ಕಮಲ್ ಹಾಸನ್‌ ಯಾವುದೇ ಚಿತ್ರ ಪ್ರದರ್ಶನಕ್ಕೆ ಅವಕಾಶ ಬೇಡ

KannadaprabhaNewsNetwork |  
Published : May 31, 2025, 12:56 AM IST
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳು ನಟ ಕಮಲ್ ಹಾಸನ್ ನಟನೆಯ ಥಗ್‌ಲೈಫ್‌ ಚಿತ್ರವನ್ನು ಬಿಡುಗಡೆಗೊಳಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಗೌಡ ಬಣ) ಕಾರ್ಯಕರ್ತರು ಬಳ್ಳಾರಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳು ನಟ ಕಮಲ್ ಹಾಸನ್ ಅವರು ಕನ್ನಡಿಗರ ಕ್ಷಮೆಯಾಚಿಸುವ ವರೆಗೆ ನಟನ ಯಾವುದೇ ಚಿತ್ರಗಳು ರಾಜ್ಯದಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಗೌಡ ಬಣ) ಕಾರ್ಯಕರ್ತರು ಬಳ್ಳಾರಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಬಳ್ಳಾರಿ: ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳು ನಟ ಕಮಲ್ ಹಾಸನ್ ನಟನೆಯ ಥಗ್‌ಲೈಫ್‌ ಚಿತ್ರ ಬಿಡುಗಡೆಗೊಳಿಸಬಾರದು. ಕನ್ನಡಿಗರ ಕ್ಷಮೆಯಾಚಿಸುವ ವರೆಗೆ ನಟನ ಯಾವುದೇ ಚಿತ್ರಗಳು ರಾಜ್ಯದಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಗೌಡ ಬಣ) ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ಹಾಗೂ ಕನ್ನಡದ ಪ್ರಾಚೀನತೆ ಹಾಗೂ ಅದರ ಮಹತ್ವದ ಬಗ್ಗೆ ನಟ ಕಮಲ್ ಹಾಸನ್‌ಗೆ ಯಾವುದೇ ಮಾಹಿತಿ ಇಲ್ಲ. ತಮಿಳುಗರನ್ನು ಓಲೈಸಲು ಕನ್ನಡ ಭಾಷೆಗೆ ಅಪಮಾನ ಮಾಡಿದ್ದಾರೆ. ಆಗಿರುವ ತಪ್ಪಿಗೆ ಕ್ಷಮೆ ಕೇಳುವ ಬದಲು ಕ್ಷಮೆಯಾಚಿಸುವುದಿಲ್ಲ ಎಂದು ಉದ್ಧಟತನ ಪ್ರದರ್ಶಿಸಿದ್ದಾರೆ. ಹೀಗಾಗಿ ಜೂ. 5ರಂದು ಬಿಡುಗಡೆಯಾಗಲಿರುವ ಥಗ್‌ಲೈಫ್ ಚಿತ್ರವನ್ನು ರಾಜ್ಯದ ಯಾವುದೇ ಚಿತ್ರಮಂದಿರದಲ್ಲಿ ಬಿಡುಗಡೆಗೊಳಿಸದಂತೆ ರಾಜ್ಯ ಸರ್ಕಾರ ಕ್ರಮ ವಹಿಸಬೇಕು. ಚಲನಚಿತ್ರ ವಾಣಿಜ್ಯ ಮಂಡಳಿ ಸಹ ಕಮಲ್ ಹಾಸನ್ ವಿರುದ್ಧ ಕಠಿಣ ನಿಲುವು ಪ್ರದರ್ಶಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ರಾಯಲ್ ವೃತ್ತದಲ್ಲಿ ಜಮಾಯಿಸಿದ ಕರವೇ ಕಾರ್ಯಕರ್ತರು, ನಟ ಕಮಲ್ ಹಾಸನ್ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೆ, ನಟನ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕರವೇ ಜಿಲ್ಲಾಧ್ಯಕ್ಷ ಅಂಗಡಿ ಶಂಕ್ರಪ್ಪ ಡಿ. ಕಗ್ಗಲ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಸಂಘಟನೆಯ ಜಿಲ್ಲಾ ಪ್ರಮುಖರಾದ ಕೆ.ಎಂ. ಶಿವಕುಮಾರ್, ಕೊಳೂರು ಜಿ. ತಿಪ್ಪಾರೆಡ್ಡಿ, ಹುಬ್ಬಳ್ಳಿ ರಾಜು, ಆನಂದಗೌಡ, ಆತ್ಮನಂದಾರೆಡ್ಡಿ, ದೇವರಾಜ, ಕರವೇ ಕುರುಗೋಡು ತಾಲೂಕು ಅಧ್ಯಕ್ಷ ಗೆಣಿಕೆಹಾಳ್ ವೀರೇಶ್, ಬಳ್ಳಾರಿ ತಾಲೂಕು ಅಧ್ಯಕ್ಷ ದಿವಾಕರ್, ಬಾಣಾಪುರ ಪೊಂಪನಗೌಡ, ಬಾವಿ ಶಿವಕುಮಾರ್ ಕುಡತಿನಿ, ಶ್ರೀಧರ ಶೆಟ್ಟಿ ಬೆಳಗಲ್ಲು, ನೆವ್ವಾರ್ ರಾಜಶೇಖರ್, ತಿಪ್ಪೇಶ್ ಬೆಳಗಲ್ಲು, ವಿನೋದ್ ಬೆಳಗಲ್ಲು, ಕುಡುತಿನಿ ಮಂಜು ಹಾಗೂ ನೂರಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ