗಂಟೆಯೂ ಕೆಲಸ ಮಾಡುತ್ತಿರುವೆ. ಪುರುಷ ಪ್ರಧಾನ ಸಮಾಜ, ಪುರುಷ ಪ್ರಧಾನ ರಾಜಕೀಯದಲ್ಲಿ ಕರ್ನಾಟಕ ಸರ್ಕಾರದ ಸಚಿವ ಸಂಪುಟದ ಏಕೈಕ ಮಹಿಳಾ ಮಂತ್ರಿಯಾಗಿರುವೆ. ಇದಕ್ಕೆ ಜನರು ನೀಡಿದ ಬೆಂಬಲವೇ ಕಾರಣ.-ಲಕ್ಷ್ಮೀ ಹೆಬ್ಬಾಳಕರ್, ಸಚಿವೆ.

PREV

Recommended Stories

ಬೆಳ್ತಂಗಡಿ: ಆಧಾರ್‌ ನೋಂದಣಿ, ತಿದ್ದುಪಡಿ ಶಿಬಿರ
ಲಾಯಿಲ ರಾಘವೇಂದ್ರ ಮಠ ಅಭಿವೃದ್ಧಿಗೆ 20 ಲಕ್ಷ ರು. ನೆರವು: ಶಾಸಕ ಗವಿಯಪ್ಪ ಭರವಸೆ