ಕೊಪ್ಪಳ:
ಈ ಕುರಿತು ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಶುಕ್ರವಾರ ಮನವಿ ಸಲ್ಲಿಸಿದ ಸಮಿತಿ, ದೇಶಕ್ಕೆ ಸ್ವಾತಂತ್ರ್ಯ ೧೯೪೭ರ ಆ. ೧೫ರಂದು ಸಿಕ್ಕರೆ ಹೈದರಾಬಾದ್ ಸಂಸ್ಥಾನವು ಸೆ. ೧೭, ೧೯೪೮ರಂದು ಭಾರತ ಒಕ್ಕೂಟದಲ್ಲಿ ವಿಲೀನವಾಯಿತು. ಈ ದಿನವನ್ನು ೧೯೯೮ರಿಂದ ಪ್ರತಿ ವರ್ಷ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನವನ್ನಾಗಿ ಆಚರಿಸಲಾಗುತ್ತಿತ್ತು, ಕಳೆದ ಅವಧಿಯ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಉತ್ಸವವೆಂದು ಘೋಷಿಸಿದೆ. ೧೯೯೮ರಿಂದಲೂ ಸಿಎಂ ಈ ಉತ್ಸವದಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ಒಂದೇ ಜಿಲ್ಲೆಯಲ್ಲಿ ಸಿಎಂ ಧ್ವಜಾರೋಹಣ ಮಾಡದೆ, ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಒಂದೊಂದು ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಬೇಕು. ಇದರ ಭಾಗವಾಗಿ ಈ ವರ್ಷ ಕೊಪ್ಪಳದಲ್ಲಿ ನೆರವೇರಿಸಬೇಕೆಂದರು.
ಈ ವೇಳೆ ಅಧ್ಯಕ್ಷ ರಮೇಶ ತುಪ್ಪದ, ಜಿಲ್ಲಾ ಸಂಚಾಲಕ ಸಂತೋಷ ದೇಶಪಾಂಡೆ, ಶಿವಕುಮಾರ ಕುಕನೂರ, ಮಂಜುನಾಥ ಅಂಗಡಿ, ಹುಲಗಪ್ಪ ಕಟ್ಟಿಮನಿ, ಸೋಮನಗೌಡ ಹೊಗರನಾಳ, ಸುಧಾಕರ ಮುಜಗೊಂಡ, ನಿತೇಶ ಪುಲಸ್ಕರ, ವಿನೋದ ಡೊಳ್ಳಿನ, ಆರ್. ಮಂಜುನಾಥ ಇದ್ದರು.