ಕನ್ನಡಪ್ರಭ ವಾರ್ತೆ ಕನಕಗಿರಿ
ಪಟ್ಟಣದ ಸರ್ಕಾರಿ ಪಪೂ ಕಾಲೇಜಿನ ಮೈದಾನದಲ್ಲಿ ಮಂಗಳವಾರ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ೭೭ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಾಲಾ, ಕಾಲೇಜು ಅಭಿವೃದ್ಧಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕಂಪ್ಯೂಟರ್, ತಂತ್ರಜ್ಞಾನ ಸಾಮಗ್ರಿ, ಲ್ಯಾಪ್ಟಾಪ್ ವಿತರಣೆ, ರಸ್ತೆ ಅಭಿವೃದ್ಧಿ ಸೇರಿದಂತೆ ಹತ್ತಾರು ಅಭಿವೃದ್ಧಿ ಕಾರ್ಯಗಳಿಗೆ ಈ ಅನುದಾನ ಬಳಕೆಯಾಗುತ್ತಿದ್ದು, ಹಂತ-ಹಂತವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪರ್ವದತ್ತ ಸಾಗುತ್ತಿದೆ ಎಂದರು.
೧೯೪೭ರ ಪೂರ್ವದಲ್ಲಿ ಭಾರತದ ಒಕ್ಕೂಟ ವ್ಯವಸ್ಥೆಯಿಂದ ದೂರ ಉಳಿದಿದ್ದ ಕಲ್ಯಾಣ ಕರ್ನಾಟಕ ಪ್ರದೇಶ ರಜಾಕಾರರ ಕಪಿಮುಷ್ಠಿಯಲ್ಲಿತ್ತು. ಅನೇಕ ಹೋರಾಟಗಾರರ ಹೋರಾಟಗಳ, ಚಳವಳಿಗಳ ಮೂಲಕ ೧೯೪೮ ಸೆ.೧೭ರಂದು ಈ ಪ್ರದೇಶದ ಜನತೆಗೆ ಸ್ವಾತಂತ್ರ್ಯ ದೊರೆಯುವಂತಾಯಿತು ಎಂದು ತಿಳಿಸಿದರು.ನಂತರ ಉಪನ್ಯಾಸಕ ಶಿವಪುತ್ರಪ್ಪ ಗಳಪೂಜೆ ಮಾತನಾಡಿ, ಹೈದ್ರಬಾದ ನಿಜಾಮನ ದೌರ್ಜನ್ಯ, ದಬ್ಬಾಳಿಕೆ ಹಾಗೂ ಹಿಂಸಾತ್ಮಕ ಕೃತ್ಯಗಳಿಂದ ಆತಂಕಕ್ಕೆ ಒಳಗಾಗಿದ್ದರು. ರಮಾನಂದ ತೀರ್ಥರು ಶಾಂತಿಧೂತರಾಗಿ ಅನೇಕ ಚಳವಳಿ ಹಮ್ಮಿಕೊಂಡು ಜನರನ್ನು ಒಗ್ಗೂಡಿಸಿ ಹೋರಾಟದ ಕಿಚ್ಚು ಹೊತ್ತಿಸಿದರು.
ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಇದೇ ವೇಳೆ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾದ ನೆಡುತೋಪು ಕಾವಲುಗಾರ ಈರಪ್ಪ ಹಾದಿಮನಿ ಅವರನ್ನು ತಾಲೂಕು ಆಡಳಿತದಿಂದ ಗೌರವಿಸಲಾಯಿತು.