ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸೋಮವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಚಿವ ಎನ್.ಚಲುವರಾಯಸ್ವಾಮಿ ಅರ್ಪಿಸುವ ಸ್ವರ್ಣಾಂಬಿಕ ಪಿಕ್ಚರ್ಸ್ ಬ್ಯಾನರ್ ಅಡಿ ಬಿ.ಕೆ.ಧನಲಕ್ಷ್ಮಿ ನಿರ್ಮಾಣ, ರಾಜವರ್ಧನ್ ಸಹ ನಿರ್ಮಾಣದ ಕಮಲ್ ಶ್ರೀದೇವಿ ಚಿತ್ರವು ರಾಜ್ಯದ 150ಕ್ಕೂ ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ ಎಂದರು.
ಮನರಂಜನೆಗಾಗಿ ಮಾಡಿರುವ ಈ ಚಿತ್ರದಲ್ಲಿ ಒಳ್ಳೆಯ ಸಂದೇಶವಿದೆ. ಕಮಲ್-ಶ್ರೀದೇವಿ ಪಾತ್ರವನ್ನಿಟ್ಟುಕೊಂಡು ಕಥೆಯನ್ನು ಹೆಣೆಯಲಾಗಿದೆ. ಕುಟುಂಬ ಸಮೇತ ಕುಳಿತು ನೋಡಬಹುದಾದ ಸಿನಮಾದಲ್ಲಿ ಸಂಗೀತಾ ಭಟ್ ನಾಯಕಿಯಾಗಿ ಉತ್ತಮವಾಗಿ ಅಭಿನಯಿಸಿದ್ದಾರೆ. ಈಗಾಗಲೇ ಟೀಸರ್ ಮತ್ತು ಒಂದು ಹಾಡನ್ನು ಬಿಡುಗಡೆ ಮಾಡಲಾಗಿದೆ. ಕನ್ನಡ ಸಿನಿ ಪ್ರಿಯರಲ್ಲಿ ವಿಶೇಷ ಕುತೂಹಲ ಹುಟ್ಟುಹಾಕಿದೆ ಎಂದರು.ಕಿಶೋರ್, ರಮೇಶ್ ಇಂದಿರಾ, ಅಕ್ಷತಾ, ಕಾರ್ತಿಕ್, ಪ್ರತಾಪ್, ಸಂಗೀತಾಭಟ್, ಹರ್ಷಿತಾಭೂಪಯ್ಯ, ಉಮೇಶ್ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ಪ್ರತಿಯೊಂದು ಪಾತ್ರಕ್ಕೂ ಒಳ್ಳೆಯ ಅರ್ಥವಿದೆ ಎಂದರು.
ಸುರಕ್ಷತಾ ಸಾಮಗ್ರಿ ಇಲ್ಲದೆ ಕಾರ್ಮಿಕರಿಂದ ಕೆಲಸ
ಶ್ರೀರಂಗಪಟ್ಟಣ ದಸರಾ ಅಂಗವಾಗಿ ಪಟ್ಟಣದ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಿಸುತ್ತಿರುವ ಕಾರ್ಮಿಕರಿಗೆ ಆಯೋಜಕರು, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಸುರಕ್ಷತಾ ಸಾಮಗ್ರಿ ನೀಡದೆ ಕೆಲಸ ಮಾಡಿಸಿಕೊಳ್ಳುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಈ ಜರ್ಮನ್ ಟೆಂಟ್ ಅಳವಡಿಕೆಯಲ್ಲಿ ಹೊರ ರಾಜ್ಯದ ಕಾರ್ಮಿಕರು ತೊಡಗಿದ್ದಾರೆ. ಇವರಿಗೆ ಆಯೋಜಕರಾಗಲೀ ಅಥವಾ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಾಗಲೀ ಕನಿಷ್ಠ ಹೆಲ್ಮೆಟ್, ಸೇಪ್ಟಿ ಬೆಲ್ಟ್ ಸೇರಿದಂತೆ ಯಾವುದೇ ಸುರಕ್ಷತಾ ಸಾಮಗ್ರಿಗನ್ನು ನೀಡಿಲ್ಲ. ಒಂದು ವೇಳೆ ಅನಾಹುತ ಸಂಭವಿಸಿ ಸಾವು ನೋವಾದರೆ ಯಾವು ಹೊಣೆ ಎಂಬ ಚರ್ಚೆಗಳು ಸಾರ್ವಜನಿಕ ವಲಯಗಳಲ್ಲಿ ಕೇಳಿಬರುತಿದೆ.