ಕನ್ನಡಪ್ರಭ ವಾರ್ತೆ ಶಿರಾ
ತಾಲೂಕಿನ ಗೌಡಗೆರೆ ಹೋಬಳಿಯ ಮೊಸರ ಕುಂಟೆ ಗ್ರಾಮದ ಶುಕ್ರವಾರ ನಡೆದ ಪ್ರಸಿದ್ಧ ಲಕ್ಷ್ಮಿ ರಂಗನಾಥ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಜಗತ್ತಿನ ಮನುಕುಲದ ಒಳಿತಿನ ಸಂಕಲ್ಪದೊಂದಿಗೆ ನಡೆಸುವ ಇಂತಹ ಕಲ್ಯಾಣೋತ್ಸವಗಳು ನಾಡು ಮತ್ತು ತಮ್ಮ ತಮ್ಮ ಗ್ರಾಮಗಳಿಗೆ ಸುಭಿಕ್ಷೆ ಕರುಣಿ ಸಲಿದೆ. ಜೀವನ ಕೂಡ ಸಮ ಚಿತ್ತದಿಂದ ಸ್ವೀಕರಿಸಿದಾಗ ಎಲ್ಲವೂ ಸುಲಲಿತ ಅನಿಸಲಿದೆ ಎಂದರು.
ಎಲ್ಲವರು ನಮ್ಮವರೇ ಎಂಬ ಭಾವನೆಯೊಂದಿಗೆ ನಾಡ ಪ್ರಭು ಕೆಂಪೇಗೌಡ ಅವರು ಕಟ್ಟಿದ ಗೌಡ ಸಾಮ್ರಾಜ್ಯ ಜನರಿಗಾಗಿ ಬದುಕುವ ಒಕ್ಕಲಿಗರ ಮನಸ್ಥಿತಿಯನ್ನು ಸಾಕ್ಷಿಕರಿಸುತ್ತದೆ. ಕೆಂಪೇಗೌಡರು ಬೆಂಗಳೂರು ಕಟ್ಟಿದ ಕಾರಣ ಬೆಂಗಳೂರಿಗೆ ವಿಶ್ವಮಟ್ಟದ ಖ್ಯಾತಿ ದೊರೆಕಿದ್ದು, ಸರ್ಕಾರಗಳಿಗೆ ಶೇ.೬೦ರಷ್ಟು ಆದಾಯವನ್ನು ಬೆಂಗಳೂರು ನಗರ ನೀಡುತ್ತಿದೆ ಎಂದರೆ ಅದಕ್ಕೆ ಕೆಂಪೇಗೌಡರ ದೂರದೃಷ್ಟಿ ಯೋಜನೆಗಳೇ ಕಾರಣ, ಪ್ರತಿಯೊಬ್ಬರೂ ದೇಶ ಮತ್ತು ನೆಲಕ್ಕಾಗಿ ದುಡಿಯುವ ಸಂಕಲ್ಪ ಮಾಡಬೇಕು ಎಂದರು.ಲಕ್ಷ್ಮಿ ರಂಗನಾಥ ಸ್ವಾಮಿ ಕಲ್ಯಾಣೋತ್ಸವದಲ್ಲಿ ರಾಜ್ಯದ ನಾನಾ ಜಿಲ್ಲೆಗಳ ಆಗಮಿಸಿದ್ದ ಸಾವಿರಾರು ಭಕ್ತರು ಕಲ್ಯಾಣೋತ್ಸವ ಕಣ್ತುಂಬಿಕೊಂಡರು. ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡು ಭಕ್ತರಿಗೆ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿತ್ತು.